ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಿದ ನವಜೋತ್ ಸಿಂಗ್ ಸಿದ್ದು, ವ್ಯಾಪಕ ಆಕ್ರೋಶ
ಚಂಡೀಗಢ, ಫೆ 15: ಪುಲ್ವಾಮಾದಲ್ಲಿ ನಡೆದ ಉಗ್ರಕೃತ್ಯಕ್ಕೆ ಸಂಬಂಧಪಟ್ಟಂತೆ, ಪಂಜಾಬ್ ಅಸೆಂಬ್ಲಿ ಆವರಣದಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿದ್ದು, ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿಗೆ, ಪಾಕಿಸ್ತಾನವನ್ನು ದೂಷಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ, ಭಯೋತ್ಪಾದನಾ ಕೃತ್ಯಕ್ಕೆ ಕುಮ್ಮುಕ್ಕು ಸಿಗುತ್ತಿರುವುದೇ ಪಾಕಿಸ್ತಾನದಲ್ಲಿ, ಮೊದಲು ಅವರಿಗೆ ತಕ್ಕ ಉತ್ತರವನ್ನು ನೀಡಬೇಕಿದೆ ಎಂದು ಹೇಳಿದ್ದರು. ಆದರೆ, ಅವರದೇ ಸರಕಾರದ ಮಂತ್ರಿ ನವಜೋತ್ ಸಿದ್ದು ವ್ಯತಿರಿಕ್ತ ಹೇಳಿಕೆಯನ್ನು ನೀಡಿ, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಪುಲ್ವಾಮಾದಲ್ಲಿ ನಡೆದ ಘಟನೆಯನ್ನು ಕಟುವಾಗಿ ಖಂಡಿಸುತ್ತೇನೆ, ಇದು ಹೇಡಿಗಳು ಮಾಡುವ ಕೆಲಸ. ಉಗ್ರಕೃತ್ಯಕ್ಕೆ ಶಾಸ್ವತ ಪರಿಹಾರ ಸಿಗಬೇಕಾಗಿದೆ. ಇದು ಸಾಧ್ಯವಾಗುವುದು ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸುವುದರಿಂದ ಮಾತ್ರ ಸಾಧ್ಯ ಎಂದು ಟ್ವೀಟ್ ಮಾಡಿದ್ದರು.

ಇದಾದ ನಂತರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಯಾರೋ ಮಾಡಿದ ಕೃತ್ಯಕ್ಕೆ ಇಡೀ ದೇಶವನ್ನು (ಪಾಕಿಸ್ತಾನ) ದೂಷಿಸುವುದು ತಪ್ಪು. ಇದಕ್ಕೆ ಸಂಬಂಧಪಟ್ಟ ಸಂಘಟನೆಯನ್ನೋ ಅಥವಾ ವ್ಯಕ್ತಿಯನ್ನು ದೂಷಿಸಬೇಕು ಎಂದು ಪರೋಕ್ಷವಾಗಿ, ಗುರುವಾರದ ಉಗ್ರಕೃತ್ಯದಲ್ಲಿ ಪಾಕ್ ಕೈವಾಡವಿಲ್ಲ ಎಂದು ಸಿದ್ದು ಹೇಳಿದ್ದಾರೆ.
ಸಿದ್ದು ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅವರು ಭಾಗವಹಿಸುವ ಕಪಿಲ್ ಶರ್ಮಾ ಶೋನಿಂದ ಅವರನ್ನು ಹೊರಹಾಕಿ ಎಂದು ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಇಮ್ರಾನ್ ಖಾನ್, ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮದಲ್ಲಿ ನವಜೋತ್ ಸಿಂಗ್ ಸಿದ್ದು ಭಾಗವಹಿಸಿ, ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications