ಪಂಜಾಬ್ ಚುನಾವಣೆ ಹೊಸ್ತಿಲಿನಲ್ಲೇ ಗ್ರಾಹಕರಿಗೆ ಬಂಪರ್: ವಿದ್ಯುತ್ ಬೆಲೆಯಲ್ಲಿ 3 ರೂ. ಕಡಿತ
ಚಂಡೀಗಢ, ನವೆಂಬರ್ 1: ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ರಾಜ್ಯದ ಜನರಿಗೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಛನ್ನಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಒಂದು ಯೂನಿಟ್ ವಿದ್ಯುತ್ ದರದ ಮೇಲೆ 3 ರೂಪಾಯಿ ಕಡಿತಗೊಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆಗೆ ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಛನ್ನಿ ತಿರುಗೇಟು ನೀಡಿದ್ದಾರೆ. ರಾಜ್ಯದ ಜನರಿಗೆ ಕಡಿಮೆ ದರದಲ್ಲಿ ವಿದ್ಯುತ್ ನೀಡಬೇಕೇ ವಿನಃ ಉಚಿತವಾಗಿ ನೀಡುವುದಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಪಂಜಾಬಿನಲ್ಲಿ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಉಚಿತವಾಗಿ ವಿದ್ಯುತ್ ಸೇವೆ ಒದಗಿಸಲಾಗುವುದು ಎಂದು ಕೇಜ್ರಿವಾಲ್ ಘೋಷಿಸಿದ್ದರು.
ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಛನ್ನಿ, ರಾಜ್ಯದ ಶೇ.95ರಷ್ಟು ಜನರಿಗೆ ಒದಗಿಸುವ ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್ ಮೇಲೆ 3 ರೂಪಾಯಿ ಕಡಿತಗೊಳಿಸಲಾಗುವುದು ಎಂದು ಹೇಳಿದರು.

ಪಂಜಾಬ್ ವಿಧಾನಸಭೆ ಚುನಾವಣೆ ಮೇಲೆ ಕಣ್ಣು:
ಮುಂಬರುವ 2022ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್, ಬಿಜೆಪಿ, ಶಿರೋಮಣಿ ಅಕಾಲಿ ದಳ ಹಾಗೂ ಆಪ್ ಆದ್ಮಿ ಪಕ್ಷ ಸೇರಿದಂತೆ ಬಹುತೇಕ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.
ವಿದ್ಯುತ್ ಶುಲ್ಕವೇ ಚುನಾವಣಾ ಅಸ್ತ್ರ:
ಪಂಜಾಬಿಗರಿಗೆ ವಿದ್ಯುತ್ ಶುಲ್ಕ ಎಂಬುದು ಬಹುಮುಖ್ಯ ಎನಿಸುತ್ತದೆ. ಹೀಗಾಗಿ ವಿದ್ಯುತ್ ಶುಲ್ಕ ಕಡಿತ ಹಾಗೂ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ನಾಯಕರು ಚರ್ಚೆ ನಡೆಸುತ್ತಿದ್ದರು. ಇದರ ಮಧ್ಯೆ ರಾಜ್ಯದಲ್ಲಿ ವಿದ್ಯುತ್ ಶುಲ್ಕವು ಪ್ರಮುಖ ಚುನಾವಣಾ ಅಸ್ತ್ರವಾಗಿದ್ದು, ಇದನ್ನು ಮನಗಂಡ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಪ್ರತಿವರ್ಷ ವಿದ್ಯುತ್ ಸಬ್ಸಿಡಿಗಾಗಿ 3,316 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತದೆ ಎಂದು ಛನ್ನಿ ಹೇಳಿದ್ದಾರೆ.
"ಪಂಜಾಬ್ ಈಗಾಗಲೇ ವಿದ್ಯುತ್ ಸಬ್ಸಿಡಿಗಾಗಿ 10,628 ಕೋಟಿಗಳನ್ನು ಭರಿಸುತ್ತದೆ. ಈಗ ಒಟ್ಟು ಸಬ್ಸಿಡಿಗೆ 14,000 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತದೆ. ಇದು ದೆಹಲಿಯು ಖರ್ಚು ಮಾಡುವುದಕ್ಕಿಂತ ಏಳು ಪಟ್ಟು ಹೆಚ್ಚಾಗಿದೆ. ದೆಹಲಿ ಕೇವಲ 2,200 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ" ಎಂದು ಛನ್ನಿ ಹೇಳಿದ್ದಾರೆ.
ಪ್ರತಿ ಯೂನಿಟ್ ಬೆಲೆ 1.19 ರೂಪಾಯಿ:
ಭಾನುವಾರವರೆಗೂ ಪಂಜಾಬ್ ನಲ್ಲಿ 100 ಯೂನಿಟ್ ವರೆಗೆ ಪ್ರತಿ ಯೂನಿಟ್ ವಿದ್ಯುತ್ ಬೆಲೆ 4.19 ರೂಪಾಯಿ ಆಗಿತ್ತು. ಆದರೆ ಸೋಮವಾರದಿಂದಲೇ ಹೊಸ ದರ ಜಾರಿಗೆ ಬರಲಿದ್ದು, ಪ್ರತಿ ಯೂನಿಟ್ ಮೇಲೆ 3 ರೂಪಾಯಿ ಕಡಿತಗೊಳಿಸಲಾಗಿದೆ. ಈಗ ರಾಜ್ಯದಲ್ಲಿ ಪ್ರತಿ ಯೂನಿಟ್ ಬೆಲೆ 1.19 ರೂಪಾಯಿ ಆಗಿದೆ. ಅದೇ ರೀತಿ 100 ರಿಂದ 300 ಯೂನಿಟ್ ವರೆಗೆ ಪ್ರತಿ ಯೂನಿಟ್ ಮೇಲೆ ಮೊದಲು 7 ರೂಪಾಯಿ ಚಾರ್ಜ್ ಮಾಡಲಾಗುತ್ತಿದ್ದು, ಈಗ ಅದರ ಬೆಲೆ 4 ರೂಪಾಯಿ ಆಗುತ್ತದೆ. 300 ಯೂನಿಟ್ ಗಿಂತ ಹೆಚ್ಚು ಬಳಕೆಯಾದ ಪ್ರತಿ ಯೂನಿಟ್ ಮೇಲೆ 8.76 ರೂಪಾಯಿ ವಿಧಿಸಲಾಗುತ್ತಿದ್ದು, ಅದರ ಬೆಲೆಯು ಈಗ 5.76 ರೂಪಾಯಿಗೆ ಇಳಿಕೆಯಾಗಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ:
ವಿದ್ಯುತ್ ಬಿಲ್ ಕಡಿತಗೊಳಿಸಿರುವುದರ ಜೊತೆಗೆ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಚರೀಂಜಿತ್ ಸಿಂಗ್ ಛನ್ನಿ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.11ರಷ್ಟು ಹೆಚ್ಚಿಸಲಾಗಿದ್ದು, ಅದಕ್ಕಾಗಿ 440 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications