Breaking; ಪಂಜಾಬ್ ಸಿಎಂ ಭಗವಂತ್ ಮಾನ್ ವಿವಾಹ, ಸಂಪ್ರದಾಯಗಳು ಆರಂಭ
ಚಂಡೀಗಢ, ಜುಲೈ 07; ಪಂಬಾಬ್ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ವಿವಾಹ ಸಮಾರಂಭ ಚಂಡೀಗಢದಲ್ಲಿ ನಡೆಯುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ಎಎಪಿ ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಚಂಡೀಗಢದಲ್ಲಿರುವ ಭಗವಂತ್ ಮಾನ್ ನಿವಾಸದಲ್ಲಿ ವಿವಾಹದ ಸಂಪ್ರದಾಯಗಳು ಗುರುವಾರ ಆರಂಭವಾಗಿವೆ. ಡಾ. ಗುರುಪ್ರೀತ್ ಕೌರ್ ಜೊತೆ ಭಗವಂತ್ ಮಾನ್ ವಿವಾಹ ನಡೆಯುತ್ತಿದೆ.
ಸರಳವಾಗಿ ವಿವಾಹ ಕಾರ್ಯಕ್ರಮ ನಡೆಯುತ್ತಿದೆ. ಕುಟುಂಬದವರು ಮತ್ತು ಆಪ್ತರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಆರು ವರ್ಷಗಳ ಹಿಂದೆ ವಿಚ್ಛೇಧನ ಪಡೆದಿದ್ದ ಮಾನ್ ಈಗ ಎರಡನೇ ವಿವಾಹವಾಗುತ್ತಿದ್ದಾರೆ.

ಭಗವಂತ್ ಮಾನ್ ಮೊದಲ ಪತ್ನಿ ಅಮೆರಿಕದಲ್ಲಿ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದಾರೆ. ಮಾರ್ಚ್ 16ರಂದು ಭಗವಂತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರ್ಯಕ್ರಮಕ್ಕೆ ಇಬ್ಬರೂ ಮಕ್ಕಳು ಆಗಮಿಸಿದ್ದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕ ರಾಘವ್ ಚಡ್ಡಾ ಸೇರಿದಂತೆ ಹಲವಾರು ಎಎಪಿಯ ನಾಯಕರು ಭಗವಂತ್ ಮಾನ್ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
48 ವರ್ಷದ ಭಗವಂತ್ ಮಾನ್ ಡಾ. ಗುರುಪ್ರೀತ್ ಕೌರ್ ಜೊತೆ ವಿವಾಹವಾಗುತ್ತಿದ್ದಾರೆ. ಸಿಖ್ ಸಂಪ್ರದಾಯದಂತೆ ವಿವಾಹದ ಸಂಪ್ರದಾಯಗಳು ಆರಂಭವಾಗಿವೆ. 2015ರಲ್ಲಿ ಭಗವಂತ್ ಮಾನ್ ಮೊದಲ ಪತ್ನಿಗೆ ವಿಚ್ಛೇಧನ ನೀಡಿದ್ದರು.
32 ವರ್ಷದ ಡಾ. ಗುರುಪ್ರೀತ್ ಕೌರ್ ಹರ್ಯಾಣ ರಾಜ್ಯದ ಕುರಕ್ಷೇತ್ರ ಜಿಲ್ಲೆಯವರು. ತಂದೆ ಇಂದ್ರಜಿತ್ ಸಿಂಗ್ ನಾಥ್ ರೈತರು. ಈ ಹಿಂದೆ ಅವರು ಗ್ರಾಮದ ಸರ್ಪಂಚ್ ಆಗಿ ಕಾರ್ಯ ನಿರ್ವಹಣೆ ಮಾಡಿದ್ದರು.
ಡಾ. ಗುರುಪ್ರೀತ್ ಕೌರ್ 2013ರಲ್ಲಿ ಎಂಬಿಬಿಎಸ್ ಕೋರ್ಸ್ಗೆ ಸೇರಿದ್ದರು. 2018ರಲ್ಲಿ ಕೋರ್ಸ್ ಪೂರ್ಣಗೊಳಿಸಿದ್ದಾರೆ. ಫಿಜಿಷಿಯನ್ ಆಗಿ ಅವರು ಪ್ರಸ್ತುತ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
Chandigarh | Wedding rituals underway of Punjab CM Bhagwant Mann with Dr. Gurpreet Kaur pic.twitter.com/4QjnNsRXtg
— ANI (@ANI) July 7, 2022
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications