ಪಂಜಾಬ್ ಚುನಾವಣೆಯಲ್ಲಿ ಎಸ್ಎಡಿ-ಬಿಎಸ್ಪಿ ಕ್ಲೀನ್ ಸ್ವೀಪ್ ಎಂದ ಬಾದಲ್
ಚಂಡೀಗಢ, ಫೆಬ್ರವರಿ 20: ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆಯು ಆರಂಭವಾಗಿದೆ. ಈಗಾಗಲೇ ಹಲವಾರು ಪ್ರಮುಖ ನಾಯಕರು ಮತಗಟ್ಟಗೆ ಬಂದು ಮತ ಚಲಾಯಿಸಿದ್ದಾರೆ. ಎಲ್ಲಾ ನಾಯಕರುಗಳು ತಮ್ಮ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ಅಕಾಲಿ ದಳ ಹಾಗೂ ಬಿಎಸ್ಪಿ ಮೈತ್ರಿಕೂಟ ಕ್ಲೀನ್ ಸ್ವೀಪ್ ಮಾಡುವ ಭರವಸೆಯನ್ನು ಅಕಾಲಿ ದಳ ನಾಯಕ ಸುಖ್ಬೀರ್ ಸಿಂಗ್ ಬಾದಲ್ ವ್ಯಕ್ತಪಡಿಸಿದ್ದಾರೆ.
ಜಲಾಲಾಬಾದ್ನಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್, "ಶಿರೋಮಣಿ ಅಕಾಲಿದಳ-ಬಿಎಸ್ಪಿ ಕ್ಲೀನ್ಸ್ವೀಪ್ ಮಾಡಲಿದೆ ಎಂದು ನಾನು ಹೇಳಲು ಬಯಸುತ್ತೇನೆ. 80ಕ್ಕೂ ಅಧಿಕ ಸೀಟುಗಳನ್ನು ನಾವು ಪಡೆಯುತ್ತೇವೆ," ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್, ಪಕ್ಷದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಹಾಗೂ ಪಕ್ಷದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಮತವನ್ನು ಚಲಾಯಿಸಲು ಜೊತೆಯಾಗಿ ಮತಗಟ್ಟೆ ಆಗಮಿಸಿದ್ದಾರೆ.

"ಇಂದು ಜನರು ಸ್ಥಿರ, ಬಲಿಷ್ಠ ಸರ್ಕಾರವನ್ನು ಬಯಸುತ್ತಿದ್ದಾರೆ. ಪಂಜಾಬ್ಗೆ ಗಡಿ ರಾಜ್ಯವಾಗಿ ಹಲವು ಸವಾಲುಗಳಿವೆ. ಸ್ಥಳೀಯ ಜನರ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನಿಸಿದ, ಸ್ಥಳೀಯ, ಪ್ರಾದೇಶಿಕ ಪಕ್ಷವು ಕ್ಲೀನ್ ಸ್ವೀಪ್ ಮಾಡಲಿದೆ," ಎಂದು ಶಿರೋಮಣಿ ಅಕಾಲಿದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.
ಅಮೃತಸರ ಪೂರ್ವದಿಂದ ಸ್ಪರ್ಧಿಸುತ್ತಿರುವ ಎಸ್ಎಡಿ ನಾಯಕ ಬಿಕ್ರಮ್ ಎಸ್ ಮಜಿಥಿಯಾ ಮಾತನಾಡಿ, "ಜನರು ಗೆಲ್ಲುತ್ತಾರೆ, ಅವರ ಬೇಡಿಕೆಗಳು ಗೆಲ್ಲುತ್ತದೆ. ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ದುರಹಂಕಾರ ಮತ್ತು ದ್ವೇಷದ ರಾಜಕಾರಣವನ್ನು ಸಾರ್ವಜನಿಕರು ತಿರಸ್ಕರಿಸುತ್ತಾರೆ. ಯಾವುದೇ ಕೈಗಾರಿಕೆಗಳ ಅಭಿವೃದ್ಧಿಯಾಗಿಲ್ಲ ಮತ್ತು ವ್ಯಾಪಾರ, ನಿರುದ್ಯೋಗಿಗಳು ಮತ್ತು ಬಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲಾಗಿಲ್ಲ," ಎಂದು ಆರೋಪ ಮಾಡಿದ್ದಾರೆ.
ಬಿಎಸ್ಪಿ-ಎಸ್ಎಡಿ ಮೈತ್ರಿಗೆ ಜನ ಯಾಕೆ ಮತ ಹಾಕಬೇಕು?
ಇದಕ್ಕೂ ಮುನ್ನ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್, ಬಿಎಸ್ಪಿ-ಎಸ್ಎಡಿ ಮೈತ್ರಿಗೆ ಜನ ಯಾಕೆ ಮತ ಹಾಕಬೇಕು ಎಂಬುವುದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. "ಮೊದಲನೆಯದಾಗಿ, ನಾವು ಅವರ ನಿಜವಾದ ಪ್ರತಿನಿಧಿಗಳು ಎಂದು ಪಂಜಾಬಿಗಳಿಗೆ ತಿಳಿದಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ವಿಭಿನ್ನ ಧ್ವನಿಯಲ್ಲಿ ಮಾತನಾಡುವ ಇತರರಿಗಿಂತ ಭಿನ್ನವಾಗಿ ನಾವು ಯಾವಾಗಲೂ ಪಂಜಾಬ್ನ ಹಿತಾಸಕ್ತಿಗಳಿಗೆ ಮೊದಲ ಸ್ಥಾನ ನೀಡಿದ್ದೇವೆ," ಎಂದಿದ್ದಾರೆ.
"ತನ್ನ ಮಾತನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ನಂಬಬಹುದಾದ ಏಕೈಕ ಪಕ್ಷ ಎಸ್ಎಡಿ ಎಂಬ ನಂಬಿಕೆಯೂ ಜನರಿಗೆ ಇದೆ. ಜನರಿಗೆ ನೀಡಿದ ಪ್ರತಿಯೊಂದು ಭರವಸೆಯನ್ನು ಈಡೇರಿಸುವ ಮೂಲಕ ನಾವು ಇದನ್ನು ಮೊದಲೇ ಸಾಬೀತುಪಡಿಸಿದ್ದೇವೆ," ಎಂದು ಕೂಡಾ ತಿಳಿಸಿದ್ದಾರೆ.
"ವೃದ್ಧಾಪ್ಯ ವೇತನವನ್ನು ತಿಂಗಳಿಗೆ 3,100 ರೂ.ಗೆ ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ. ದುರ್ಬಲ ವರ್ಗದ ವಧುಗಳಿಗೆ 'ಶಗುನ್' ಪ್ರಯೋಜನವನ್ನು 75,000 ರೂ.ಗೆ ಹೆಚ್ಚಿಸುತ್ತೇವೆ. ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2,000 ರೂ. ಹಾಗೂ ಎಲ್ಲಾ ಗ್ರಾಹಕರಿಗೆ ತಿಂಗಳಿಗೆ 400 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು," ಎಂದು ಕೂಡಾ ಭರವಸೆಯನ್ನು ನೀಡಿದ್ದಾರೆ.
ಅಧಿಕಾರಕ್ಕೆ ಬಂದರೆ, ಮೊದಲ 100 ದಿನಗಳ ನಿಮ್ಮ ಮೈತ್ರಿಯ ಅಜೆಂಡಾ ಏನು ಎಂದು ಕೂಡಾ ಮಾಧ್ಯಮಗಳು ಪ್ರಶ್ನೆ ಮಾಡಿದೆ. "ಜನರಿಗೆ ನೀಡಿದ ಭರವಸೆಯನ್ನು ಸಾಧ್ಯವಾದಷ್ಟು ಬೇಗ ಜಾರಿಗೊಳಿಸುವುದು ನಮ್ಮ ಪ್ರಯತ್ನವಾಗಿದೆ. ನಾವು ಈ ಪರಂಪರೆಯನ್ನು ಅನುಸರಿಸುತ್ತೇವೆ ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಎಲ್ಲಾ ಭರವಸೆಗಳ ತ್ವರಿತ ಅನುಷ್ಠಾನಕ್ಕಾಗಿ ಮಾರ್ಗಸೂಚಿಯನ್ನು ಘೋಷಿಸುತ್ತೇವೆ," ಎಂದು ಹೇಳಿದ್ದಾರೆ. (ಒನ್ಇಂಡಿಯಾ ಸುದ್ದಿ)
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications