'ಹೇರ್ ಕಟ್ಟಿಂಗ್' ಗೂ ಆಧಾರ್ ಕಾರ್ಡ್ ಕಡ್ಡಾಯ ಮಾಡಿದ ಸರಕಾರ
ಚೆನ್ನೈ, ಜೂನ್ 3: ಕೊರೊನಾ ವೈರಸ್ ತೀವ್ರವಾಗಿ ಆಘಾತ ನೀಡಿದ ರಾಜ್ಯಗಳಲ್ಲಿ ತಮಿಳುನಾಡು ಕೂಡಾ ಒಂದು. ವಿಪರೀತವಾಗಿ ಏರುತ್ತಿರುವ ಸೋಂಕಿತರ ಸಂಖ್ಯೆಯನ್ನು ಹತೋಟಿಗೆ ತರಲು ವಿಶಿಷ್ಟ ಪ್ರಯತ್ನಕ್ಕೆ ಅಲ್ಲಿನ ಪಳನಿಸ್ವಾಮಿ ಸರಕಾರ ಮುಂದಾಗಿದೆ.
Recommended Video
ಇರೋಬರೋದಕ್ಕೆಲ್ಲಾ ಆಧಾರ್ ಕಡ್ಡಾಯ ಮಾಡಲಾಗುತ್ತಿರುವ ಈ ಸಮಯದಲ್ಲಿ ತಮಿಳುನಾಡು ಸರಕಾರ ಹೇರ್ ಕಟ್ಟಿಂಗ್ ಗೂ ಆಧಾರ್ ಕಾರ್ಡ್ ತೋರಿಸುವುದನ್ನು ಅಥವಾ ನಂಬರ್ ಹೇಳುವುದನ್ನು ಕಡ್ಡಾಯ ಮಾಡಿದೆ.
ಮಂಗಳವಾರ (ಜೂ 2) ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೇರ್ ಕಟ್ಟಿಂಗ್, ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮಾಲೀಕರು, ತಮ್ಮ ಗ್ರಾಹಕರಿಂದ ಆಧಾರ್ ಕಾರ್ಡ್ ಮಾಹಿತಿಯನ್ನು ಪಡೆದು ಸೇವೆಯನ್ನು ನೀಡುವುದನ್ನು ಕಡ್ಡಾಯ ಮಾಡಲಾಗಿದೆ.

"ತೀವ್ರವಾಗಿ ಹರಡುತ್ತಿರುವ ಸೋಂಕನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ" ಎಂದಿರುವ ಸಿಎಂ ಪಳನಿಸ್ವಾಮಿ, "ಗ್ರಾಹಕರಿಂದ ಹೆಸರು, ದೂರವಾಣಿ ಸಂಖ್ಯೆ, ವಿಳಾಸ, ಆಧಾರ್ ಕಾರ್ಡ್ ನಂಬರ್ ಅನ್ನು ಪುಸ್ತಕದಲ್ಲಿ ನೊಂದಾಯಿಸಕೊಳ್ಳಬೇಕು"ಎಂದು ಅಂಗಡಿ ಮಾಲೀಕರಿಗೆ ಸೂಚಿಸಿದ್ದಾರೆ.
ಮೇ 24ರಿಂದ ತಮಿಳುನಾಡಿನಲ್ಲಿ ಸಲೂನ್ ಓಪನ್ ಮಾಡಲು, ಮತ್ತು, ಜೂನ್ ಒಂದರಿಂದ ಚೆನ್ನೈ ನಗರದಲ್ಲೂ ಕಟ್ಟಿಂಗ್ ಶಾಪ್ ತೆರೆಯಲು ಸರಕಾರ ಅನುಮತಿ ನೀಡಿತ್ತು. ಆದರೂ, ಜೂನ್ 30ರ ವರೆಗೆ ಲಾಕ್ ಡೌನ್ ಅನ್ನು ತಮಿಳುನಾಡಿನಲ್ಲಿ ಮುಂದುವರಿಸಲಾಗಿದೆ.
ದೇಶದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 23,495 ಸೋಂಕಿತರು ಇದ್ದು, 184 ಜನರು ಇದುವರೆಗೆ ಮೃತ ಪಟ್ಟಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications