ಪ್ರಾಕೃತಿಕ ವಿಕೋಪ; 5 ರಾಜ್ಯಗಳಿಗೆ ಹೆಚ್ಚುವರಿ 3,113 ಕೋಟಿ ರೂ ನೆರವು
ನವದೆಹಲಿ, ಫೆಬ್ರುವರಿ 13: 2020ರಲ್ಲಿ ಪ್ರಾಕೃತಿಕ ವಿಕೋಪಗಳನ್ನು ಹಾಗೂ ಕೀಟ ದಾಳಿಯನ್ನು ಎದುರಿಸಿದ್ದ ಐದು ರಾಜ್ಯಗಳಿಗೆ 3,113 ಕೋಟಿ ರೂಪಾಯಿ ನೆರವು ನೀಡಲು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಶನಿವಾರ ಉನ್ನತ ಮಟ್ಟದ ಸಮಿತಿ ಸಭೆ ನಡೆದಿದ್ದು, ಕೇಂದ್ರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಆರ್ಎಂಎಫ್) ಇಂದ ಆಂಧ್ರ ಪ್ರದೇಶ, ಬಿಹಾರ, ತಮಿಳುನಾಡು, ಪುದುಚೆರಿ ಹಾಗೂ ಮಧ್ಯಪ್ರದೇಶಕ್ಕೆ ಹೆಚ್ಚುವರಿ ನೆರವು ದೊರೆಯಲಿರುವುದಾಗಿ ಗೃಹ ಸಚಿವಾಲಯ ಹೇಳಿಕೆ ಪ್ರಕಟಿಸಿದೆ.
ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, 2020ರಲ್ಲಿ ಪ್ರವಾಹ, ಚಂಡಮಾರುತ (ನಿವಾರ್ ಹಾಗೂ ಬುರೇವಿ), ಕೀಟದಾಳಿ ಎದುರಿಸಿದ ಐದು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಹೆಚ್ಚುವರಿ ನೆರವು ನೀಡಲಾಗುತ್ತಿದೆ. ಪ್ರವಾಹ ಪರಿಸ್ಥಿತಿ ಎದುರಿಸಿದ್ದ ಆಂಧ್ರ ಪ್ರದೇಶಕ್ಕೆ 280.78 ಕೋಟಿ ರೂ, ಬಿಹಾರಕ್ಕೆ 1,255.27 ಕೋಟಿ ರೂಪಾಯಿ ನೆರವು ಸಿಕ್ಕಿದೆ. ತಮಿಳುನಾಡಿಗೆ, ನಿವಾರ್ ಚಂಡಮಾರುತ ಪರಿಹಾರಕ್ಕೆ 63.14 ಕೋಟಿ ರೂ ಹಾಗೂ ಬುವೇರಿ ಚಂಡಮಾರುತ ಪರಿಹಾರಕ್ಕೆ 223.77 ಕೋಟಿ ರೂ ಸಿಕ್ಕಿದ್ದು, ಒಟ್ಟಾರೆ 286.91 ಕೋಟಿ ರೂಪಾಯಿ ದೊರೆತಿದೆ.

ನಿವಾರ್ ಚಂಡಮಾರುತದ ಪರಿಣಾಮ ಬೀರಿದ್ದ ಕೇಂದ್ರಾಡಳಿತ ಪ್ರದೇಶ ಪುದುಚೆರಿಗೆ 9.91 ಕೋಟಿ ರೂಪಾಯಿ ದೊರೆತಿದೆ. ಮಿಡತೆ ದಾಳಿಯಿಂದ ಕೃಷಿ ನಷ್ಟಕ್ಕೆ ತುತ್ತಾಗಿದ್ದ ಮಧ್ಯ ಪ್ರದೇಶಕ್ಕೆ 1,280.18 ಕೋಟಿ ರೂ ನೆರವು ಸಿಕ್ಕಿದೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications