ಪಂಜಾಬ್ ಶಾಸಕರಿಗೆ ಕೇವಲ ಒಂದು ಪಿಂಚಣಿ: ಸಿಎಂ ಘೋಷಣೆ
ಚಂಡೀಗಢ, ಮಾರ್ಚ್ 25: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎಲ್ಲಾ ಶಾಸಕರಿಗೆ ಕೇವಲ ಒಂದು ಪಿಂಚಣಿ ಮಾತ್ರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಶಾಸಕರ ಕುಟುಂಬ ಪಿಂಚಣಿಯನ್ನೂ ಕೂಡಾ ಕಡಿತಗೊಳಿಸಿದ್ದಾರೆ. ಎಷ್ಟು ಬಾರಿ ಗೆದ್ದರೂ ಕೂಡಾ ಒಂದೇ ಪಿಂಚಣಿ ಎಂದು ಕೂಡಾ ಸ್ಪಷ್ಟಪಡಿಸಿದ್ದಾರೆ.
ಶಾಸಕರು ಮತ್ತು ಮಾಜಿ ಶಾಸಕರು ಎಷ್ಟು ಬಾರಿ ಗೆದ್ದರೂ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ. ಇನ್ನು ಶಾಸಕರ ಕುಟುಂಬಗಳಿಗೆ ನೀಡುವ ಭತ್ಯೆಯಲ್ಲಿಯೂ ಕಡಿತಗೊಳಿಸಲಾಗುವುದು ಎಂದು ಸಿಎಂ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಹಲವು ಶಾಸಕರು ವಿಧಾನಸಭೆಯಲ್ಲಿ ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸುವ ಪ್ರತಿ ಅವಧಿಗೆ ಬಹು ಪಿಂಚಣಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿ ಕಡಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಎಷ್ಟು ಬಾರಿ ಆಯ್ಕೆಯಾದರೂ ಒಂದೇ ಪಿಂಚಣಿ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದರು.

ಪಿಂಚಣಿ ಹೆಸರಲ್ಲಿ ಶಾಸಕರಿಗೆ ಲಕ್ಷಾಂತರ ಹಣ..!
"ರಾಜಕೀಯ ವಲಯದ ರಾಜಕಾರಣಿಗಳು ತಮ್ಮ ಸೇವೆ ಮಾಡುವ ಹೆಸರಿನಲ್ಲಿ ಜನರಿಂದ ಮತ ಕೇಳಲು ಕೈ ಜೋಡಿಸಿ ಜನರ ಬಳಿಗೆ ಹೋಗುತ್ತಾರೆ. ಆದರೆ ಮೂರು, ಐದು ಅಥವಾ ಆರು ಅವಧಿಗೆ ಶಾಸಕರಾಗಿ ಆಯ್ಕೆಯಾದವರು ಪಿಂಚಣಿ ಹೆಸರಿನಲ್ಲಿ ಲಕ್ಷಾಂತರ ಹಣವನ್ನು ಪಡೆಯುತ್ತಿದ್ದಾರೆ. ಅದನ್ನು ನಾವು ಆಲೋಚನೆ ಮಾಡಿದರೆಯೇ ನಮಗೆ ಆಘಾತವಾಗುತ್ತದೆ. ಅವರು ವಿಧಾನ ಸಭೆಗೂ ಬರುವುದಿಲ್ಲ," ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿವರಿಸಿದರು.
"ಶಾಸಕರು ಹಲವಾರು ಬಾರಿ ಶಾಸಕರಾಗಿ ಆಯ್ಕೆಯಾದ ನೆಪದಲ್ಲಿ 3.50 ಲಕ್ಷದಿಂದ 5.25 ಲಕ್ಷದವರೆಗೆ ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ಈ ರಾಜಕಾರಣಿಗಳಲ್ಲಿ ಕೆಲವರು ಸಂಸತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ಪಿಂಚಣಿಯನ್ನೂ ಪಡೆಯುತ್ತಾರೆ," ಎಂದರು.
Koo AppToday we have taken another big decision. Changes will be made in the pension formula of MLAs in Punjab. Now MLAs will get only one pension. Thousands of crores of rupees spent on the pension of MLAs will now be used for the betterment of the people of Punjab. - Bhagwant Mann (@bhagwantmann) 25 Mar 2022
"ಒಬ್ಬ ಶಾಸಕರಿಗೆ ಒಂದು ಪಿಂಚಣಿ" ಬೇಡಿಕೆ
"ಒಬ್ಬ ಶಾಸಕರಿಗೆ ಒಂದು ಪಿಂಚಣಿ" ಎಂಬ ಬೇಡಿಕೆಯನ್ನು ಆಮ್ ಆದ್ಮಿ ಪಕ್ಷವು (ಎಎಪಿ) ಕಳೆದ ವಿಧಾನಸಭೆಯಲ್ಲಿ ಪಕ್ಷ ವಿರೋಧ ಪಕ್ಷದಲ್ಲಿದ್ದಾಗ ಕೂಡ ಮಾಡಿತ್ತು. ಒಂದು ಅಧಿಕಾರವಧಿಯಲ್ಲಿ ಶಾಸಕರು ಸುಮಾರು 75,150 ಪಿಂಚಣಿ ರೂಪದಲ್ಲಿ ಪಡೆಯುತ್ತಾರೆ. ಶಾಸಕರು ಸೇವೆ ಸಲ್ಲಿಸುವ ಪ್ರತಿ ಅವಧಿಯ ಬಳಿಕ ಪಂಜಾಬ್ನ ಶಾಸಕರಿಗೆ ಪಿಂಚಣಿ ಮೊತ್ತದ ಹೆಚ್ಚುವರಿ 66 ಪ್ರತಿಶತವನ್ನು ನೀಡಲಾಗುತ್ತದೆ.
ವಿವಿಧ ಮಾಧ್ಯಮಗಳ ವರದಿಗಳ ಪ್ರಕಾರ, ಐದು ಬಾರಿ ಶಾಸಕರಾಗಿರುವ ಮಾಜಿ ಸಿಎಂ ರಾಜಿಂದರ್ ಕೌರ್ ಭಟ್ಟಾಲ್ ಅವರು ತಿಂಗಳಿಗೆ ರೂ 3,23,145 ಪಿಂಚಣಿ ಪಡೆಯುತ್ತಾರೆ. (ಒಂದು ಅವಧಿಗೆ ರೂ 75,150 ಮತ್ತು ಪ್ರತಿ ಅವಧಿಯ ನಂತರ ಶೇ 66ಹೆಚ್ಚಳ). ಅದೇ ರೀತಿ, ಕಾಂಗ್ರೆಸ್ ನಾಯಕ ಲಾಲ್ ಸಿಂಗ್ ಮತ್ತು ಮಾಜಿ ಸಚಿವ ಸರ್ವಾನ್ ಸಿಂಗ್ ಫಿಲ್ಲೌರ್ ತಿಂಗಳಿಗೆ 3.23 ಲಕ್ಷ ರೂಪಾಯಿಗಳನ್ನು ಪಿಂಚಣಿಯಾಗಿ ಪಡೆಯುತ್ತಾರೆ.
Recommended Video
ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಪ್ರಾರಂಭ
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬುಧವಾರ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದ್ದಾರೆ. ಈ ಸಹಾಯವಾಣಿಯು ಲಂಚ ಕೇಳುವ ಅಥವಾ ಇತರ ದುಷ್ಕೃತ್ಯಗಳಲ್ಲಿ ತೊಡಗಿರುವ ಅಧಿಕಾರಿಗಳ ವೀಡಿಯೊಗಳನ್ನು ಅಪ್ಲೋಡ್ ಮಾಡಲು ಜನರಿಗೆ ಅನುವು ಮಾಡಿಕೊಡುತ್ತದೆ. ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಸಂಖ್ಯೆ 9501200200 ಅನ್ನು ಆರಂಭ ಮಾಡಿದ್ದಾರೆ. ಇದನ್ನು "ಭ್ರಷ್ಟಾಚಾರ ವಿರೋಧಿ ಕ್ರಮ" ಎಂದು ಕರೆದಿದ್ದಾರೆ. (ಒನ್ಇಂಡಿಯಾ ಸುದ್ದಿ)
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications