ಪಂಜಾಬ್ ಸಿಎಂ ಸ್ಥಾನದಿಂದ ಅಮರಿಂದರ್ ಸಿಂಗ್ ರನ್ನು ತೆಗೆದಿದ್ದು ಏಕೆ?: ರಾಹುಲ್ ಗಾಂಧಿ ಬಿಚ್ಚಿಟ್ಟ ಗುಟ್ಟು
ಚಂಡೀಗಢ, ಫೆಬ್ರವರಿ 17: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕಾಂಗ್ರೆಸ್ ಏಕೆ ತೆಗೆದು ಹಾಕಿತು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿ ನಿಂತ ರಾಹುಲ್ ಗಾಂಧಿ, ಮಾಜಿ ಸಿಎಂ ವಿರುದ್ಧ ಬೆಂಕಿ ಉಗುಳಿದ್ದಾರೆ.
ಫತೇಘರ್ ಸಾಹಿಬ್ ಪ್ರದೇಶದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಬಡವರಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಸೇವೆ ಒದಗಿಸುವುದಕ್ಕೆ ಒಪ್ಪದಿರುವ ಕಾರಣಕ್ಕಾಗಿಯೇ ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಲಾಯಿತು ಎಂದು ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಏಕೆ ತೆಗೆದುಹಾಕಲಾಯಿತು ಎಂಬುದನ್ನು ನಾನು ನಿಮಗೆ ಹೇಳುತ್ತೇನೆ. ನಾನು ವಿದ್ಯುತ್ ಸರಬರಾಜು ಕಂಪನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ. ಬಡ ಜನರಿಗೆ ಉಚಿತ ವಿದ್ಯುತ್ ನೀಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ಅವರನ್ನು ತೆಗೆದು ಹಾಕಲಾಯಿತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಾದಕ ವಸ್ತುಗಳು ಯಾವಾಗಲೂ ಅಪಾಯಕಾರಿ:
ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, 'ಡ್ರಗ್ಸ್ ದೇಶಕ್ಕೆ ಅಪಾಯ ಎಂದು ಹೇಳುತ್ತಲೇ ಬಂದಿದ್ದೇನೆ, ಈಗ ಮತ್ತೆ ಹೇಳುತ್ತಿದ್ದೇನೆ. ಪಂಜಾಬ್ ಡ್ರಗ್ಸ್ ಕುರಿತು ಪ್ರಯೋಗ ಮಾಡಬೇಕಾದ ರಾಜ್ಯವಲ್ಲ. ಮಾದಕ ದ್ರವ್ಯಗಳು ಇಲ್ಲಿನ ಯುವಕರ ಜೀವನವನ್ನು ನಾಶಮಾಡುವುದನ್ನು ಮುಂದುವರೆಸಿದರೆ ಪಂಜಾಬ್ನಲ್ಲಿ ಅಭಿವೃದ್ಧಿ ಮತ್ತು ಬೆಳವಣಿಗೆ ಅರ್ಥಹೀನವಾಗುತ್ತದೆ ಎಂದಿದ್ದಾರೆ.
ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ:
ಇತ್ತೀಚಿಗಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಚುನಾವಣಾ ಭಾಷಣಗಳಲ್ಲಿ ದೇಶದ ನಿರುದ್ಯೋಗ ಮತ್ತು ಕಪ್ಪುಹಣದ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು. ನೋಟು ಅಮಾನ್ಯೀಕರಣ ಮತ್ತು ಸರಕು ಮತ್ತು ಸೇವಾ ತೆರಿಗೆಯ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿದರು. ನೋಟ್ ಬ್ಯಾನ್ ಮತ್ತು ಜಿಎಸ್ ಟಿ ಜಾರಿಯಿಂದ ಎರಡ್ಮೂರು ಬಿಲಿಯನೇರ್ಗಳು ಮಾತ್ರ ಲಾಭ ಪಡೆದುಕೊಂಡಿದ್ದಾರೆ ಎಂದು ದೂಷಿಸಿದರು. "ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಬಡತನವನ್ನು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಬಡವರು, ರೈತರು, ಸಣ್ಣ ವ್ಯಾಪಾರಿಗಳು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಿಗಳ ಪರ ಸರ್ಕಾರವನ್ನು ಚನ್ನಿ ಮುನ್ನೆಡೆಸುತ್ತಾರೆಯೇ ವಿನಃ ಕೋಟ್ಯಾಧಿಪತಿಗಳ ಸರ್ಕಾರವನ್ನಲ್ಲ," ಎಂದಿದ್ದರು.
ಒಂದೇ ಹಂತದಲ್ಲಿ ಪಂಜಾಬ್ ಚುನಾವಣೆ:
ಪಂಜಾಬ್ ವಿಧಾನಸಭೆಗೆ ಫೆಬ್ರವರಿ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications