ರಾಜಭವನದಲ್ಲಿ 84 ಜನರಿಗೆ ಕೊರೊನಾ ವೈರಸ್ ದೃಢ
ಚೆನ್ನೈ, ಜುಲೈ 23: ತಮಿಳುನಾಡಿನ ರಾಜ್ಯಪಾಲರ ರಾಜಭವನದಲ್ಲಿ 84 ಜನರಿಗೆ ಕೊರೊನಾ ವೈರಸ್ ತಗುಲಿರುವುದು ಖಚಿತವಾಗಿದೆ. ತಮಿಳುನಾಡಿನಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜಭವನದಲ್ಲಿ ಸಾಮೂಹಿಕ ಪರೀಕ್ಷೆ ಮಾಡಲಾಗಿದೆ. ಈ ವೇಳೆ 84 ಜನರಿಗೆ ಕೊವಿಡ್ ದೃಢವಾಗಿದೆ ಎಂದು ತಿಳಿದು ಬಂದಿದೆ.
Recommended Video
ಈ ಕುರಿತು ರಾಜಭವನದಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದ್ದು, ''ಒಟ್ಟು 147 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಲಾಗಿತ್ತು. ಅದರಲ್ಲಿ 84 ಜನರಿಗೆ ಸೋಂಕು ದೃಢವಾಗಿದೆ. ಇನ್ನು ಕೆಲವರಿಗೆ ಸೋಂಕಿನ ಲಕ್ಷಣ ಕಂಡು ಬಂದಿದೆ'' ಎಂದು ತಿಳಿಸಿದೆ.
ರಾಜಭವನದಲ್ಲಿ ಸೋಂಕು ತಗುಲಿರುವ ಎಲ್ಲರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿದೆ. ಹಲವರನ್ನು ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಸಿಬ್ಬಂದಿ ಎಲ್ಲರೂ ರಾಜಭವನದ ಹೊರಗೆ ಕೆಲಸ ನಿರ್ವಹಿಸಿದವರು. ಇವರೆಲ್ಲರೂ ರಾಜ್ಯಪಾಲರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಂಪರ್ಕಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ರಾಜಭವನದಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ಇಡೀ ರಾಜ್ಯಪಾಲರ ಭವನದಲ್ಲಿ ಆರೋಗ್ಯ ಅಧಿಕಾರಿಗಳು ಔಷಧಿ ಸಿಂಪಡಣೆ ಮಾಡಿದ್ದಾರೆ.
ಪ್ರಸ್ತುತ, ತಮಿಳುನಾಡಿನಲ್ಲಿ ಒಟ್ಟು 1,86,492 ಮಂದಿಗೆ ಕೊರೊನಾ ವೈರಸ್ ತಗುಲಿದೆ. ಅದರಲ್ಲಿ 1,31,583 ಜನರು ಚೇತರಿಕೆ ಕಂಡಿದ್ದು, ಇನ್ನು 51,765 ಕೇಸ್ಗಳು ಸಕ್ರಿಯವಾಗಿದೆ. ಈವರೆಗೂ 3,144 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications