65ರ ಈ ಮಹಿಳೆ ವಾಸ 20 ವರ್ಷದಿಂದ ಸಾರ್ವಜನಿಕ ಶೌಚಾಲಯದಲ್ಲಿ
ಮದುರೈ (ತಮಿಳುನಾಡು), ಆಗಸ್ಟ್ 23: ಎರಡು ದಶಕದಿಂದ ಸಾರ್ವಜನಿಕ ಶೌಚಾಲಯವನ್ನೇ ಮನೆಯಂತೆ ಮಾಡಿಕೊಂಡು, ಜೀವನ ನಡೆಸುತ್ತಿರುವ ಈ ಮಹಿಳೆಗೆ ತನ್ನ ಅರವತ್ತೈದನೇ ವಯಸ್ಸಿನಲ್ಲಿ ನೆರವಿನ ಹಸ್ತ ಚಾಚುತ್ತಿದ್ದಾರೆ ಜನರು. ಈಕೆ ಹೆಸರು ಕರುಪ್ಪಾಯಿ. ತಮಿಳುನಾಡಿನ ಮದುರೈನ ರಾಮ್ ನಾಡ್ ಪ್ರದೇಶದ ಸಾರ್ವಜನಿಕ ಶೌಚಾಲಯದಲ್ಲೇ ಕಳೆದ ಇಪ್ಪತ್ತು ವರ್ಷದಿಂದ ವಾಸ ಮಾಡುತ್ತಿದ್ದಾರೆ.
ಜೀವನ ನಿರ್ವಹಣೆಗೆ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಾರೆ. ಅದರಿಂದ ಆಕೆಗೆ ದಿನಕ್ಕೆ ಎಪ್ಪತ್ತರಿಂದ ಎಂಬತ್ತು ರುಪಾಯಿ ವರಮಾನ ಇದೆ. "ನಾನು ಹಿರಿಯ ನಾಗರಿಕರ ಪಿಂಚಣಿಗಾಗಿ ಅರ್ಜಿ ಹಾಕಿದೆ. ಆದರೆ ನನಗೆ ದೊರೆಯಲಿಲ್ಲ. ಕಲೆಕ್ಟರ್ ಕಚೇರಿಯಲ್ಲಿ ಹಲವು ಅಧಿಕಾರಿಗಳನ್ನು ಭೇಟಿ ಮಾಡಿದೆ. ಯಾವುದರಿಂದಲೂ ಪ್ರಯೋಜನ ಆಗಿಲ್ಲ" ಎಂದು ಎಎನ್ ಐ ಸುದ್ದಿ ಸಂಸ್ಥೆ ಬಳಿ ತಮ್ಮ ಸಂಕಷ್ಟವನ್ನು ಕರುಪ್ಪಾಯಿ ಹೇಳಿಕೊಂಡಿದ್ದಾರೆ.

ಬೇರೆ ಯಾವುದೇ ಆದಾಯ ಮೂಲ ಇಲ್ಲದ ಕಾರಣದಿಂದ ಇಂಥದ್ದೊಂದು ಜೀವನ ಶೈಲಿಗೆ ಒಗ್ಗಿಕೊಳ್ಳುವುದು ಕರುಪ್ಪಾಯಿಗೆ ಅನಿವಾರ್ಯ ಆಗಿದೆ. ''ನನಗೆ ಬೇರೆ ಯಾವುದೇ ಆದಾಯ ಮೂಲ ಇಲ್ಲ. ಆದ್ದರಿಂದ ಈ ಸಾರ್ವಜನಿಕ ಶೌಚಾಲಯದಲ್ಲೇ ವಾಸ ಇದ್ದೀನಿ. ದಿನಕ್ಕೆ ಎಪ್ಪತ್ತರಿಂದ ಎಂಬತ್ತು ರುಪಾಯಿ ದುಡಿಯುತ್ತೀನಿ. ನನಗೆ ಒಬ್ಬಳು ಮಗಳಿದ್ದಾಳೆ. ಅವಳು ಯಾವತ್ತಿಗೂ ನನ್ನನ್ನು ನೋಡಲು ಬಂದಿಲ್ಲ" ಎನ್ನುತ್ತಾರೆ.

ಕರುಪ್ಪಾಯಿ ಬಗ್ಗೆ ಎಎನ್ ಐ ಸುದ್ದಿ ಸಂಸ್ಥೆಯಿಂದ ವರದಿ ಆದ ಮೇಲೆ ಹಲವು ಮಂದಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇನ್ನೂ ಹಲವರು ಸರಕಾರಿ ಅಧಿಕಾರಿಗಳ ಗಮನಕ್ಕೆ ತಂದು, ಕರುಪ್ಪಾಯಿಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications