Get Updates
Get notified of breaking news, exclusive insights, and must-see stories!

ಪ್ರಧಾನಿ ಮೋದಿಯ ಹೆಲಿಕಾಪ್ಟರ್ ಸರ್ವಋತು, ಹಾರಲು ಆಯ್ಕೆ: ಭದ್ರತಾ ಲೋಪ: ಪಂಜಾಬ್ ಸರ್ಕಾರ

ಚಂಡಿಗಡ ಜನವರಿ 07: ದೇಶದ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನಲ್ಲಿ 20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿದ್ದರು. ಇದನ್ನು ಪಂಜಾಬ್ ಸರ್ಕಾರದ ಭದ್ರತೆಯ ಲೋಪ ಎಂದು ಬಿಜೆಪಿ ಆರೋಪಿಸಿದೆ. ಆದರೆ ಈ ಆರೋಪವನ್ನು ಪಂಜಾಬ್ ಸರ್ಕಾರ ತಳ್ಳಿ ಹಾಕಿದೆ. ಪ್ರಧಾನಿಯವರ ಹೆಲಿಕಾಪ್ಟರ್ ಎಲ್ಲಾ ಹವಾಮಾನದಲ್ಲೂ ಬಳಸಬಹುದಾದ ವಿಮಾನವಾಗಿದೆ. ಆದರೆ ಅದನ್ನು ಬಳಸದಿರಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಪಂಜಾಬ್ ಸರ್ಕಾರ ಹೇಳಿಕೊಂಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಪ್ರಧಾನಿ ಮೋದಿಯವರ ರಾಜ್ಯ ಭೇಟಿಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆಯ ಆರೋಪಗಳನ್ನು ಪಂಜಾಬ್ ಸರ್ಕಾರ ನಿರಾಕರಿಸಿದೆ. 'ಪ್ರಧಾನಿಯವರ ಹೆಲಿಕಾಪ್ಟರ್ ಎಲ್ಲಾ ಹವಾಮಾನದಲ್ಲಿ ಬಳಸಬಹುದಾದ ಚಾಪರ್ ಆಗಿದೆ. ಆದರೆ ಅದಲ್ಲಿ ಹೋಗದಿರಲು ನಿರ್ಧರಿಸಲಾಗಿದೆ. ಇದು ಗುಡ್ಡಗಾಡು ಪ್ರದೇಶವೂ ಅಲ್ಲ' ಎಂದು ಮೂಲಗಳು ತಿಳಿಸಿವೆ.

ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಟಿಂಡಾದಿಂದ ಫಿರೋಜ್‌ಪುರಕ್ಕೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ತೆರಳಬೇಕಿತ್ತು. ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಪ್ರಧಾನಿ ಮೋದಿ ಅವರು ಹೆಲಿಕಾಪ್ಟರ್ ಬದಲಿಗೆ ರಸ್ತೆ ಮೂಲಕ ಸಾರ್ವಜನಿಕ ಸಭೆ ನಡೆಯುವ ಸ್ಥಳಕ್ಕೆ ತೆರಳಲು ನಿರ್ಧರಿಸಲಾಯಿತು ಎಂದು ಹೇಳಲಾಗುತ್ತಿದೆ. ಈ ಹೇಳಿಕೆಯನ್ನು ಪಂಜಾಬ್ ಸರ್ಕಾರ ಅಲ್ಲಗಳಿದಿದೆ. ಈ ಘಟನೆಯು ಪಂಜಾಬ್‌ನಲ್ಲಿನ ಆಡಳಿತಾರೂಢ ಕಾಂಗ್ರೆಸ್, ಪ್ರಧಾನ ಮಂತ್ರಿಯನ್ನು "ದೈಹಿಕವಾಗಿ ಹಾನಿ ಮಾಡಲು ಪ್ರಯತ್ನಿಸಿದೆ" ಎಂದು ಆರೋಪಿಸಿ ಬಿಜೆಪಿ ಪ್ರಮುಖ ರಾಜಕೀಯ ಗದ್ದಲವನ್ನು ಉಂಟುಮಾಡಿತು. ಇತರ ಪಕ್ಷಗಳು ಸಹ ಕಾನೂನು ಮತ್ತು ಸುವ್ಯವಸ್ಥೆಯ ವಿಷಯದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದಾಳಿ ನಡೆಸಿವೆ.

'ಭದ್ರತಾ ಲೋಪವಿಲ್ಲ'ಚನ್ನಿ

ಆದರೆ ಯಾವುದೇ ಭದ್ರತಾ ಲೋಪವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಹೇಳಿದ್ದಾರೆ. ಫಿರೋಜ್‌ಪುರ ರ್ಯಾಲಿ ಸ್ಥಳದಲ್ಲಿ ಜನಸಂದಣಿಯಿಂದಾಗಿ ಪ್ರಧಾನಿ ಮೋದಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇಲ್ಲಿ ರಾಜ್ಯವನ್ನು ದೂಷಿಸಲು ಪಿತೂರಿ ನಡೆದಿದೆ ಎಂದು ಹೇಳಿದ್ದಾರೆ. ಗೃಹ ಸಚಿವಾಲಯದ ಆದೇಶದ ನಂತರ, ಪಂಜಾಬ್ ಸರ್ಕಾರವು ಶುಕ್ರವಾರ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದು, ಈ ವಿಷಯದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದೆ. ಗೃಹ ಸಚಿವಾಲಯವು ಕೂಡ ಒಂದು ಸಮಿತಿಯನ್ನು ರಚಿಸಿದ್ದು, ಇದು ಭದ್ರತಾ ವ್ಯವಸ್ಥೆಗಳಲ್ಲಿ "ಗಂಭೀರ ಲೋಪ" ಗಳ ಬಗ್ಗೆ ತನಿಖೆ ನಡೆಸುತ್ತದೆ.

PM Modi’s chopper is all-weather, chose not to fly: Punjab govt on security breach

ಏನಿದು ಪ್ರಕರಣ?

ಬುಧುವಾರ ನರೇಂದ್ರ ಮೋದಿ ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಮಾವೇಶದಲ್ಲಿ ಭಾಗಿಯಾಗಲು ತೆರಳಿದ್ದರು. ಈ ವೇಳೆ ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿದರು. ಹೀಗಾಗಿ ಪ್ರಧಾನಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಜೊತೆಗೆ ಮೋದಿ ಸಮಾವೇಶ ರದ್ದು ಮಾಡಿದ್ದಾರೆ ಎಂದು ಗೃಹ ಸಚಿವಾಲಯ ಹೇಳಿದೆ. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ಲೈಓವರ್‌ನಲ್ಲಿ ಸಿಲುಕಿದ್ದರು, ಬಳಿಕ ಬತಿಂಡಾದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಏರ್‌ಪೋರ್ಟ್‌ಗೆ ತೆರಳಿದರು. ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇರುವುದೇ ಈ ವೈಫಲ್ಯಕ್ಕೆ ಕಾರಣ ಎಂದು ಗೃಹ ಸಚಿವಾಲಯ ತಿಳಿಸಿದೆ.

PM Modi’s chopper is all-weather, chose not to fly: Punjab govt on security breach

ಹೆಲಿಕಾಪ್ಟರ್‌ನಲ್ಲಿ ಆಗಮಿಸಬೇಕಿದ್ದ ಮೋದಿ

ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳದಲ್ಲಿ ಹೆಲಿಕಾಪ್ಟರ್‌ನಲ್ಲಿ ಮೋದಿ ಆಗಮಿಸಬೇಕಿತ್ತು. ಆದರೆ ವಾತಾವರಣ ಸರಿ ಇಲ್ಲದ ಕಾರಣ ಅನಿವಾರ್ಯವಾಗಿ ಕಾರಿನಲ್ಲಿ ಬರಬೇಕಾಯಿತು ಎಂದು ಹೇಳಲಾಗುತ್ತಿದೆ. ಮೆಮೋರಿಯಲ್‌ನಿಂದ 30 ಕಿ.ಮೀ ದೂರದಲ್ಲಿ ಫ್ಲೈಓವರ್‌ ಮೇಲೆ ಕಾನ್‌ವಾಯ್ ಬರುತ್ತಿದ್ದಂತೆ ಪ್ರತಿಭಟನಾಕಾರರು ಸುತ್ತುವರೆದರು. ಮೋದಿ ಬರುವ ಕುರಿತು ಪಂಜಾಬ್ ಸರ್ಕಾರಕ್ಕೆ ಮೊದಲೇ ತಿಳಿಸಲಾಗಿತ್ತು. ಆದರೂ ಈ ರೀತಿ ಘಟನೆ ನಡೆದಿದೆ, ಈ ಕುರಿತು ಗೃಹ ಸಚಿವಾಲಯ ಪಂಜಾಬ್ ಸರ್ಕಾರದ ಬಳಿ ವರದಿ ಕೇಳಿದೆ. ಹವಾಮಾನ ಸ್ಥಿತಿ ಸುಧಾರಿಸದ ಕಾರಣ, ಅವರು ರಸ್ತೆ ಮೂಲಕವೇ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ನಿರ್ಧರಿಸಿದರು, ಅದಕ್ಕೆ ಸುಮಾರು 2 ಗಂಟೆಗೂ ಅಧಿಕ ಸಮಯ ಹಿಡಿಯುತ್ತಿತ್ತು.ಪಂಜಾಬ್ ಪೊಲೀಸ್ ಡಿಜಿಪಿ ಅವರಿಂದ ಅಗತ್ಯ ಭದ್ರತಾ ಏರ್ಪಾಡುಗಳನ್ನು ಖಾತ್ರಿಪಡಿಸಿಕೊಂಡ ನಂತರ ಅವರು ರಸ್ತೆ ಮೂಲಕ ಪ್ರಯಾಣ ಆರಂಭಿಸಿದರು. ಆದರೆ ಪ್ರಮುಖ ಭದ್ರತಾ ಲೋಪದಲ್ಲಿ, ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿಯವರ ಅಶ್ವದಳವು ಫಿರೋಜ್‌ಪುರಕ್ಕೆ ಹೋಗುವ ಮಾರ್ಗದಲ್ಲಿ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿತ್ತು. ಇದರಿಂದಾಗಿ ಯಾವುದೇ ಕಾರ್ಯಕ್ರಮಗಳಿಗೆ ಹಾಜರಾಗದೆ ಪಂಜಾಬ್‌ನಿಂದ ಮೋದಿ ವಾಪಸಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+