ಅಕ್ರಮ ಮರಳುಗಾರಿಕೆಯಲ್ಲಿ ಸೋದರಳಿಯನ ಬಂಧನಕ್ಕೆ : ಚನ್ನಿ ಪ್ರತಿಕ್ರಿಯೆ
ಚಂಡೀಗಢ, ಫೆಬ್ರವರಿ 4: ಅಕ್ರಮ ಮರಳುಗಾರಿಕೆಯಲ್ಲಿ ಸೋದರಳಿಯನ ಬಂಧನಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲೇ, ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾನೂನು ತನ್ನ ಕೆಲಸವನ್ನು ಮಾಡಿದೆ. ಅದಕ್ಕೆ ನಾವು ಯಾವುದೇ ಆಕ್ಷೇಪಣೆ ಮಾಡಲ್ಲ ಎಂದಿದ್ದಾರೆ.
ಅಕ್ರಮ ಮರಳುಗಾರಿಕೆಯಲ್ಲಿ ತನ್ನ ಸೋದರಳಿಯನನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿರುವ ಕುರಿತು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಕಾನೂನು ತನ್ನ ಕೆಲಸವನ್ನು ಮಾಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪಂಜಾಬ್ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಭೋಪೇಂದ್ರ ಸಿಂಗ್ ಹನಿ ಅವರ ನಿವಾಸ ಹಾಗೂ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು.
ಈ ವೇಳೆ 8 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಆಸ್ತಿ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳು, ಮೊಬೈಲ್ ಫೋನ್ಗಳು, 21 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ಮತ್ತು 12 ಲಕ್ಷ ಮೌಲ್ಯದ ರೋಲೆಕ್ಸ್ ವಾಚ್ ವಶಪಡಿಸಿಕೊಳ್ಳಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚನ್ನಿ ಅವರ ಸೋದರಳಿಯನ ಬಂಧನದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ರಾಜಕೀಯ ಒತ್ತಡ ಸೃಷ್ಟಿಸಲು ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಲೋಕ ಕಾಂಗ್ರೆಸ್ ಸಂಸ್ಥಾಪಕ ಕ್ಯಾಪ್ಟನ್ ಅಮರೀಂದರ್ ಸಿಂಗ್, ತನಿಖಾ ಸಂಸ್ಥೆ ತನ್ನ ಕೆಲಸವನ್ನು ಮಾಡಿದೆ. ಇದಕ್ಕೆ ರಾಜಕೀಯ ಪಕ್ಷವನ್ನು ಏಕೆ ದೂಷಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಭೂಪೇಂದ್ರ ಸಿಂಗ್ ಹನಿ ಅವರನ್ನು ಇ.ಡಿ. ವಿಚಾರಣೆಗೆ ಒಳಪಡಿಸಿತ್ತು. ನಂತರ ಜಾರಿ ನಿರ್ದೇಶನಾಲಯ ಗುರುವಾರ ತಡರಾತ್ರಿ ಬಂಧಿಸಿದೆ. ಮನಿ ಲ್ಯಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ)ಯ ನಿಬಂಧನೆಗಳ ಅಡಿಯಲ್ಲಿ ಅವರನ್ನು ಜಲಂಧರ್ನಿಂದ ಬಂಧಿಸಲಾಗಿದೆ.ವಿಧಾನಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿಕರ ಮೇಲೂ ಸಹ ದಾಳಿ ನಡೆಸಲಾಗಿತ್ತು. ಅದೇ ರೀತಿ ನನ್ನ ಮೇಲೆ ಒತ್ತಡ ಹೇರಲು ಪಂಜಾಬ್ನಲ್ಲಿ ಇಡಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಸದಸ್ಯರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ. ಒತ್ತಡವನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.












Click it and Unblock the Notifications