Breaking News: ಪಂಜಾಬ್ನಲ್ಲಿ 65 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ
ಚಂಡೀಗಢ, ಜನವರಿ 24: ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ಪಂಜಾಬ್ನಲ್ಲಿ ನಡೆಯಲಿದ್ದು, ಅಮರಿಂದರ್ ಸಿಂಗ್ರ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಎಸ್ಎಡಿ-ಸಂಯುಕ್ತ ಜೊತೆ ಬಿಜೆಪಿ ಸೋಮವಾರ ಸೀಟು ಹಂಚಿಕೆಯನ್ನು ಘೋಷಿಸಿದೆ.
ಬಿಜೆಪಿ 65 ಸ್ಥಾನಗಳಲ್ಲಿ, ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ 37 ಸ್ಥಾನಗಳಲ್ಲಿ ಮತ್ತು ಎಸ್ಎಡಿ-ಸಂಯುಕ್ತ್ 15 ಸ್ಥಾನಗಳಲ್ಲಿ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
"ಪಂಜಾಬ್ಗೆ ವಿಶೇಷ ಗಮನ ನೀಡಬೇಕು," ಎಂದು ಹೇಳಿದ ಬಿಜೆಪಿ ಮುಖ್ಯಸ್ಥರು, "ಪಂಜಾಬ್ನಲ್ಲಿ ಭದ್ರತೆ ಬಹಳ ಅಪಾಯಕಾರಿ ಸಮಸ್ಯೆಯಾಗಿದೆ. ಈ ಚುನಾವಣೆಯು ಸ್ಥಿರತೆ ಮತ್ತು ಸುರಕ್ಷತೆಗಾಗಿ ನಡೆಯಬೇಕಾಗಿದೆ. ಪಂಜಾಬ್ ಅನ್ನು ಮರಳಿ ಸರಿಯಾದ ದಾರಿಗೆ ತರುವುದೇ ನಮ್ಮ ಧ್ಯೇಯವಾಗಿದೆ," ಎಂದು ಕೂಡಾ ತಿಳಿಸಿದರು.

ಮಾಫಿಯಾ ಆಡಳಿತದ ನಿಮೂರ್ಲನೆ
"1984ರ ಗಲಭೆಗಳ ತನಿಖೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಸ್ಐಟಿ ರಚಿಸಿದ್ದಾರೆ ಮತ್ತು ಇಂದು ಆರೋಪಿಗಳು ಜೈಲಿನಲ್ಲಿದ್ದಾರೆ. ನಾವು ಪಂಜಾಬ್ನಲ್ಲಿ 'ಮಾಫಿಯಾ ಆಡಳಿತದ' ಅನ್ನು ನಿರ್ಮೂಲನೆ ಮಾಡುತ್ತೇವೆ," ಎಂದು ಹೇಳಿದರು.
ಕ್ಯಾಪ್ಟನ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ
ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಪಂಜಾಬ್ ಲೋಕ ಕಾಂಗ್ರೆಸ್ನ 22 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದಾರೆ. "ನಾವು ಮೊದಲ ಪಟ್ಟಿಯಲ್ಲಿ 22 ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದೇವೆ," ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. "ಮಜಾದಿಂದ 2 ಅಭ್ಯರ್ಥಿಗಳು, ದೋಬಾದಿಂದ 3 ಮತ್ತು ಮಾಲ್ವಾ ಪ್ರದೇಶದಿಂದ 17 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಎರಡನೇ ಪಟ್ಟಿಯನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿದೆ," ಎಂದು ತಿಳಿಸಿದ್ದರು.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಪಂಜಾಬ್ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್ಇಂಡಿಯಾ ಸುದ್ದಿ)
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications