ರೈತರ ಪ್ರತಿಭಟನೆಗೆ ಪಂಜಾಬ್ ಸಿಎಂ ಅಮರಿಂದರ್ ಹೊಣೆ: ಹರಿಯಾಣ ಸಿಎಂ ಖಟ್ಟರ್
ಚಂಡೀಗಡ, ನವೆಂಬರ್ 28: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಸಾವಿರಾರು ರೈತರು ಪ್ರತಿಭಟನೆ ನಡೆಸಲು ದೆಹಲಿಗೆ ಮೆರವಣಿಗೆ ತೆರಳುತ್ತಿರುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರೇ ಹೊಣೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಆರೋಪಿಸಿದ್ದಾರೆ. ರೈತರ ಪ್ರತಿಭಟನೆ ಸಂಬಂಧ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಟ್ವಿಟ್ಟರ್ನಲ್ಲಿ ಪರಸ್ಪರ ಕಿತ್ತಾಟ ನಡೆಸಿದ ಬಳಿಕ ಮತ್ತೊಂದು ವಾಕ್ಸಮರದ ಸೂಚನೆ ದೊರೆತಿದೆ.
ಪಂಜಾಬ್ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳೇ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು ಎಂದು ಖಟ್ಟರ್ ಆರೋಪಿಸಿದ್ದಾರೆ. ಜತೆಗೆ ರೈತರ ಮೇಲೆ ಅಶ್ರುವಾಯುಗಳನ್ನು ಸಿಡಿಸಿ, ಅವರನ್ನು ಲಾಠಿಯಿಂದ ಥಳಿಸಿದ ಕಾರಣಕ್ಕೆ ತೀವ್ರ ಟೀಕೆಗೆ ಗುರಿಯಾಗಿರುವ ಹರಿಯಾಣ ಪೊಲೀಸರ ಶ್ರಮವನ್ನು ಖಟ್ಟರ್ ಶ್ಲಾಘಿಸಿದ್ದಾರೆ.
ರೈತರ ಪ್ರತಿಭಟನೆಗೆ ರಾಜಕೀಯ ಪಕ್ಷಗಳ ಬೆಂಬಲವಿದೆ ಎಂದ ಖಟ್ಟರ್, ರೈತರ ಪ್ರತಿಭಟನೆಗೆ ಖಲಿಸ್ತಾನಿ ಸಂಪರ್ಕವಿದೆ ಎಂದು ಆರೋಪಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಖಟ್ಟರ್, 'ಪಂಜಾಬ್ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಹರಿಯಾಣ ರೈತರು ದೂರವೇ ಇದ್ದರು. ಪ್ರತಿರೋಧ ಒಡ್ಡಿದ್ದಕ್ಕಾಗಿ ಹರಿಯಾಣ ರೈತರು ಮತ್ತು ಪೊಲೀಸರಿಗೆ ನಾನು ಧನ್ಯವಾದ ಹೇಳುತ್ತೇನೆ. ಪಂಜಾಬ್ ಮುಖ್ಯಮಂತ್ರಿ ಈ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಈ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದಾರೆ' ಎಂದು ಟೀಕಿಸಿದರು.

ಪಂಜಾಬ್ನಿಂದ ಹರಿಯಾಣ ಮಾರ್ಗವಾಗಿ ದೆಹಲಿಗೆ ಪ್ರಯಾಣಿಸುತ್ತಿದ್ದ ರೈತರನ್ನು ಹರಿಯಾನ ಪೊಲೀಸರು ಬಲಪ್ರಯೋಗದಿಂದ ತಡೆಯಲು ಪ್ರಯತ್ನಿಸಿದಾಗ ಉಂಟಾದ ಘರ್ಷಣೆಗೆ ಸಂಬಂಧಿಸಿದಂತೆ ಖಟ್ಟರ್ ವಿರುದ್ಧ ಅಮರಿಂದರ್ ಸಿಂಗ್ ಹರಿಹಾಯ್ದಿದ್ದರು. ರೈತರು ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತಿರುವಾಗ ಈ ರೀತಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ ಎಂದು ಅವರು ಕಿಡಿಕಾರಿದ್ದರು. ಇದು ಟ್ವಿಟ್ಟರ್ನಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಕಿತ್ತಾಟಕ್ಕೆ ಕಾರಣವಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications