ತಜೀಂದರ್ ಪಾಲ್ ಬಗ್ಗ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಮೊಹಾಲಿ ಕೋರ್ಟ್
ಮೊಹಾಲಿ, ಮೇ 7: ನವದೆಹಲಿಯಲ್ಲಿ ನಡೆದಿರುವ ನಾಟಕೀಯ ಬೆಳವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತ ತಜೀಂದರ್ ಪಾಲ್ ಬಗ್ಗ ಅನ್ನು ಬಂಧಿಸಿ ನಂತರದಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಮಧ್ಯೆ ಆತನನ್ನು ಮತ್ತೊಮ್ಮೆ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಮೊಹಲಿ ಕೋರ್ಟ್ ಶನಿವಾರ ಪಂಜಾಬ್ ಪೊಲೀಸರಿಗೆ ನಿರ್ದೇಶನ ನೀಡಿದೆ.
ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ದ್ವೇಷವನ್ನು ಹುಟ್ಟು ಹಾಕುವುದು ಹಾಗೂ ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ ತಜೀಂದರ್ ಪಾಲ್ ಬಗ್ಗ ವಿರುದ್ಧ ಪ್ರಕರಣವನ್ನು ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿದ್ದು, ವಾರಂಟ್ ಜಾರಿಗೊಳಿಸಲಾಗಿದೆ.
ಶುಕ್ರವಾರ ಬೆಳಗ್ಗೆಯಷ್ಟೇ ಇಂಥದ್ದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನಿವಾಸದಲ್ಲಿ ತಜೀಂದರ್ ಪಾಲ್ ಬಗ್ಗಾ ಅನ್ನು ಪಂಜಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆದಾಗ್ಯೂ, ಆತನ ಬಂಧನವನ್ನು ದೆಹಲಿ ಪೊಲೀಸರು ತಡೆದರು. ಬಗ್ಗಾ ಅವರ ತಂದೆ ಸಲ್ಲಿಸಿದ ಅಪಹರಣ ದೂರಿನ ಆಧಾರದ ಮೇಲೆ ಸರ್ಚ್ ವಾರಂಟ್ ಪಡೆದಿದ್ದರು.

ಪಂಜಾಬಿಗೆ ಕರೆದೊಯ್ಯುತ್ತಿದ್ದ ಕಾರನ್ನು ತಡೆದ ಹರಿಯಾಣ ಪೊಲೀಸ್
ದೆಹಲಿ ಪೊಲೀಸರು ಪಡೆದ ಸರ್ಚ್ ವಾರಂಟ್ ಮಾಹಿತಿಯ ಹಿನ್ನೆಲೆಯಲ್ಲಿ ತಜೀಂದರ್ ಪಾಲ್ ಬಗ್ಗನನ್ನು ಪಂಜಾಬಿಗೆ ಕರೆದುಕೊಂಡು ಹೋಗುತ್ತಿದ್ದ ಕಾರನ್ನು ಹರಿಯಾಣ ಪೊಲೀಸರು ತಡೆದು ನಿಲ್ಲಿಸಿದ್ದರು. ದ್ವಾರಕಾ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಬಗ್ಗಾನನ್ನು ಹಾಜರುಪಡಿಸಲಾಗಿದ್ದು, ಅವನನ್ನು ಬಿಡುಗಡೆಗೊಳಿಸಿದ ಕೋರ್ಟ್ ಮನೆಗೆ ಹೋಗುವುದಕ್ಕೆ ಅನುಮತಿ ನೀಡಿತ್ತು. ತದನಂತರದಲ್ಲಿ ಆತ ಜನಕಪುರಿಯಲ್ಲಿರುವ ತಮ್ಮ ಮನೆಗೆ ತೆರಳಿದ್ದನು.

ಮೊಹಾಲಿ ಕೋರ್ಟ್ ಮೊರೆಗೆ ಪಂಜಾಬ್ ಪೊಲೀಸರು
ಬಿಜೆಪಿ-ಎಎಪಿ ಗದ್ದಲಕ್ಕೆ ಕಾರಣವಾದ ನಾಟಕೀಯ ಬೆಳವಣಿಗೆಗಳ ನಂತರದಲ್ಲಿ ಪಂಜಾಬ್ ಪೊಲೀಸರು ಶನಿವಾರ ಮೊಹಾಲಿ ನ್ಯಾಯಾಲಯದ ಮೊರೆ ಹೋಗಿದ್ದು, ತಜೀಂದರ್ ಪಾಲ್ ಬಗ್ಗ ಬಂಧನದ ವಾರಂಟ್ ಪಡೆದುಕೊಂಡಿದ್ದಾರೆ. ದೆಹಲಿ ಮತ್ತು ಪಂಜಾಬಿನಲ್ಲಿ ಆಮ್ ಆದ್ಮಿ ಸರ್ಕಾರ ಆಡಳಿತದಲ್ಲಿದ್ದು, ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಆದಾಗ್ಯೂ, ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತದೆಯೇ ವಿನಃ ಆಪ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಬರುವುದಿಲ್ಲ.

ಬಗ್ಗಾ ವಿರುದ್ಧದ ಎಫ್ಐಆರ್ ನಲ್ಲಿ ಯಾವ ಅಂಶಗಳು ಉಲ್ಲೇಖ?
ಕಳೆದ ಏಪ್ರಿಲ್ 1ರಂದು ತಜೀಂದರ್ ಪಾಲ್ ಬಗ್ಗ ವಿರುದ್ಧ ಮೊದಲ ಎಫ್ಐಆರ್ ಅನ್ನು ದಾಖಲಿಸಿಕೊಳ್ಳಲಾಗಿತ್ತು. ಈ ಎಫ್ಐಆರ್ ಕಾಪಿಯಲ್ಲಿ ಮಾರ್ಚ್ 30ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ಬಿಜೆಪಿ ಯುವ ಘಟಕದ ಪ್ರತಿಭಟನೆಯ ವೇಳೆಯಲ್ಲಿ ನೀಡಿದ ಪ್ರಚೋದನಕಾರಿ ಹೇಳಿಕೆಗಳ ಬಗ್ಗೆ ಉಲ್ಲೇಖಿಸಲಾಗಿತ್ತು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 23ರಂದು ನಡೆಸಲಾಗುತ್ತದೆ.

ನಾನು 100 ಎಫ್ಐಆರ್ ದಾಖಲಿಸಿದರೂ ಹೆದರುವುದಿಲ್ಲ
ಶನಿವಾರ ಮುಂಜಾನೆ ತಜೀಂದರ್ ಪಾಲ್ ಬಗ್ಗ ಎಎಪಿ ಮತ್ತು ಅದರ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುವುದಾಗಿ ಹೇಳಿದರು. "ನನ್ನ ವಿರುದ್ಧ ಒಂದು ಅಥವಾ 100 ಎಫ್ಐಆರ್ಗಳು ದಾಖಲಾಗಿರಲಿ, ಗುರು ಗ್ರಂಥ ಸಾಹಿಬ್ನ ಅವಮಾನ ಮತ್ತು ಕಾಶ್ಮೀರಿ ಪಂಡಿತರಿಗೆ ಕೇಜ್ರಿವಾಲ್ ಮಾಡಿದ ಅವಮಾನದ ವಿಷಯಗಳನ್ನು ನಾನು ಎತ್ತುತ್ತಲೇ ಇರುತ್ತೇನೆ," ಎಂದು ಬಿಜೆಪಿ ನಾಯಕ ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications