ಕಾಂಗ್ರೆಸ್ 20-30ಕ್ಕಿಂತ ಹೆಚ್ಚು ಸ್ಥಾನ ಪಡೆಯಲ್ಲ: ಕ್ಯಾಪ್ಟನ್ ಅಮರಿಂದರ್
ಚಂಡೀಗಢ, ಫೆಬ್ರವರಿ 20: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 2022 ರಲ್ಲಿ ಕಾಂಗ್ರೆಸ್ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭಾನುವಾರ ಹೇಳಿದ್ದಾರೆ. ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ನಡುವೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ಹೇಳಿಕೆಯನ್ನು ನೀಡಿದ್ದಾರೆ.
"ತಮ್ಮ ವಿರುದ್ಧವಾಗುವಂತಹ ಎಂತಹ ಕಾರ್ಯವನ್ನು ನಾನು ಮಾಡಬಹುದು ಎಂದು ಕಾಂಗ್ರೆಸ್ ಚಿಂತಿಸುತ್ತಿದೆ. ಕಾಂಗ್ರೆಸ್ 20-30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ನಾನು ಊಹಿಸಬಲ್ಲೆ," ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದರು.
"ಮಧ್ಯಾಹ್ನ 1 ಗಂಟೆಯವರೆಗೆ ಶೇಕಡ 30ಕ್ಕಿಂತ ಹೆಚ್ಚು ಮತದಾನವಾಗಿದೆ, ಇದು ಉತ್ತಮ ಸಂಕೇತವಾಗಿದೆ," ಎಂದು ಹೇಳಿದ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್, "ಬಿಜೆಪಿ-ಪಿಎಲ್ಸಿ ಮತ್ತು ಧಿಂಧ್ಸಾ ಪಕ್ಷವು ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದರೆ, ನಮಗೆ ಇನ್ನೇನು ಬೇಕು?," ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಅಮರಿಂದರ್ ವಾಗ್ದಾಳಿ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕ್ಯಾಪ್ಟನ್, "ಚರಣ್ಜೀತ್ ಸಿಂಗ್ ಚನ್ನಿ ಯಾರು? 3 ತಿಂಗಳಲ್ಲಿ ಪಂಜಾಬ್ನಲ್ಲಿ ಪವಾಡ ಮಾಡಬಲ್ಲ ಜಾದೂಗಾರನಾ? ಚುನಾವಣೆಗೆ ಮುನ್ನ ಚನ್ನಿಯನ್ನು ಹೀರೋ ಮಾಡಲು ಪ್ರಯತ್ನ ಮಾಡಲಾಗಿದೆ. ಇಬ್ಬರೂ (ಚನ್ನಿ ಮತ್ತು ನವಜೋತ್ ಎಸ್ ಸಿಧು) ನಿಷ್ಪ್ರಯೋಜಕರು," ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್, ಎಎಪಿ, ಎಸ್ಎಡಿ-ಬಿಎಸ್ಪಿ ಮೈತ್ರಿ, ಬಿಜೆಪಿ-ಪಿಎಲ್ಸಿ-ಎಸ್ಎಡಿ (ಸಂಯುಕ್ತ) ಮತ್ತು ವಿವಿಧ ರೈತ ಸಂಘಟನೆಗಳ ರಾಜಕೀಯ ಮುಂಭಾಗವಾದ ಸಂಯುಕ್ತ ಸಮಾಜ ಮೋರ್ಚಾ ನಡುವೆ ಪಂಜಾಬ್ನಲ್ಲಿ ಸ್ಪರ್ಧೆ ನಡೆಯುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಹವಣಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್, ಮಾದಕ ವಸ್ತುಗಳ ಹಾವಳಿ, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳಲ್ಲಿ ರಾಜಕೀಯ ವಿರೋಧಿಗಳಿಂದ ತೀವ್ರ ದಾಳಿಗೆ ಒಳಗಾಗಿದೆ.
ಪ್ರಸ್ತುತ ಸಿಎಂ ಚರಣ್ಜೀತ್ ಸಿಂಗ್ ಚನ್ನಿ ಅವರ 111 ದಿನಗಳ ಅಧಿಕಾರಾವಧಿಯಲ್ಲಿ ತೆಗೆದುಕೊಂಡ ವಿದ್ಯುತ್ ದರ ಮತ್ತು ಇಂಧನ ಬೆಲೆಗಳನ್ನು ಕಡಿಮೆ ಮಾಡುವ ನಿರ್ಧಾರಗಳನ್ನು ಕಾಂಗ್ರೆಸ್ಗೆ ಮತ ಬ್ಯಾಂಕ್ ಆಗುವ ಸಾಧ್ಯತೆ ಇದೆ. ಪ್ರಮುಖ ಸ್ಪರ್ಧಿಯಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಕ್ಷವು ದೆಹಲಿಯ ಆಡಳಿತ ಮಾದರಿಯನ್ನು ಬಿಂಬಿಸುತ್ತಲೇ ಅಧಿಕಾರವನ್ನು ಕಾಂಗ್ರೆಸ್ ಕೈಯಿಂದ ಪಡೆದುಕೊಳ್ಳುವ ಯತ್ನದಲ್ಲಿದೆ.
ಯಾವುದೇ ಪಕ್ಷಕ್ಕೂ ಬಹುಮತವಿಲ್ಲ ಎಂದಿದ್ದ ಕ್ಯಾಪ್ಟನ್
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರುವುದಿಲ್ಲ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಇತ್ತೀಚೆಗೆ ಹೇಳಿದ್ದಾರೆ. ''ನಾನು ನಿವೃತ್ತಿ ಹೊಂದಲು ಸಿದ್ಧನಿಲ್ಲ, ನನ್ನ ಜನರಿಗಾಗಿ ಕೆಲಸ ಮಾಡಲು ಬಯಸುತ್ತೇನೆ. ಇದು ನನ್ನ 9ನೇ ಚುನಾವಣೆ, ನಾನು ಎರಡು ಬಾರಿ ಸಂಸತ್ತಿಗೆ ಮತ್ತು ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ'' ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
"ಬಹು-ಪಕ್ಷಗಳ ಸ್ಪರ್ಧೆಯು ಮತದಾರನಿಗೆ ತನಗೆ ಬೇಕಾದುದನ್ನು ನಿರ್ಧರಿಸಲು ಸುಲಭವಾಗುತ್ತದೆ. ಆದರೆ ಪಕ್ಷಗಳ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಇದು ಅವರಿಗೆ ಕಷ್ಟಕರವಾದ ಹೋರಾಟವಾಗಿದೆ. ಅವರಲ್ಲಿ ಹಲವರಿಗೆ 10, 15 ಸೀಟು ದಾಟುವ ಅವಕಾಶವೇ ಇಲ್ಲ. ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯುದಿಲ್ಲ ಅಂತ ಕಾಣಿಸುತ್ತಿದೆ," ಎಂದರು. 2021ರ ಸೆಪ್ಟೆಂಬರ್ನಲ್ಲಿ ಪಂಜಾಬ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ರನ್ನು ಸ್ಥಾನದಿಂದ ಕೆಳಗಿಳಿಸಿ, ಚರಣಜಿತ್ ಸಿಂಗ್ ಚನ್ನಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕಾಂಗ್ರೆಸ್ ಏಕೆ ತೆಗೆದು ಹಾಕಿತು ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ ಇತ್ತೀಚೆಗೆ ಉತ್ತರವನ್ನು ನೀಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಏಕೆ ತೆಗೆದುಹಾಕಲಾಯಿತು ಎಂಬುದನ್ನು ನಾನು ನಿಮಗೆ ಹೇಳುತ್ತೇನೆ. ನಾನು ವಿದ್ಯುತ್ ಸರಬರಾಜು ಕಂಪನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ. ಬಡ ಜನರಿಗೆ ಉಚಿತ ವಿದ್ಯುತ್ ನೀಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ಅವರನ್ನು ತೆಗೆದು ಹಾಕಲಾಯಿತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. (ಒನ್ಇಂಡಿಯಾ ಸುದ್ದಿ)
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications