ತಂಗಿಯ ಕೈಕಾಲು ಕಟ್ಟಿ ನಿರಂತರ ಅತ್ಯಾಚಾರ: 15 ವರ್ಷದ ಬಾಲಕ ಅರೆಸ್ಟ್
ಚೆನ್ನೈ, ಮಾರ್ಚ್ 2: ಸ್ವಂತ ಸಹೋದರಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಕಾರಣಕ್ಕಾಗಿ 15 ವರ್ಷದ ಬಾಲಕನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನ ವಿಲ್ಲಿವಕ್ಕಂನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕನಾಗಿರುವ ಕಾರಣ ಪೋಸ್ಕೋ ಕಾಯ್ದೆಯಡಿ ಅರೆಸ್ಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
ತಂದೆ-ತಾಯಿಯ ಆಂತರಿಕ ಜಗಳದ ಬಳಿಕ ಅಣ್ಣ-ತಂಗಿ ಇಬ್ಬರು ತಾಯಿಯ ಜೊತೆ ಪ್ರತ್ಯೇಕವಾಗಿ ವಾಸವಾಗಿದ್ದರು. ಆರೋಪಿ ಬಾಲಕನಿಗೆ 15 ವರ್ಷ ವಯಸ್ಸಾಗಿದ್ದು, ಆತನಿಗಿಂತ ಒಂದು ವರ್ಷ ವರ್ಷ ತಂಗಿ ಚಿಕ್ಕವಳು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಬಾಲಕ ಮತ್ತು ಬಾಲಕಿಯ ತಂದೆ-ತಾಯಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಇಬ್ಬರಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮುಂದೆ ಓದಿ...

ಸ್ನೇಹಿತೆ ಮೂಲಕ ವಿಷಯ ಬಹಿರಂಗ
ಬಾಲಕನ ತಾಯಿ ಇನ್ನೊಂದು ಮದುವೆಯಾಗಿದ್ದು, ಎರಡನೇ ಪತಿ ಹಾಗೂ ಮಕ್ಕಳು ಎಲ್ಲರೂ ಒಟ್ಟಿಗೆ ಒಂದೇ ಮನೆಯಲ್ಲಿ ವಾಸವಿದ್ದರು. ಅತ್ಯಾಚಾರಕ್ಕೆ ಒಳಗಾಗಿದ್ದ ಹುಡುಗಿ ಶಾಲೆಯಲ್ಲಿ ತನ್ನ ಸ್ನೇಹಿತೆ ಬಳಿ ನಡೆದ ಘಟನೆಯನ್ನು ಹೇಳಿಕೊಂಡಿದ್ದಾರೆ. ಬಳಿಕವಷ್ಟೇ ಈ ಘಟನೆ ಬೆಳಕಿಗೆ ಬಂದಿದೆ.

ಅನೇಕ ಬಾರಿ ಅತ್ಯಾಚಾರವೆಸಗಿದ್ದ
ಕಳೆದ ಡಿಸೆಂಬರ್ ತಿಂಗಳಿನಿಂದ ಅನೇಕ ಬಾರಿ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದ ಎಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹುಡುಗಿಯ ಕೈಕಾಲು ಕಟ್ಟಿಹಾಕಿ ಬಲತ್ಕಾರ ಮಾಡುತ್ತಿದ್ದ. ಈ ವಿಷಯವನ್ನು ತಾಯಿಗೆ ಹೇಳಬಾರದು ಎಂದು ಭಯ ಪಡಿಸಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ.

ವಿಡಿಯೋ ಚಿತ್ರೀಕರಿಸಿರಬಹುದಾ?
ಹುಡುಗನ ಬಳಿ ಮೊಬೈಲ್ ಇದ್ದ ಕಾರಣ ಘಟನೆ ಬಗ್ಗೆ ಏನಾದರೂ ವಿಡಿಯೋ ಚಿತ್ರೀಕರಿಸಿರಬಹುದಾ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಕೌನ್ಸಲಿಂಗ್ ಗೆ ಒಳಪಡಿಸಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕಲು ಪೊಲೀಸರು ಪ್ರಯತ್ನಿಸಿದ್ದಾರೆ.

ಹೆಚ್ಚಿನ ತನಿಖೆ ಅವಶ್ಯಕ
ಬಾಲಕ ಮತ್ತು ಬಾಲಕಿ ಇಬ್ಬರು ಅಪ್ರಾಪ್ತ ವಯಸ್ಸಿನ ಸನಿಹದಲ್ಲಿದ್ದು, ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಅವಶ್ಯಕತೆ ಇದೆ ಎಂದು ಪೊಲೀಸರು ನಿರ್ಧರಿಸಿದ್ದಾರೆ. ಹೀಗಾಗಿ, ಆರೋಪಿ ಬಾಲಕನ ಮನಸ್ಥಿತಿ ಕುರಿತು ಪೋಕಸ್ ಮಾಡಿದ್ದು, ಚಲನವಲನ ಗಮನಿಸುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications