ಎಎಪಿ ಗೆಲುವಿನ ಬಳಿಕ ಪಂಜಾಬ್ ಅತ್ಯುತ್ತಮ ನಿರ್ಧಾರ ಕೈಗೊಂಡಿದೆ ಎಂದ ಸಿಧು!
ಚಂಡೀಗಢ, ಮಾರ್ಚ್ 12: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವನ್ನು ಪಡೆದಿದೆ. ಈಗಾಗಲೇ ನೂತನ ಸಚಿವ ಸಂಪುಟವು ಪ್ರಮಾಣ ವಚನ ತೆಗೆದುಕೊಳ್ಳಲು ದಿನವು ಕೂಡಾ ಫಿಕ್ಸ್ ಆಗಿದೆ. ಈ ನಡುವೆ ಪಂಜಾಬ್ ಅತ್ಯುತ್ತಮ ನಿರ್ಧಾರ ಕೈಗೊಂಡಿದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ತಮ್ಮ ಪಕ್ಷಕ್ಕೆ ಆಮ್ ಆದ್ಮಿ ಪಕ್ಷದ ಎದುರು ಸೋಲು ಕಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಇದು ಬದಲಾವಣೆಯ ರಾಜಕೀಯ ಎಂದು ಹೇಳಿದ್ದಾರೆ. ಹಾಗೆಯೇ ಅತ್ಯುತ್ತಮ ನಿರ್ಧಾರವನ್ನು ಕೈಗೊಂಡ ಪಂಜಾಬ್ ಜನತೆಗೆ ಧನ್ಯವಾದಗಳು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
"ಹೊಸ ವ್ಯವಸ್ಥೆಯನ್ನು ಪರಿಚಯಿಸುವ ಈ ಅತ್ಯುತ್ತಮ ನಿರ್ಧಾರಕ್ಕಾಗಿ ನಾನು ಪಂಜಾಬ್ ಜನರನ್ನು ಅಭಿನಂದಿಸುತ್ತೇನೆ," ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಸಿಂಗ್ ಸಿಧು ಹೇಳಿದರು. ಜನರ ಧ್ವನಿ, ನಿರ್ಧಾರ ದೇವರ ನಿರ್ಧಾರ ಎಂದು ಕೂಡಾ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ಈ ರೀತಿ ಹೇಳುವುದು ಸರಿಯೇ?
ಈ ಸಂದರ್ಭದಲ್ಲೇ ಮಾಧ್ಯಮಗಳು ಕಾಂಗ್ರೆಸ್ ಅಧ್ಯಕ್ಷರಾಗಿರುವ ನೀವು ಹೇಗೆ ಈ ರೀತಿ ಹೇಳಬಹುದು ಎಂದು ಪ್ರಶ್ನೆ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, "ಜನರು ಬದಲಾವಣೆಯನ್ನು ಆರಿಸಿದ್ದಾರೆ ಮತ್ತು ಅವರು ಎಂದಿಗೂ ತಪ್ಪಾಗಿಲ್ಲ," ಎಂದು ಪ್ರತಿಪಾದಿಸಿದರು. "ಜನರ ಧ್ವನಿ ದೇವರ ಧ್ವನಿಯಾಗಿದೆ, ನಾವು ನಮ್ರತೆಯಿಂದ ಅರ್ಥಮಾಡಿಕೊಳ್ಳಬೇಕು ಮತ್ತು ಅದಕ್ಕೆ ತಲೆಬಾಗಬೇಕು," ಎಂದು ಹೇಳಿದರು.
ಇನ್ನು ಈ ಸಂದರ್ಭದಲ್ಲೇ ಯಾವುದೇ ಬೇಸರದ ಭಾವನೆಯನ್ನು ಕೂಡಾ ತೋರಿಸದ ನವಜೋತ್ ಸಿಂಗ್ ಸಿಧು, ಪಂಜಾಬ್ನ ಉನ್ನತಿ ನನ್ನ ಧ್ಯೇಯವಾಗಿದೆ. ನಾನು ಎಂದಿಗೂ ಅದರಿಂದ ದೂರ ಸರಿಯುವುದಿಲ್ಲ ಎಂದಿದ್ದಾರೆ.
"ಯೋಗಿಯು ಧರ್ಮಯುದ್ಧದಲ್ಲಿದ್ದಾಗ, ಅವರು ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸುತ್ತಾರೆ ಮತ್ತು ಎಲ್ಲಾ ಮಿತಿಗಳಿಂದ ಮುಕ್ತರಾಗುತ್ತಾರೆ. ಅವರು ಸಾವಿಗೆ ಸಹ ಹೆದರುವುದಿಲ್ಲ. ನಾನು ಇಲ್ಲಿ ಪಂಜಾಬ್ನಲ್ಲಿದ್ದೇನೆ ಮತ್ತು ಇಲ್ಲಿಯೇ ಇರುತ್ತೇನೆ. ಯಾರಾದರೂ ಉತ್ತಮ ಉದ್ದೇಶವನ್ನು ಹೊಂದಿರುವಾಗ ಹಾಗೂ ಪಂಜಾಬ್ ಅನ್ನು ಪ್ರೀತಿಸುತ್ತಿರುವಾಗ ಆಗ ಅವರು ಸೋಲು-ಗೆಲುವಿನ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ," ಎಂದು ಪ್ರತಿಪಾದಿಸಿದ್ದಾರೆ.
ಜನರೊಂದಿಗೆ ನನಗೆ ಆಧ್ಮಾತ್ಮಿಕ, ಹೃದಯದ ಸಂಬಂಧ ಎಂದ ಸಿಧು
"ಜನರೊಂದಿಗಿನ ನನ್ನ ಸಂಪರ್ಕವು ಸೀಮಿತವಾದ ಸಂಬಂಧವಲ್ಲ, ಅದು ಆಧ್ಯಾತ್ಮಿಕ ಮತ್ತು ಹೃದಯದ ಸಂಬಂಧವಾಗಿದೆ. ಜನರೊಂದಿಗಿನ ನನ್ನ ಸಂಬಂಧವು ಚುನಾವಣೆಯಲ್ಲಿ ಗೆಲುವು ಮತ್ತು ಸೋಲುಗಳಿಗೆ ಸೀಮಿತವಾಗಿಲ್ಲ. ನಾನು ಪಂಜಾಬ್ ಜನರಲ್ಲಿ ದೇವರನ್ನು ಮತ್ತು ಅವರ ಕಲ್ಯಾಣದಲ್ಲಿ ನನ್ನ ಕಲ್ಯಾಣವನ್ನು ಕಾಣುತ್ತೇನೆ," ಎಂದು ತಿಳಿಸಿದರು.
ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಜೀವನಜ್ಯೋತ್ ಕೌರ್ ವಿರುದ್ಧ 6,000 ಮತಗಳ ಅಂತರದಿಂದ ಸೋತಿದ್ದಾರೆ. 32,929 ಮತಗಳನ್ನು ಪಡೆದರೆ, ಎಂಎಸ್ ಕೌರ್ 39,520 ಮತಗಳನ್ನು ಪಡೆದಿದ್ದಾರೆ. ಈ ಹಿಂದೆ ಕ್ರಿಕೆಟಿಗರಾಗಿದ್ದ ನವಜೋತ್ ಸಿಂಗ್ ಸಿಧು, ಈ ಹಿಂದೆ ಅಮೃತಸರದಿಂದ ಬಿಜೆಪಿ ಟಿಕೆಟ್ನಲ್ಲಿ ಮೂರು ಲೋಕಸಭಾ ಚುನಾವಣೆಗಳನ್ನು ಗೆದ್ದಿದ್ದಾರೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಅವರು ಅಮೃತಸರ ಪೂರ್ವ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,000 ಮತಗಳ ಅಂತರದಿಂದ ಗೆದ್ದರು.
ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದ್ದು, ನೈತಿಕ ಹೊಣೆಹೊತ್ತು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಕ್ರಿಕೆಟರ್ ನವಜ್ಯೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. (ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications