ಕೈಯಲ್ಲಿ ಮಗು ಹಿಡಿದು ಟ್ರಾಫಿಕ್ ನಿಯಂತ್ರಿಸಿದ ಮಹಿಳಾ ಪೊಲೀಸ್: ವೈರಲ್ ವಿಡಿಯೋ
ಚಂಡೀಗಡ, ಮಾರ್ಚ್ 6: ಚಂಡೀಗಡದ ಮಹಿಳಾ ಸಂಚಾರ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ತಮ್ಮ ಹಸುಗೂಸನ್ನು ಕೈಯಲ್ಲಿ ಇರಿಸಿಕೊಂಡು ಬಿರು ಬಿಸಿಲಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಚಂಡೀಗಡದ ಸೆಕ್ಟರ್ 23-24ರಲ್ಲಿನ ರಸ್ತೆಯಲ್ಲಿ ಪುಟ್ಟ ಕಂದಮ್ಮನನ್ನು ಹೆಗಲಿಗೆ ಆನಿಸಿಕೊಂಡು ಟ್ರಾಫಿಕ್ ನಿರ್ವಹಣೆ ಮಾಡುವ ದೃಶ್ಯಕ್ಕೆ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಟ್ರಾಫಿಕ್ ಪೊಲೀಸ್ ಕಾನ್ಸ್ಟೆಬಲ್ ಪ್ರಿಯಾಂಕಾ, ಒಂದು ಕೈಯಲ್ಲಿ ಮಗು ಹಿಡಿದುಕೊಂಡು ಕಾರ್ಯನಿರ್ವಹಿಸಲು ಪರದಾಡಿದ್ದಾರೆ. ಅಲ್ಲಿ ಸಾಗುತ್ತಿದ್ದ ಪಾದಚಾರಿಯೊಬ್ಬರು ಈ ವಿಡಿಯೋ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಮಗುವಿನೊಂದಿಗೆ ಸಂಚಾರ ಕಚೇರಿಗೆ ಬಂದಿದ್ದ ಕಾನ್ಸ್ಟೆಬಲ್ಗೆ ರಜೆ ಬೇಕಿದ್ದರೆ ತೆಗೆದುಕೊಂಡು ಮನೆಗೆ ಹೋಗುವಂತೆ ಸಿಬ್ಬಂದಿ ಹೇಳಿದ್ದರು. ಆದರೆ ಮಗುವಿನೊಂದಿಗೇ ಕರ್ತವ್ಯ ನಿರ್ವಹಣೆ ಮಾಡಲು ಅವರು ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಾಗ್ವಾದ ನಡೆಸಿದ್ದರು...
ಪ್ರಿಯಾಂಕಾ ಅವರಿಗೆ ಬೆಳಿಗ್ಗೆ 8 ಗಂಟೆಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಬಂದಿರಲಿಲ್ಲ. ಅವರಿಗೆ ಕರೆ ಮಾಡಿ ಕರ್ತವ್ಯಕ್ಕೆ ಬರುವಂತೆ ಒತ್ತಾಯಿಸಲಾಗಿತ್ತು. ಇದರಿಂದ ಅವರು ತಮ್ಮ ಹಿರಿಯ ಅಧಿಕಾರಿಗಳ ಜತೆಗೆ ವಾಗ್ವಾದ ನಡೆಸಿದ್ದರು. ಬಳಿಕ ಮಗುವನ್ನು ಹಿಡಿದುಕೊಂಡೇ ಕೆಲಸಕ್ಕೆ ಹಾಜರಾಗಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
|
ಸ್ಫೂರ್ತಿದಾಯಕ ನಡೆ
ಆದರೆ ಈ ವಿಡಿಯೋಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ಸ್ಫೂರ್ತಿದಾಯಕ ನಡೆ. ಆಕೆ ಬಿಸಿಲಲ್ಲಿ ಮಗುವನ್ನು ಹಿಡಿದುಕೊಂಡು ಕರ್ತವ್ಯ ನಿರ್ವಹಣೆ ಮಾಡುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ.

ವಿಭಕ್ತ ಕುಟುಂಬಗಳ ಪರಿಣಾಮ
ಇನ್ನು ಅನೇಕರು ಪ್ರಿಯಾಂಕಾ ಅವರ ನಡೆಯನ್ನು ಟೀಕಿಸಿದ್ದಾರೆ. ಸಣ್ಣ ಮಗು ಈ ರೀತಿಯ ಬಿಸಿಲು ಹಾಗೂ ದೂಳನ್ನು ಸೇವಿಸಿದರೆ ಅದರ ಆರೋಗ್ಯಕ್ಕೆ ಮಾರಕ. ಮಕ್ಕಳನ್ನು ಸುರಕ್ಷಿತವಾಗಿರಿಸುವುದು ನಮ್ಮ ಮೊದಲ ಕರ್ತವ್ಯ. ಅದಕ್ಕಿಂತ ಯಾವ ಕರ್ತವ್ಯವೂ ದೊಡ್ಡದಲ್ಲ ಎಂದು ಹೇಳಿದ್ದಾರೆ. ವಿಭಕ್ತ ಕುಟುಂಬಗಳತ್ತ ಜನರು ಒಲವು ತೋರಿಸುತ್ತಿರುವುದರ ಫಲಿತಾಂಶ ಇದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಅನುಕಂಪ, ಪ್ರಚಾರದ ತಂತ್ರ
ಕೆಲವರಿಗೆ ಈ ರೀತಿ ಭಾವನಾತ್ಮಕವಾಗಿ ಜನರನ್ನು ಸೆಳೆಯುವ ಮೂಲಕ ಅನುಕಂಪ ಮತ್ತು ಪ್ರಚಾರ ಗಿಟ್ಟಿಸಿಕೊಳ್ಳುವುದು ಚಾಳಿಯಾಗಿದೆ. ಈ ಮೂಲಕ ನಮ್ಮ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಒಳಗಾಗುವಂತೆ ಮಾಡುತ್ತಾರೆ. ಮಕ್ಕಳನ್ನು ನಿಮ್ಮ ಪ್ರಚಾರಕ್ಕೆ ಬಳಸಿಕೊಳ್ಳುವುದನ್ನು ಬಿಟ್ಟುಬಿಡಿ ಎಂದು ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications