Get Updates
Get notified of breaking news, exclusive insights, and must-see stories!

ತಮಿಳುನಾಡು; ಕೆಲವು ನಗರದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ

ಚೆನ್ನೈ, ಏಪ್ರಿಲ್ 29 : ತಮಿಳುನಾಡು ಸರ್ಕಾರ ಲಾಕ್ ಡೌನ್ ನಿಯಮದಲ್ಲಿ ಕೆಲವು ಬದಲಾವಣೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ 2058 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, 25 ಜನರು ಮೃತಪಟ್ಟಿದ್ದಾರೆ.

ಬುಧವಾರ ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಬಳಿಕ ಕೆಲವು ನಗರಗಳಲ್ಲಿ ನಿಯಮ ಬದಲಾವಣೆಗೆ ಸೂಚಿಸಿದರು.

ಚೆನ್ನೈ, ಕೊಯಂಬತ್ತೂರು ಮತ್ತು ಮಧುರೈನಲ್ಲಿ ಏಪ್ರಿಲ್ 30ರಂದು ಅಂಗಡಿಗಳು ಬೆಳಗ್ಗೆ 6 ರಿಂದ ಸಂಜೆ 5 ಗಂಟೆ ತನಕ ತೆರೆದಿರಲು ಅವಕಾಶ ನೀಡಲಾಗಿದೆ. ಅಗತ್ಯ ವಸ್ತು, ತರಕಾರಿ, ಹಣ್ಣಿನ ಅಂಗಡಿ ಮಾತ್ರ ತೆರೆಯಬಹುದು.

Lockdown Relaxation In Chennai Coimbatore And Madurai

ಆದೆರೆ, ಮೇ 1ರಿಂದ ಅಂಗಡಿಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯ ತನಕ ಮಾತ್ರ ತೆರೆದಿರುತ್ತವೆ. "ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಗುಂಪು ಸೇರಬಾರದು" ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

ಮೇ 3ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ರಾಜ್ಯ ಸರ್ಕಾರ ಇನ್ನೂ ತೀರ್ಮಾನವನ್ನು ಕೈಗೊಂಡಿಲ್ಲ ಅಂತರರಾಜ್ಯದ ಗಡಿಗಳನ್ನು ಬಂದ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಸಾರಿಗೆ ವ್ಯವಸ್ಥೆಯನ್ನು ಪುನಃ ಆರಂಭಿಸುವ ಸಾಧ್ಯತೆ ಕಡಿಮೆ ಇದೆ.

ರಾಜ್ಯದಲ್ಲಿ ಇದುವರೆಗೂ 2058 ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿದೆ. ಇದರಲ್ಲಿ ಚೆನ್ನೈನಲ್ಲಿ 678 ಪ್ರಕರಗಳಿವೆ. ಕೊಯಂತ್ತೂರಿನಲ್ಲಿ 141 ಪ್ರಕರಣ, ಮಧುರೈನಲ್ಲಿ 79 ಪ್ರಕರಣಗಳು ವರದಿಯಾಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+