ಟಿಟಿವಿ ದಿನಕರನ್ ಜತೆಗಿದ್ದ ಎಐಎಡಿಎಂಕೆ 18 ಶಾಸಕರು ಅನರ್ಹ
ಚೆನ್ನೈ, ಸೆಪ್ಟೆಂಬರ್ 18: ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಪಲ್ಲಟವಾಗಿದೆ. ಟಿಟಿವಿ ದಿನಕರನ್ ಜತೆಗಿದ್ದ ಎಐಎಡಿಎಂಕೆಯ 18 ಶಾಸಕರನ್ನು ಅನರ್ಹಗೊಳಿಸಲಾಗಿದೆ.
18 ಶಾಸಕರನ್ನು ಅನರ್ಹಗೊಳಿಸಿ ತಮಿಳುನಾಡು ವಿಧಾನಸಭೆಯ ಸ್ಪೀಕರ್ ಕೆ ಧನಪಾಲ್ ಆದೇಶ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಸದಸ್ಯರ ಪಕ್ಷಾಂತರ ವಿರೋಧಿ ಕಾಯ್ದೆ - 1986 ಅಡಿಯಲ್ಲಿ ಶಾಸಕರನ್ನು ಅವರು ಅನರ್ಹಗೊಳಿಸಿದ್ದಾರೆ. ಶಾಸಕರನ್ನು ಅನರ್ಹಗೊಳಿಸುವಂತೆ ಎಐಎಡಿಎಂಕೆ ಪಕ್ಷದ ಕಡೆಯಿಂದ ಸ್ಪೀಕರ್ ಗೆ ಮನವಿ ಮಾಡಲಾಗಿತ್ತು.

18 ಶಾಸಕರನ್ನು ಜತೆಗಿರಿಸಿಕೊಂಡಿದ್ದ ಶಶಿಕಲಾ ನಟರಾಜನ್ ಆಪ್ತ ಟಿಟಿವಿ ದಿನಕರನ್ ಸರಕಾರ ಉರುಳಿಸುವ ಬೆದರಿಕೆ ಹಾಕುತ್ತಾ ಬಂದಿದ್ದರು. ಎಡಪ್ಪಾಡಿ ಪಳನಿಸ್ವಾಮಿ ಸರಕಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದು ಮದ್ರಾಸ್ ಹೈಕೋರ್ಟ್ ಮೊರೆಯೂ ಹೋಗಿದ್ದರು.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 117 ಶಾಸಕರ ಬೆಂಬಲ ಅಗತ್ಯವಾಗಿತ್ತು. ಈ ಹಿಂದೆ ಎಐಎಡಿಎಂಕೆ ಬಳಿ 134 ಶಾಸಕರಿದ್ದರು. ಆದರೆ, ಇದೀಗ 18 ಶಾಸಕರು ಅನರ್ಹವಾಗಿರುವುದರಿಂದ ಜತೆಗೆ ಜಯಲಲಿತಾ ನಿಧನದಿಂದ ತೆರವಾಗಿರುವ ಒಂದು ಸ್ಥಾನ ಸೇರಿ ಒಟ್ಟು 19 ಸ್ಥಾನಗಳು ತೆರವಾಗಿದ್ದು ವಿಧಾನಸಭೆಯ ಸಂಖ್ಯಾಬಲ 215ಕ್ಕೆ ಕುಸಿದಿದೆ.
ಹೀಗಾಗಿ ಬಹುಮತಕ್ಕೆ ಕೇವಲ 108 ಶಾಸಕರು ಅಗತ್ಯವಾಗಿದೆ. ಸದ್ಯ ಎಐಎಡಿಎಂಕೆ ಬಳಿ ಅನರ್ಹಗೊಂಡ ಶಾಸಕರು ಹೊರತುಪಡಿಸಿ 116 (ಸ್ಪೀಕರ್ ಸೇರಿ) ಶಾಸಕರಿದ್ದಾರೆ. ಹೀಗಾಗಿ ಹಾಲಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮುಖ್ಯಮಂತ್ರಿ ಗಾದಿ ಅಬಾಧಿತವಾಗಿದೆ.
-
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications