ಮದುವೆಯಲ್ಲಿ ಮಾಸ್ಕ್ ಧರಿಸದಿದ್ದರೆ 10,000 ರೂ. ದಂಡ!
ಚಂಡೀಘರ್, ಜೂನ್.03: ನೊವೆಲ್ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮುಖಕ್ಕೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇದರ ನಡುವೆ ಮದುವೆಯಾದ ನವಜೋಡಿ ಮಾಸ್ಕ್ ಧರಿಸದ್ದಕ್ಕೆ 10,000 ರೂಪಾಯಿ ದಂಡ ವಿಧಿಸಲಾಗಿದೆ.
ತಂದೆ-ತಾಯಿ ವಿರೋಧದ ನಡುವೆ ಮದುವೆಯಾದ ನವದಂಪತಿಯು ಪೋಷಕರಿಂದ ರಕ್ಷಣೆ ನೀಡುವಂತೆ ಪಂಜಾಬ್-ಹರಿಯಾಣ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಹರಿಪಾಲ್ ವರ್ಮಾ ಅರ್ಜಿದಾರರಿಗೆ 10,000 ರೂಪಾಯಿ ದಂಡ ಹಾಕಿದ್ದಾರೆ.
ನವದಂಪತಿ ಸಲ್ಲಿಸಿದ ಅರ್ಜಿಯಲ್ಲಿ ವಿವಾಹದ ಫೋಟೋಗಳನ್ನು ಲಗತ್ತಿಸಲಾಗಿತ್ತು. ಈ ಫೋಟೋದಲ್ಲಿ ದಂಪತಿಯು ಮಾಸ್ಕ್ ಧರಿಸದಿರುವುದನ್ನು ಗಮನಿಸಿದ ಹೈಕೋರ್ಟ್ ನ್ಯಾ.ಹರಿಪಾಲ್ ವರ್ಮಾ, ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸದ ಹಿನ್ನೆಲೆ ದಂಡವನ್ನು ವಿಧಿಸಿದ್ದಾರೆ.

15 ದಿನದೊಳಗೆ ದಂಡ ವಸೂಲಿಗೆ ಸೂಚನೆ:
ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸಿದ ನವಜೋಡಿಗೆ 10,000 ದಂಡದ ಮೊತ್ತವನ್ನು ಪಾವತಿಸಲು ಹೈಕೋರ್ಟ್ 15 ದಿನಗಳ ಕಾಲಾವಕಾಶವನ್ನು ನೀಡಿದೆ. ಮುಂದಿನ 15 ದಿನಗಳ ಒಳಗೆ ಹೋಶಿರ್ಪುರ್ ಜಿಲ್ಲಾಧಿಕಾರಿಗೆ ದಂಡದ ಮೊತ್ತವನ್ನು ಪಾವತಿಸಬೇಕು. ಆ ದಂಡದ ಹಣವನ್ನು ಜಿಲ್ಲಾಡಳಿತವರು ಬಡವರಿಗೆ ಉಚಿತವಾಗಿ ಮಾಸ್ಕ್ ವಿತರಿಸುವುದಕ್ಕೆ ವಿನಿಯೋಗಿಸಿಕೊಳ್ಳಬೇಕು ಎಂದು ಕೋರ್ಟ್ ಸೂಚಿಸಿದೆ.
ಪಂಜಾಬ್ ನಲ್ಲಿ ಪ್ರತಿಯೊಬ್ಬರು ಮನೆಗಳಿಂದ ಹೊರಗೆ ಹೊರಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು ಎಂಬ ನಿಯಮವಿದೆ. ರಾಜ್ಯ ಆರೋಗ್ಯ ಕಾರ್ಯದರ್ಶಿಗಳು ಈ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಈ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡವನ್ನು ವಿಧಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನೂ ಈ ಮೊದಲು ನೀಡಲಾಗಿತ್ತು.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು











Click it and Unblock the Notifications