ಮೊಬೈಲ್ ಟವರ್ಗೆ ಹಾನಿ ಮಾಡದಂತೆ ರೈತರಲ್ಲಿ ಪಂಜಾಬ್ ಸಿಎಂ ಮನವಿ
ಚಂಡೀಗಢ, ಡಿಸೆಂಬರ್ 25: ಮೊಬೈಲ್ ಟವರ್ಗೆ ಹಾನಿ ಮಾಡದಂತೆ ಪಂಜಾಬ್ ಮುಖ್ಯಮಂತ್ರಿ ಪ್ರತಿಭಟನಾ ನಿರತ ರೈತರಲ್ಲಿ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್ನ ಪ್ರದೇಶಗಳಲ್ಲಿ ಪ್ರತಿಭಟನಾ ನಿರತ ರೈತರು ಮೊಬೈಲ್ ಟವರ್ಗಳಿಗೆ ಇರುವ ಸಪ್ಲೈ ತೆಗೆದುಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಭಟನಾ ನಿರತ ರೈತರ ಬಳಿ ಮನವಿ ಮಾಡಿದ್ದು, ಯಾವುದೇ ಹಾನಿ ಮಾಡದಂತೆ ಕೇಳಿಕೊಂಡಿದ್ದಾರೆ.
ಕೊರೊನಾ ಸಮಯದಲ್ಲಿ ದೂರವಾಣಿ ಸಂಪರ್ಕ ಇಲ್ಲವಾದರೆ ಸಮಸ್ಯೆಗಳು ಉಲ್ಬಣಿಸುತ್ತದೆ. ಅಲ್ಲದೇ ದೆಹಲಿ ಗಡಿಯಲ್ಲಿ ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ರೈತರ ಹೇಗೆ ಶ್ರದ್ಧೆ ಮತ್ತು ಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೋ ಹಾಗೆಯೇ ನೀವು ಕೂಡ ಶಿಸ್ತು ಕಾಪಾಡಿ ಎಂದು ಹೇಳಿದ್ದಾರೆ.
ಪಂಜಾಬ್ನ ಫಿರೋಜ್ಪುರ, ಮೋಗ ಪ್ರದೇಶಗಳಲ್ಲಿ ರೈತರು ಹಲವು ಮೊಬೈಲ್ ಟವರ್ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಅಲ್ಲದೆ ಟೆಲಿಕಾಂ ಆಪರೇಟರ್ನ್ನು ಗುರಿಯಾಗಿದಿ ಈ ಕೆಲಸ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿದೆ.