Breaking; ರಾಜ್ಯಸಭೆ, ಕಾಂಗ್ರೆಸ್ ಶಾಸಕರು ರೆಸಾರ್ಟ್ನಿಂದ ವಾಪಸ್
ಚಂಡೀಗಢ್, ಜೂನ್ 10; ಹರ್ಯಾಣ ರಾಜ್ಯದ 2 ಸ್ಥಾನಗಳು ಸೇರಿದಂತೆ 16 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಶುಕ್ರವಾರ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಅಂತಿಮ ಕ್ಷಣದ ಕಸರತ್ತಿನಲ್ಲಿ ತೊಡಗಿವೆ.
ಶುಕ್ರವಾರ ಬೆಳಗ್ಗೆ ಹರ್ಯಾಣದ ಕಾಂಗ್ರೆಸ್ ಶಾಸಕರು ನವದೆಹಲಿಯ ರೆಸಾರ್ಟ್ನಿಂದ ಚಂಡೀಗಢ್ಗೆ ಪ್ರಯಾಣ ಆರಂಭಿಸಿದರು. ಜೂನ್ 2ರಿಂದ ರಾಯ್ಪುರ್ನ ರೆಸಾರ್ಟ್ನಲ್ಲಿದ್ದ ಕಾಂಗ್ರೆಸ್ ಶಾಸಕರು ಗುರುವಾರ ದೆಹಲಿಗೆ ಆಗಮಿಸಿದ್ದರು.
ಹರ್ಯಾಣ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗೆ ಕಾಂಗ್ರೆಸ್ನಿಂದ ಅಜಯ್ ಮಾಕನ್, ಬಿಜೆಪಿಯಿಂದ ಕೃಷ್ಣ ಪನ್ವಾರ್ ಅಭ್ಯರ್ಥಿಗಳು. ಆದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಾರ್ತೀಕೇಯ ಶರ್ಮಾ ಕಣಕ್ಕಿಳಿದಿದ್ದಾರೆ.

90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ 31, ಬಿಜೆಪಿ 40, ಜೆಜೆಪಿ 10 ಮತ್ತು ಪಕ್ಷೇತರರಾದ 7 ಶಾಸಕರು ಇದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿಯಿಂದ ಕಾಂಗ್ರೆಸ್ ತಮ್ಮ ಶಾಸಕರು, ಕೆಲವು ಪಕ್ಷೇತರ ಶಾಸಕರನ್ನು ರೆಸಾರ್ಟ್ಗೆ ಕರೆದುಕೊಂಡು ಹೋಗಿತ್ತು.
ಕೆಲವು ಪಕ್ಷೇತರ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡುತ್ತೇವೆ ಎಂಬುದನ್ನು ಇನ್ನೂ ಖಚಿತಪಡಿಸಿಲ್ಲ. ಹರ್ಯಾಣದ 2 ಕ್ಷೇತ್ರಗಳಿಗೆ 3 ಅಭ್ಯರ್ಥಿಗಳು ಕಣದಲ್ಲಿದ್ದು, ಯಾರಿಗೆ ಗೆಲುವು ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಶುಕ್ರವಾರ 15 ರಾಜ್ಯಗಳ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. 57 ಸ್ಥಾನಗಳ ಪೈಕಿ 11 ರಾಜ್ಯಗಳಿಂದ 41 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 16 ಸ್ಥಾನಗಳಿಗೆ ಮಾತ್ರ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಆರಂಭವಾಗಲಿದೆ.
ಕರ್ನಾಟಕದ 4 ಸ್ಥಾನಗಳಿಗೆ 6 ಅಭ್ಯರ್ಥಿಗಳು ಕಣದಲ್ಲಿದ್ದು ರಾಜ್ಯಸಭೆಗೆ ಹೋಗುವವರು ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಎರಡು ಮತ್ತು ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜೆಡಿಎಸ್ ಸಹ ಶಾಸಕರ ಬಲ ಇಲ್ಲದಿದ್ದರೂ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications