ಪಂಜಾಬ್ ನಲ್ಲಿ ಮತ್ತೆ ರಾತ್ರಿ ಕರ್ಫ್ಯೂ ವಿಸ್ತರಣೆ
ಚಂಡೀಗಢ, ಡಿಸೆಂಬರ್ 11: ಪಂಜಾಬ್ ನಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯು ನಿರಂತರವಾಗಿ ಏರುತ್ತಿರುವ ಕಾರಣ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ರಾತ್ರಿ ಕರ್ಫ್ಯೂವನ್ನು ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಜನವರಿ 1, 2021ವರೆಗೂ ರಾತ್ರಿ ಕರ್ಫ್ಯೂ ವಿಸ್ತರಿಸಿದ್ದು, ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ಮುನ್ನ ಡಿಸೆಂಬರ್ 1ರಿಂದ ಡಿ.15ರವರೆಗೂ ಕರ್ಫ್ಯೂ ವಿಧಿಸಲಾಗಿದ್ದು, ಈ ತಿಂಗಳ ಕೊನೆಯವರೆಗೆ ನಿಷೇಧ ಮುಂದುವರೆದಿದೆ. ಜೊತೆಗೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಜನರ ಓಡಾಟದ ಮೇಲೂ ನಿಗಾ ಇಡಲಾಗಿದೆ.
ಈ ಕುರಿತು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಲು ರಾಜ್ಯದ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಲ್ಲೂ ಮದುವೆ ಮನೆಗಳಲ್ಲಿ ನಿಯಮಗಳ ಉಲ್ಲಂಘನೆ ಕುರಿತು ನಿಗಾ ಇಡಲು ಸೂಚಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಯ ಪ್ರಕರಣಗಳು ಮಿತಿ ಮೀರಿದ್ದು, ಸಿಎಂ ಅಮರಿಂದರ್ ಸಿಂಗ್, ಡಿಜಿಪಿ ದಿನಕರ್ ಗುಪ್ತಾ ಅವರಿಗೆ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದ್ದಾರೆ.

ಸದ್ಯಕ್ಕೆ ಮದುವೆ ಸಮಾರಂಭಕ್ಕೆ ಒಳಾಂಗಣದಲ್ಲಿ 100 ಮಂದಿಗೆ ಹಾಗೂ ಹೊರಾಂಗಣದಲ್ಲಿ 250 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ ದಂಡವನ್ನೂ ಹಾಕಲಾಗುತ್ತಿದೆ.
ಶುಕ್ರವಾರ ಉನ್ನತ ಮಟ್ಟದ ಕೋವಿಡ್ ವಿಶ್ಲೇಷಣಾ ಸಭೆಯನ್ನು ಹಮ್ಮಿಕೊಂಡಿದ್ದು, ಹೋಂ ಐಸೊಲೇಷನ್ ನಲ್ಲಿರುವ ವ್ಯಕ್ತಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿರುವುದಾಗಿ ಆರೋಗ್ಯ ಕಾರ್ಯದರ್ಶಿ ಹುಸಾನ್ ಲಾಲ್ ತಿಳಿಸಿದ್ದಾರೆ. ಕಳೆದ ಮೂರು ವಾರಗಳಿಂದ ಪಂಜಾಬ್ ನಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಆದರೂ ಮರಣ ಪ್ರಮಾಣ ಆತಂಕ ತಂದಿದೆ ಎಂದು ಹೇಳಿದ್ದಾರೆ.
ಪ್ರತಿನಿತ್ಯ 30000 ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲು ಸಿಎಂ ಸೂಚಿಸಿದ್ದು, ದೆಹಲಿಯ ಪ್ರತಿಭಟನೆ ಮುಗಿಸಿ ವಾಪಸ್ಸಾಗುತ್ತಿರುವ ರೈತರನ್ನೂ ಪರೀಕ್ಷೆಗೆ ಒಳಪಡಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications