ಪಂಜಾಬ್ನಲ್ಲಿ ರೈತರ ಪ್ರತಿಭಟನೆ: ಸಿಎಂ ಮಾನ್ಗೆ ನವಜೋತ್ ಸಿಂಗ್ ಸಿಧು ಸಲಹೆ
ಚಂಡೀಗಢ ಮೇ 18: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ಸರಕಾರ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ ಹಿರಿಯ ನಾಯಕ ನವಜೋತ್ ಸಿಂಗ್ ಸಿಧು ಕೆಲ ಅವಕಾಶಗಳಿಗಾಗಿ ಕಾಯುತ್ತಿರುತ್ತಾರೆ. ಗೋಧಿಯ ಮೇಲಿನ ಬೋನಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಗಳ ನಡುವೆಯೇ ನವಜೋತ್ ಸಿಂಗ್ ಸಿಧು ಬುಧವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ಗೆ ಕೆಲ ಸಲಹೆಗಳನ್ನು ನಿಡಿದ್ದಾರೆ. ರೈತರು ಪಂಜಾಬ್ನ ಬೆನ್ನೆಲುಬು, ಅವರೊಂದಿಗೆ ಘರ್ಷಣೆ ಮಾಡಬೇಡಿ ಎಂದು ಹೇಳಿದ್ದಾರೆ.
ಸರಣಿ ಟ್ವೀಟ್ಗಳಲ್ಲಿ ಸಿಧು ಸಿಎಂ ಭಗವಂತ್ ಮಾನ್ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ಎಚ್ಚರಿಸಿದ್ದಾರೆ ಮತ್ತು ಆಮ್ ಆದ್ಮಿ ಪಕ್ಷದ ಐಟಿ ಸೆಲ್ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಭಟನಾ ನಿರತ ರೈತರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಪಂಜಾಬ್ನ ಜನಸಂಖ್ಯೆಯ ಶೇ 60% ರಷ್ಟಿರುವ ಮತ್ತು ರಾಜ್ಯದ ಆರ್ಥಿಕತೆಯ ಬೆನ್ನೆಲುಬು ಆಗಿರುವ ರೈತರನ್ನು ಕಡೆಕಣಿಸಬೇಡಿ ಎಂದು ಸಿಧು ಮುಖ್ಯಮಂತ್ರಿ ಮಾನ್ಗೆ ಒತ್ತಾಯಿಸಿದ್ದಾರೆ.
ಮಾನ್ಗೆ ಸಿಧು ಸಲಹೆ; ಪಂಜಾಬ್ ಮುಖ್ಯಮಂತ್ರಿಗೆ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಿ. ಇದರಿಂದ ಶೇ 70% ಕ್ಕಿಂತ ಹೆಚ್ಚು ಸಮಸ್ಯೆಗಳು ಮಾಯವಾಗುತ್ತವೆ. ರೈತರ ವಿರುದ್ಧದ ಹೋರಾಟದಲ್ಲಿ ಯಾರೂ ಗೆದ್ದಿಲ್ಲ ಎಂದು ಸಿಧು ಸಲಹೆ ನೀಡಿದರು.

ಮುಖ್ಯಮಂತ್ರಿಗಳ ಹೇಳಿಕೆ; ಮಂಗಳವಾರ ಚಂಡೀಗಢ-ಮೊಹಾಲಿ ಗಡಿಯಲ್ಲಿ ರೈತರು ವಿವಿಧ ಬೇಡಿಕೆಗಳ ಮೇಲೆ ರಾಜ್ಯ ರಾಜಧಾನಿಗೆ ಹೋಗುವುದನ್ನು ನಿಲ್ಲಿಸಿದ ಬಳಿಕ ಬುಧವಾರವೂ ರೈತರು ಪ್ರತಿಭಟನೆಯನ್ನು ಮುಂದುವರೆಸಿದರು.
ಆದರೆ ಮುಖ್ಯಮಂತ್ರಿ ಮನ್ ಪ್ರತಿಭಟನೆಯನ್ನು ಅನಪೇಕ್ಷಿತ ಎಂದು ಕರೆದರು. ರೈತರು ಕೇವಲ ಘೋಷಣೆಗಳನ್ನು ನಿಲ್ಲಿಸಬೇಕು ಮತ್ತು ಪಂಜಾಬ್ನಲ್ಲಿ ಕ್ಷೀಣಿಸುತ್ತಿರುವ ನೀರಿನ ಮಟ್ಟವನ್ನು ಪರಿಶೀಲಿಸಲು ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಒತ್ತಾಯಿಸಿದರು.
ನಾನು ಆ ರೈತರನ್ನು ಭೇಟಿಯಾಗಲು ಸಿದ್ಧನಿದ್ದೇನೆ, ಆದರೆ ಮುರ್ದಾಬಾದ್ ಎಂದು ಜಪಿಸುವುದು ಮಾರ್ಗವಲ್ಲ. ಎಲ್ಲವೂ ಮುರ್ದಾಬಾದ್ ಆಗಲು ಸಾಧ್ಯವಿಲ್ಲ. ನಾನೊಬ್ಬ ರೈತನ ಮಗ. ಬಾಸ್ಮತಿ ಮತ್ತು ಮೂಂಗ್ ದಾಲ್ ಬೆಳೆ ಬಗ್ಗೆ ನನಗೂ ತಿಳಿದಿದೆ ಎಂದು ಮಾನ್ ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications