ಯಾವಾಗ ರಾಜಕೀಯ ಬಿಡ್ತೀರಿ ಸಿಧು?: ಪಂಜಾಬ್ನಲ್ಲಿ ಬಿತ್ತಿಪತ್ರ
ಲೂಧಿಯಾನ, ಜೂನ್ 22: ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋತರೆ ರಾಜಕೀಯದಿಂದ ತ್ಯಜಿಸುವುದಾಗಿ ಹೇಳಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು ತಮ್ಮ ಆಶ್ವಾಸನೆಯನ್ನು ಉಳಿಸಿಕೊಳ್ಳುವಂತೆ ಲೂಧಿಯಾನದಲ್ಲಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ.
ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಸಚಿವೆ ಸ್ಮೃತಿ ಇರಾನಿ ಅವರ ಎದುರು ಅಮೇಥಿಯಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಸೋಲು ಅನುಭವಿಸಿದರೆ ರಾಜಕೀಯ ತ್ಯಜಿಸುವುದಾಗಿ ಹೇಳಿದ್ದರು.
ಇದನ್ನು ಪೋಸ್ಟರ್ಗಳಲ್ಲಿ ನೆನಪಿಸಿರುವ ಕೆಲವರು, 'ನೀವು ಯಾವಾಗ ರಾಜಕೀಯ ಬಿಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ. ನಿಮ್ಮ ಮಾತಿಗೆ ಬದ್ಧರಾಗಿ ಈಡೇರಿಸುವ ಸಮಯ ಬಂದಿದೆ. ನಿಮ್ಮ ರಾಜೀನಾಮೆಗೆ ಕಾಯುತ್ತಿದ್ದೇವೆ' ಎಂದು ಹೇಳಿದ್ದಾರೆ.

'ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋಲು ಅನುಭವಿಸಿದರೆ ನಾನು ರಾಜಕೀಯ ತ್ಯಜಿಸುತ್ತೇನೆ' ಎಂಬ ಸಿಧು ಅವರ ಹೇಳಿಕೆಯನ್ನು ಸಹ ಮುದ್ರಿಸಲಾಗಿದೆ. ಇದೇ ರೀತಿಯ ಪೋಸ್ಟರ್ಗಳು ಮೊಹಾಲಿಯಲ್ಲಿಯೂ ಶುಕ್ರವಾರ ಕಂಡುಬಂದಿದ್ದವು.
ನೆಹರೂ-ಗಾಂಧಿ ಕುಟುಂಬದ ಪ್ರಬಲ ನೆಲೆಯಾದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಸ್ಮೃತಿ ಇರಾನಿ ಎದುರು 55,120 ಮತಗಳಿಂದ ಸೋಲು ಅನುಭವಿಸಿದ್ದರು. ಇದು ಕಾಂಗ್ರೆಸ್ಗೆ ತೀವ್ರ ಆಘಾತ ಉಂಟುಮಾಡಿತ್ತು.
ಪಂಜಾಬ್ನಲ್ಲಿ ಹಾಗೂ ಇತರೆ ಕೆಲವೆಡೆ ಕಾಂಗ್ರೆಸ್ಗೆ ಹಿನ್ನಡೆಯಾಗಲು ನವಜೋತ್ ಸಿಂಗ್ ಸಿಧು ಅವರ ಹೇಳಿಕೆಗಳು ಹಾಗೂ ನಡೆಗಳೇ ಕಾರಣ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರೋಪಿಸಿದ್ದರು. ಅಲ್ಲದೆ, ಅವರ ಸಚಿವ ಸ್ಥಾನದಲ್ಲಿ ಹಿಂಬಡ್ತಿ ನೀಡಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications