Get Updates
Get notified of breaking news, exclusive insights, and must-see stories!

ಪಂಜಾಬ್ ಚುನಾವಣೆ: ದ್ವೇಷ ಭಾಷಣ ವಿಡಿಯೋ ವೈರಲ್, ಸಿಧು ಸಲಹೆಗಾರರ ​​ವಿರುದ್ಧ ಎಫ್‌ಐಆರ್

ಚಂಡೀಗಢ, ಜನವರಿ 23: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರ ಸಲಹೆಗಾರ, ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ದ್ವೇಷ ಭಾಷಣ ವಿಡಿಯೋ ವೈರಲ್ ಆದ ನಂತರ, ಪಂಜಾಬ್ ಪೊಲೀಸರು ಭಾನುವಾರದಂದು ಎಫ್‌ಐಆರ್‌ ದಾಖಲು ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಮಲೇರ್‌ಕೋಟ್ಲಾದಲ್ಲಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಮುದಾಯಗಳ ನಡುವೆ ದ್ವೇಷಕ್ಕೆ ಪ್ರಚೋದನೆ ನೀಡಿದ ಕಾರಣದಿಂದಾಗಿ ಮೊಹಮ್ಮದ್ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆತನ ಮೇಲೆ ಐಪಿಸಿ ಸೆಕ್ಷನ್ 153-ಎ ಅನ್ನು ಹಾಕಿದ್ದಾರೆ ಎಂದು ವರದಿಯು ಹೇಳಿದೆ.

ಮಲೇರ್‌ಕೋಟ್ಲಾದಲ್ಲಿ ಮುಸ್ಲಿಮರನ್ನುದ್ದೇಶಿಸಿ ಭಾಷಣ ಮಾಡಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರ ಸಲಹೆಗಾರ, ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ ಒಂದು ಸಮುದಾಯದ ವಿರುದ್ಧವಾಗಿ ಮಾತನಾಡಿದ್ದಾರೆ ಎಂದು ವರದಿಯು ಉಲ್ಲೇಖ ಮಾಡಿದೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಚುನಾವಣಾ ಆಯೋಗವು ಈ ವಿಡಿಯೋವನ್ನು ಪರಿಶೀಲಿಸಿ ಮೊಹಮ್ಮದ್ ಮುಸ್ತಫಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

Punjab Poll: FIR Against Navjot Sidhu’s Advisor After Hate Speech Video Goes Viral

ಇನ್ನು ಮಲೇರ್‌ಕೋಟ್ಲಾದಲ್ಲಿ ಮುಸ್ಲಿಮರನ್ನುದ್ದೇಶಿಸಿ ಮಾಡಿದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮೊಹಮ್ಮದ್ ಮುಸ್ತಫಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಗರ ಎಸ್‌ಎಚ್‌ಒ ಮಲೇರ್‌ಕೋಟ್ಲಾ ಇನ್ಸ್‌ಪೆಕ್ಟರ್ ಕರಮ್‌ವೀರ್ ಸಿಂಗ್ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಚುನಾವಣಾ ಆಯೋಗದ ಆದೇಶದ ಮೇರೆಗೆ ದಾಖಲಾದ ಪ್ರಕರಣವನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲ್ಲ. ಆದರೆ ಚುನಾವಣಾ ಆಯೋಗವು ಈ ವಿಡಿಯೋವನ್ನು ಪರಿಶೀಲಿಸಿ ಮೊಹಮ್ಮದ್ ಮುಸ್ತಫಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಮೊಹಮ್ಮದ್ ಮುಸ್ತಫಾ ಹೇಳುವುದು ಏನು?

ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರ ಸಲಹೆಗಾರ ಮೊಹಮ್ಮದ್ ಮುಸ್ತಫಾ, ಈ ಎಫ್‌ಐಆರ್‌ ಅಸಂಬದ್ಧ ಎಂದು ಹೇಳಿದ್ದಾರೆ. "ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಸುತ್ತಿರುವಂತೆ ನಾನು ಹಿಂದೂಗಳನ್ನು ಗುರಿಯಾಗಿಸಿಕೊಂಡಿಲ್ಲ. ನಾನು ನಾನು 'ಫಿಟ್ನೆ' ಪದವನ್ನು ಬಳಸಿದ್ದೇನೆ. 'ಫಿಟ್ನೆ' ಎಂದರೆ ಕಾನೂನು ಉಲ್ಲಂಘಿಸುವವರು ಎಂದು ಆಗಿದೆ. ನನ್ನ ಮೇಲೆ ಹಲ್ಲೆಗೆ ಯತ್ನಿಸಿದ ಮುಸ್ಲಿಮರ ಗುಂಪಿನ ಮೇಲೆ ನಾನು ಕೋಪಗೊಂಡಿದ್ದೇನೆ. ನಾನು ಅವರಿಗೆ ಎಚ್ಚರಿಕೆ ನೀಡಿದ್ದೇನೆಯೇ ಹೊರತು ಹಿಂದೂಗಳಿಗೆ ಅಲ್ಲ," ಎಂದು ಸ್ಪಷ್ಟಣೆ ನೀಡಿದ್ದಾರೆ.

ಜನವರಿ 20 ರಂದು ಸಾರ್ವಜನಿಕ ಸಭೆಯ ಸಂದರ್ಭದಲ್ಲಿ ಮೊಹಮ್ಮದ್ ಮುಸ್ತಫಾ ಅವರು ಕಾರ್ಯಕ್ರಮಗಳನ್ನು ಆಯೋಜಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ವೀಡಿಯೊ ವೈರಲ್ ಆಗಿದೆ. ವಿಡಿಯೋದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ತಮ್ಮ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಸಿದರೆ ನಿಯಂತ್ರಿಸಲಾಗದ ಪರಿಸ್ಥಿತಿಯನ್ನು ಸೃಷ್ಟಿಸುವ ಬೆದರಿಕೆಯನ್ನು ಹಾಕಿರುವುದು ಕಂಡು ಬಂದಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. 117ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಪಂಚ ರಾಜ್ಯಗಳಲ್ಲಿ ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+