ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮ್ಮಿಂದ ಆಗದಿದ್ದರೆ ಉಗ್ರನನ್ನು ನಾವೇ ಹಿಡಿಯುತ್ತೇವೆ: ಪಾಕ್‌ಗೆ ಅಮರಿಂದರ್ ತಪರಾಕಿ

|
Google Oneindia Kannada News

ಚಂಡೀಗಢ, ಫೆಬ್ರವರಿ 19: ಅತ್ತ ಪಂಜಾಬಿನ ಕಾಂಗ್ರೆಸ್ ಸರ್ಕಾರದ ಸಚಿವ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಪುಲ್ವಾಮಾ ದಾಳಿ ಪ್ರಕರಣದಲ್ಲಿ ಪಾಕಿಸ್ತಾನದ ಪರ ಬ್ಯಾಟಿಂಗ್ ನಡೆಸಿದ್ದರೆ, ಇನ್ನೊಂದೆಡೆ ಅವರ 'ಬಾಸ್' ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪಾಕಿಸ್ತಾನದ ವಿರುದ್ಧ ಹರಿಹಾಯ್ದಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇದೆ ಎಂಬ ಆರೋಪಕ್ಕೆ ಸಾಕ್ಷ್ಯ ನೀಡಿ ಎಂದು ಭಾರತವನ್ನು ಆಗ್ರಹಿಸಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಮರಿಂದರ್ ಸಿಂಗ್ ತಪರಾಕಿ ನೀಡಿದ್ದಾರೆ.

ನಾವೇ ದಾಳಿ ಮಾಡಿದ್ದು ಅನ್ನೋದಕ್ಕೆ ಸಾಕ್ಷ್ಯ ಕೊಡಿ ಎಂದ ಪಾಕ್!ನಾವೇ ದಾಳಿ ಮಾಡಿದ್ದು ಅನ್ನೋದಕ್ಕೆ ಸಾಕ್ಷ್ಯ ಕೊಡಿ ಎಂದ ಪಾಕ್!

ದಾಳಿಯ ಸಂಚುಕೋರ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಪಾಕಿಸ್ತಾನದಲ್ಲಿಯೇ ಇದ್ದಾನೆ. ಒಂದು ವೇಳೆ ನಿಮ್ಮ ದೇಶಕ್ಕೆ ಉಗ್ರನನ್ನು ಹಿಡಿಯಲು ಆಗದೆ ಇದ್ದರೆ ನಾವೇ ನಿಮಗೆ ಹಿಡಿದುಕೊಡುತ್ತೇವೆ ಎಂದು ಅಮರಿಂದರ್ ವ್ಯಂಗ್ಯವಾಗಿ ಹೇಳಿದ್ದಾರೆ.

Punjab Chief Minister Amarinder Singh slams Pakistan PM Imran Khan on Pulwama terror attack

'ಮಾನ್ಯ ಇಮ್ರಾನ್ ಖಾನ್, ಬಹವಲ್ಪುರದಲ್ಲಿ ಕುಳಿತು ಐಎಸ್‌ಐ ಸಹಾಯದೊಂದಿಗೆ ದಾಳಿಗಳ ಸಂಚು ರೂಪಿಸುವ ಜೈಶ್ ಮುಖ್ಯಸ್ಥ ಮಸೂದ್ ಅಜರ್ ನಿಮ್ಮ ಬಳಿಯೇ ಇದ್ದಾನೆ. ಆತನನ್ನು ಅಲ್ಲಿಯೇ ನೀವು ಬಂಧಿಸಬಹುದು. ನಿಮ್ಮಿಂದ ಸಾಧ್ಯವಾಗದೆ ಇದ್ದರೆ ನಮಗೆ ತಿಳಿಸಿ. ನಿಮಗಾಗಿ ನಾವೇ ಅದನ್ನು ಮಾಡುತ್ತೇವೆ.

ಇರಲಿ, ಮುಂಬೈ 26/11ರ ದಾಳಿಗೆ ಸಂಬಂಧಿಸಿದಂತೆ ನೀಡಲಾದ ಪುರಾವೆಗಳು ಏನಾದವು? ಇದು ಮಾತುಕತೆಯನ್ನು ಮುರಿತು ನಡೆಯುವ ಸಮಯ' ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಪುಲ್ವಾಮಾ ದಾಳಿ: ಮತ್ತೆ ಮೋದಿ ಸರ್ಕಾರವನ್ನು ಹಳಿದ ಸಿಧುಪುಲ್ವಾಮಾ ದಾಳಿ: ಮತ್ತೆ ಮೋದಿ ಸರ್ಕಾರವನ್ನು ಹಳಿದ ಸಿಧು

ದಾಳಿ ನಡೆದು ಐದು ದಿನಗಳ ಬಳಿಕ ಪ್ರತಿಕ್ರಿಯೆ ನೀಡಿದ್ದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇದೆ ಎನ್ನುವುದಕ್ಕೆ ಸಾಕ್ಷ್ಯ ನೀಡಿ ಎಂದು ಭಾರತಕ್ಕೆ ಸವಾಲು ಹಾಕಿದ್ದರು.

English summary
Punjab Chief Minister Amarinder Singh on Tuesday slams Pakistan PM Imran Khan for his statement on Pulwama terror attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X