ಜಯಾ ಸಾವಿನ ಬಗ್ಗೆ ತಮಿಳುನಾಡು ಸರಕಾರ ಸುಳ್ಳು ಹೇಳಿದೆಯಾ?
ಚೆನ್ನೈ, ಮಾರ್ಚ್ 8: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಏನು ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತೋ ಅದನ್ನು ಬುಧವಾರ ಮಾಡಿದ್ದಾರೆ. ದಿವಂಗತ ಮುಖ್ಯಮಂತ್ರಿ ಜಯಲಲಿತಾ ಸಾವಿನ ತನಿಖೆಗೆ ಆಗ್ರಹಿಸಿ ಕೈಗೊಂಡಿದ್ದ ಒಂದು ದಿನದ ಉಪವಾಸ ಸತ್ಯಾಗ್ರಹದ ವೇಳೆ, "ನನಗೆ ಜಯಲಲಿತಾ ಅವರ ಸಾವಿನ ಬಗ್ಗೆ ತಿಳಿಸಿದ್ದು ಡಿಸೆಂಬರ್ 5ರ ಸಂಜೆ 6.30ರ ಸಮಯದಲ್ಲಿ" ಎಂದಿದ್ದಾರೆ.
ಜಯಲಲಿತಾ ಅವರ ಚಿಕಿತ್ಸೆ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳುತ್ತಿದ್ದ ಗುಂಪಿನಲ್ಲಿ ತಾವಿರಲಿಲ್ಲ. ಜಯಲಲಿತಾ ಅವರಿಗೆ ಚಿಕಿತ್ಸೆ ನಿಲ್ಲಿಸಿ ಎಂಬ ಸೂಚನೆ ನೀಡಿದ ಬಗ್ಗೆ ತಮಗೆ ಗೊತ್ತಿಲ್ಲ ಎಂದಿದ್ದಾರೆ ಒಪಿಎಸ್. ಜಯಾ ಸಾವಿನ ವಿಚಾರವಾಗಿ ಸೋಮವಾರ ತಮಿಳುನಾಡು ಸರಕಾರ ಪ್ರಕಟಣೆ ಬಿಡುಗಡೆ ಮಾಡಿತ್ತು. ಅದಕ್ಕೀಗ ಉತ್ತರ ಎಂಬಂತೆ ಪನ್ನೀರ್ ಸೆಲ್ವಂ ಮಾತನಾಡಿದ್ದಾರೆ.[ಜಯಲಲಿತಾ ಸಾವಿನ ರಹಸ್ಯ, ಪಾಂಡಿಯನ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ]

ಇನ್ನೊಂದು ಮುಖ್ಯ ಅಂಶ ಏನೆಂದರೆ, ಡಿಸೆಂಬರ್ 5, 2016ರಲ್ಲಿ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ಪ್ರಕಾರ ಜಯಲಲಿತಾ ಅವರು ರಾತ್ರಿ 11.30ರ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಒಪಿಎಸ್ ಬುಧವಾರ ತಿಳಿಸಿದ್ದೇನೆಂದರೆ. ಅಮ್ಮನ ಸಾವಿನ ಸುದ್ದಿ ಸಂಜೆ 6.30ಕ್ಕೆ ಗೊತ್ತಾಯಿತು ಎಂದು ಹೇಳಿದ್ದಾರೆ.
ತಮ್ಮ ಭಾಷಣದಲ್ಲಿ ಈ ವಿಚಾರ ಪ್ರಸ್ತಾವ ಮಾಡಿದ ಪನ್ನೀರ್ ಸೆಲ್ವಂ, ಜಯಲಲಿತಾ ಸಂಜೆ 4.30ಕ್ಕೆ ತೀರಿಕೊಂಡರು. ಅದರೆ ನನಗೆ ತಿಳಿಸಿದ್ದು ಸಂಜೆ 6.30ಕ್ಕೆ. ಆಕೆಗೆ ನೀಡಿದ ಚಿಕಿತ್ಸೆ ಬಗ್ಗೆ ಯಾವುದೇ ಮಾಹಿತಿ ಕೂಡ ನೀಡಿರಲಿಲ್ಲ ಎಂದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications