ಕರುಪ್ಪನಸಾಮಿ ದೇವಾಲಯದಲ್ಲಿ ಕಾಲ್ತುಳಿತಕ್ಕೆ ಏಳು ಮಂದಿ ಸಾವು
ತಿರುಚ್ಚಿ (ತಮಿಳುನಾಡು), ಏಪ್ರಿಲ್ 21: ನಾಲ್ವರು ಮಹಿಳೆಯರು ಸೇರಿ ಏಳು ಮಂದಿ ಕರುಪ್ಪನಸಾಮಿ ದೇವಾಲಯದಲ್ಲಿ ಕಾಲ್ತುಳಿತಕ್ಕೆ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ತುರೈಯೂರು ಬಳಿಯ ಮುತ್ತೈಯಮ್ ಪಾಳ್ಯಂ ಬಳಿ ಇರುವ ದೇವಾಲಯದಲ್ಲಿ ಬೆಳಗ್ಗೆ 10.45ರ ಹೊತ್ತಿಗೆ ಸಂಭವಿಸಿದೆ. ಚಿತ್ರ ಪೌರ್ಣಮಿ ಭಾಗವಾಗಿ 'ಪಿಡಿಕಾಸು' (ನಾಣ್ಯಗಳು) ಹಂಚುವ ವೇಳೆ ಘಟನೆ ಸಂಭವಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಭಕ್ತಾದಿಗಳು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು. ಆ ನಂತರ ನಾಣ್ಯಗಳನ್ನು ಹೆಕ್ಕಿಕೊಳ್ಳಲು ಮುಗಿ ಬಿದ್ದಿದ್ದರಿಂದ ಭಾರೀ ಅನಾಹುತ ಸಂಭವಿಸಿದೆ. ಆರ್.ಲಕ್ಷ್ಮೀಕಾಂತನ್, ಕೆ.ರಾಜ್ ವೇಲ್, ಎಸ್. ಗಂಧಾಯಿ, ಎ.ಶಾಂತಿ, ರಾಮರ್, ವಿ.ಪೂಂಗಾವನಮ್ ಮತ್ತು ಆರ್.ವಲ್ಲಿ ಮೃತ ದುರ್ದೈವಿಗಳು.

ಇವರೆಲ್ಲರೂ ಕರೂರ್, ಕಡಲೂರ್, ಸೇಲಂ, ನಾಮಕ್ಕಲ್ ಮತ್ತು ವಿಲ್ಲುಪುರಂ ಜಿಲ್ಲೆಗೆ ಸೇರಿದವರು. ಈ ದೇವಸ್ಥಾನದ ವಾರ್ಷಿಕ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ಕಾಲ್ತುಳಿತ ಸಂಭವಿಸಿದ್ದರಿಂದ ಅನಾಹುತ ಆಗಿದೆ. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂಬ ಆತಂಕ ಆರಂಭದಲ್ಲಿ ಇತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications