Breaking: ಚಂಡೀಗಢ ವಿವಿ ವಿಡಿಯೋ ವೈರಲ್; ಶಿಮ್ಲಾದಲ್ಲಿ ಯುವಕನ ಬಂಧನ
ಶಿಮ್ಲಾ, ಸೆ.19: ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರು ಆಕ್ಷೇಪಾರ್ಹ ವಿಡಿಯೋಗಳನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಪೊಲೀಸರು ಶಿಮ್ಲಾದಲ್ಲಿ 23 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ಶಿಮ್ಲಾ ಜಿಲ್ಲೆಯ ರೋಹ್ರು ಮೂಲದವನಾಗಿದ್ದು, ಆತನ ಊರಿನಲ್ಲಿಯೇ ಪೊಲೀಸರು ಬಂಧಿಸಿದ್ದಾರೆ.
ಇದೇ ಪ್ರಕರಣದಲ್ಲಿ ಶಿಮ್ಲಾದಿಂದ 31 ವರ್ಷದ ಯುವಕನನ್ನು ಪಂಜಾಬ್ ಪೊಲೀಸರು ಪರಿಶೀಲನೆಗಾಗಿ ವಶಕ್ಕೆ ಪಡೆದಿದ್ದಾರೆ. ಇನ್ನು ಘಟನೆಗೆ ಕಾರಣವಾದ ವಿಡಿಯೋಗಳನ್ನು ಚಿತ್ರೀಕರಿಸಿದ ಹುಡುಗಿಯೂ ಶಿಮ್ಲಾ ಜಿಲ್ಲೆಯ ರೋಹ್ರುಗೆ ಸೇರಿದವರಾಗಿದ್ದಾರೆ.
ಪ್ರಕರಣದಲ್ಲಿ ಬೇಕಾಗಿರುವ ಯುವಕನನ್ನು ಬಂಧಿಸುವಂತೆ ಪಂಜಾಬ್ ಡಿಜಿಪಿ ಗೌರವ್ ಯಾದವ್ ಅವರಿಂದ ಮನವಿ ಸ್ವೀಕರಿಸಲಾಗಿತ್ತು ಎಂದು ಹಿಮಾಚಲ ಪ್ರದೇಶ ಡಿಜಿಪಿ ಸಂಜಯ್ ಕುಂದು ಹೇಳಿದ್ದಾರೆ. ಆರೋಪಿಯ ವಿವರಗಳನ್ನು ಸಂಗ್ರಹಿಸಿದ ನಂತರ, ಪೊಲೀಸ್ ತಂಡವು ಅಂತಿಮವಾಗಿ ಆರೋಪಿ ಯುವಕನನ್ನು ರೋಹ್ರುದಿಂದ ಬಂಧಿಸಿದೆ ಎಂದು ಡಿಸಿಪಿ ಸಂಜಯ್ ಕುಂದು ಹೇಳಿದ್ದಾರೆ.

ಬಂಧನದ ನಂತರ ಪೊಲೀಸರು ಯುವಕನನ್ನು ರೋಹ್ರು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ. ಮೊಹಾಲಿಯಲ್ಲಿ ಎಫ್ಐಆರ್ ದಾಖಲಿಸಿದ ನಂತರ ಪ್ರಕರಣದ ತನಿಖೆ ನಡೆಸುತ್ತಿರುವ ಪಂಜಾಬ್ನ ಪೊಲೀಸ್ ತಂಡಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಈ ಪ್ರಕರಣದಲ್ಲಿ ಹಿಮಾಚಲ ಪೊಲೀಸರ ಪಾತ್ರ ಬಹಳ ಸೀಮಿತವಾಗಿದೆ ಎಂದು ಹೇಳಿದ್ದು, ಪಂಜಾಬ್ ಪೊಲೀಸರು ಮುಂದಿನ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕಾಗಿದೆ. ಶಿಮ್ಲಾ ಎಸ್ಪಿ ಅವರು ಮೊಹಾಲಿ ಎಸ್ಪಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ ಪೊಲೀಸರು ಪಂಜಾಬ್ ಪೊಲೀಸರ ಮನವಿಗೆ ಸೂಕ್ಷ್ಮತೆ ಮತ್ತು ವೃತ್ತಿಪರತೆಯಿಂದ ಪ್ರತಿಕ್ರಿಯಿಸಿದ್ದಾರೆ. ನಾವು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಶಿಮ್ಲಾ ಎಸ್ಪಿ ಡಾ ಮೋನಿಕಾ ಮತ್ತು ಅವರ ತಂಡವನ್ನು ಅಭಿನಂದಿಸುತ್ತಾ ಡಿಸಿಪಿ ಸಂಜಯ್ ಕುಂದು ಹೇಳಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications