ಚೆನ್ನೈ ಪ್ರವಾಹದಲ್ಲಿ ಕೊಚ್ಚಿಹೋದ ವ್ಯಕ್ತಿಯ ಪತ್ತೆ ಹಚ್ಚಿತು ಟ್ಯಾಟು
ನಾಗಪಟ್ಟಿನಂ, ಡಿಸೆಂಬರ್, 10: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಿಂದ ನಾಪತ್ತೆಯಾದ ತಾಯಿ, ಸ್ನೇಹಿತರು ಸಿಕ್ಕಿದ್ದಾರೆ, ಪೊಲೀಸರು ಕಳ್ಳರನ್ನು ಹಿಡಿದಿದ್ದಾರೆ. ಕಳುವಾದ ವಸ್ತುಗಳು ದೊರಕಿವೆ. ಇದೀಗ ಚೆನ್ನೈ ಜಲಪ್ರಳಯದಲ್ಲಿ ಸಿಲುಕಿದ್ದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದ ಸಂಬಂಧಿಕರಿಗೆ ಆತನ ಬಗ್ಗೆ ಮಾಹಿತಿ ದೊರೆತಿದೆ.
ತಾರಾಂಗಮ್ ಬಾಡಿ ಗ್ರಾಮಪಂಚಾಯತಿ ಕೌನ್ಸಿಲರ್ ಫೇಸ್ ಬುಕ್ ನಲ್ಲಿ ಹಾಕಿದ ಮಾಹಿತಿಯಿಂದಾಗಿ ಚೆನ್ನೈ ಪ್ರವಾಹದಲ್ಲಿ ಸಿಲುಕಿ ಸತ್ತ ವ್ಯಕ್ತಿಯ ಮೃತದೇಹವನ್ನು ಆತನ ಸಂಬಂಧಿಕರು ಗುರುತಿಸಿದ್ದು, ಆತನ ನಿರೀಕ್ಷೆಯಲ್ಲಿದ್ದ ಕುಟುಂಬದವರಿಗೆ ಇದೀಗ ದಿಕ್ಕು ತೋಚದಂತಾಗಿದೆ.[ತಾಯಿ ಶವದ ಮುಂದೆ 20 ಗಂಟೆ ಕೂತಿದ್ದ ಮಗಳು]

ಚೆನ್ನೈ ಸಮೀಪದ ತಾರಾಂಗಮ್ ಬಾಡಿ ಗ್ರಾಮಪಂಚಾಯತಿ ಕೌನ್ಸಿಲರ್ ಎಂ. ಅರುಣ್ ಕುಮಾರ್ ಅವರು ಎದೆ, ಬಲಭುಜ ಹಾಗೂ ಕೈ ಮೇಲಿರುವ ಮೂರು ಟ್ಯಾಟುಗಳ ಫೋಟೋ ತೆಗೆದು ಇವರು ತಮಿಳುನಾಡಿನ ಪೊರಯಾರ್ ಸರ್ಕಾರಿ ಆಸ್ಪತ್ರೆಯಲ್ಲಿದ್ದಾರೆ ಎಂದು ಫೇಸ್ ಬುಕ್ ಗೆ ಹಾಕಿದ್ದಾರೆ.
ಅರುಣ್ ಕುಮಾರ್ ಹಾಕಿದ ಫೋಟೋ ಹಲವು ಜನರಿಗೆ ಶೇರ್ ಆಗಿ ಸಂಬಂಧಿಕರಿಗೆ ತಲುಪಿದೆ. ಬಳಿಕ ಅರುಣ್ ಕುಮಾರ್ ಅವರನ್ನು ಸಂಜಯ್ ಎಂಬ ವ್ಯಕ್ತಿ ಭೇಟಿ ಮಾಡಿ ಸಾವನ್ನಪ್ಪಿರುವ ವ್ಯಕ್ತಿ ಜೆಯರಾಜ್(35), ಇವರು ಆಟೋ ಡ್ರೈವರ್ ಆಗಿದ್ದು, ಸುಂದನ್ದೀರ ನಗರದಲ್ಲಿ ವಾಸವಾಗಿದ್ದರು ಎಂದು ಹೇಳಿದ್ದಾರೆ.[ಭರ್ತಿ ಮಳೆಯಲ್ಲೂ ಹಾಲು ಹಾಕಲು ಬಂದ ಮಹಿಳೆಗೆ ಸಲಾಂ!]
ಜೆಯರಾಜ್ ಬದುಕಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಆತನ ಕುಟುಂಬದವರು ಥೌಸೆಂಡ್ ಲೈಟ್ ಪೊಲೀಸ್ ಠಾಣೆಯಲ್ಲಿ ಕಳುವಾಗಿರುವುದರ ಬಗ್ಗೆ ದೂರು ದಾಖಲಿಸಿದ್ದರು. ಜೆಯರಾಜ್ ಸಿಕ್ಕಿದ ವಿಚಾರ ತಿಳಿದ ಆತನ ಹೆಂಡತಿ, ಸಂಬಂಧಿಕರು ಆತನನ್ನು ನೋಡಲು ಆಗಮಿಸಿದರು.
ಸ್ಥಳಕ್ಕೆ ಆಗಮಿಸಿದ ಹೆಂಡತಿಯು 'ಎದೆಯ ಮೇಲಿರುವುದು ನನ್ನ ಹೆಸರಿನ ಟ್ಯಾಟು, ಕೈ ಮೇಲೆ ದೊಡ್ಡ ಮಗನ ಹೆಸರು, ಭುಜದ ಮೇಲೆ ಇನ್ನೊಬ್ಬ ಮಗುವಿನ ಹೆಸರು ಹಾಕಿಸಿಕೊಂಡಿದ್ದರು' ಎಂದು ಸತ್ತಿರುವ ಜೆಯರಾಜ್ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಾ ಟ್ಯಾಟುವಿನ ಸಹಾಯದಿಂದ ಮೃತದೇಹ ಗುರುತಿಸಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications