Breaking news: ಪಂಜಾಬ್ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ರಾಹುಲ್ ಗಾಂಧಿ
ಚಂಡೀಗಢ, ಫೆಬ್ರವರಿ 06: ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಇಂದು ಮುಂದಿನ ವಿಧಾನಸಭೆ ಚುನಾವಣೆಗೆ ಪಂಜಾಬ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ನಿರೀಕ್ಷೆಯಂತೆ ಹಾಲಿ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಫೆಬ್ರವರಿ 6 ರಂದು ಲುಧಿಯಾನದಲ್ಲಿ ತಮ್ಮ ವರ್ಚುವಲ್ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು ಪಂಜಾಬ್ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. "ಕೆಲವು ನಾಯಕರು ಸಮಾಜಕ್ಕಾಗಿ ಹೋರಾಡುತ್ತಾರೆ, ಇತರ ನಾಯಕರು ತಮಗಾಗಿ ಮಾತ್ರ ಹೋರಾಡುತ್ತಾರೆ. ಕೆಲವೇ ದಿನಗಳಲ್ಲಿ ನಾಯಕನ ರಚನೆಯಾಗುವುದಿಲ್ಲ. ನಾಯಕರು ಹೋರಾಟಗಳಿಂದ ಹುಟ್ಟುತ್ತಾರೆ. ಸಿದ್ದು, ಚನ್ನಿ, ಜಾಖರ್ ಎಲ್ಲರೂ ಕಷ್ಟಪಟ್ಟಿದ್ದಾರೆ, ಇದರಿಂದ ಕಲಿತಿದ್ದಾರೆ," ಎಂದು ಹೇಳಿದ್ದಾರೆ.
"ಪಂಜಾಬ್ ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸಲು ನನ್ನಲ್ಲಿ ಹೇಳಲಾಯಿತು. ಆದರೆ ಇದು ಇದು ರಾಹುಲ್ ಗಾಂಧಿಯವರ ನಿರ್ಧಾರವಲ್ಲ ಪಂಜಾಬ್ನ ನಿರ್ಧಾರ," ಎಂದು ಕೂಡಾ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಇನ್ನು ಇದಕ್ಕೂ ಮುನ್ನ ಮಾತನಾಡಿದ್ದ ಪಂಜಾಬ್ ಕಾಂಗ್ರೆಸ್ ಘಟಕದ ಮುಖ್ಯಸ್ಥ, ಸಿಎಂ ಆಕಾಂಕ್ಷಿ ನವ್ಜೋತ್ ಸಿಂಗ್ ಸಿಧು, "ಇಂದು ಮುಖ್ಯಮಂತ್ರಿಯನ್ನು ಘೋಷಣೆ ಮಾಡುವ ಸುಸಂದರ್ಭ," ಎಂದು ಹೇಳಿದ್ದರು.

"ಇದು ಎಲ್ಲ ಗೊಂದಲಗಳನ್ನು ನಿವಾರಣೆ ಮಾಡಿ, ಸಿಎಂ ಘೋಷಣೆ ಮಾಡುವ ಸಮಯವಾಗಿದೆ. ಯಾರು ಗೊಂದಲವನ್ನು ಹುಟ್ಟು ಹಾಕುತ್ತಾರೆ ಅವರು ಭಾರೀ ಬೆಲೆ ತೆರಬೇಕಾಗುತ್ತದೆ," ಎಂದು ಎಚ್ಚರಿಕೆಯನ್ನು ನೀಡಿದ್ದರು. ಈ ಬೆನ್ನಲ್ಲೇ ಎದ್ದು ಬಂದ ಚರಣ್ಜೀತ್ ಸಿಂಗ್ ಚನ್ನಿ, ನವಜೋತ್ ಸಿಂಗ್ ಸಿಧುರನ್ನು ಅಪ್ಪಿದ್ದರು.
ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ಸಿಸ್ಟಮ್ (ಐವಿಆರ್ಎಸ್) ಮೂಲಕ ಈ ಸಮೀಕ್ಷೆ ನಡೆದಿದೆ. ಮೊಬೈಲ್ ಸಂಪರ್ಕ ಹೊಂದಿರುವ ಸುಮಾರು 1.5 ಕೋಟಿ ಮತದಾರರಿಗೆ ಐವಿಆರ್ಎಸ್ ಸಂದೇಶವನ್ನು ಕಳುಹಿಸಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಮತದಾರರಿಗೆ ಮೂರು ಆಯ್ಕೆಗಳನ್ನು ನೀಡಲಾಗಿದೆ. ಒಂದನೇ ಆಯ್ಕೆ ನವಜೋತ್ ಸಿಂಗ್ ಸಿಧು, ಎರಡನೇ ಆಯ್ಕೆ ಚರಣ್ಜೀತ್ ಸಿಂಗ್ ಚನ್ನಿ ಹಾಗೂ ಮೂರನೇ ಆಯ್ಕೆ ಮುಖ್ಯಮಂತ್ರಿ ಅಭ್ಯರ್ಥಿ ಬೇಡ ಎಂಬುವುದಾಗಿತ್ತು. ಇನ್ನು ಎಲ್ಲಾ 117 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು, ಎಐಸಿಸಿ ಮುಖಂಡರು ಹಾಗೂ ಸಮೀಕ್ಷಾ ತಂಡಗಳ ಮೂಲಕವೂ ಪ್ರತಿಕ್ರಿಯೆ ಕೇಳಲಾಗುತ್ತಿದೆ. ಈ ಸಮೀಕ್ಷೆಯಲ್ಲಿ ಹೆಚ್ಚಿನ ಜನರು ಚರಣ್ಜೀತ್ ಸಿಂಗ್ ಚನ್ನಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. (ಒನ್ಇಂಡಿಯಾ ಸುದ್ದಿ)
Recommended Video
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications