ಕರ್ನಾಟಕದಲ್ಲಿ 'ಕಾಲಾ'ಗೆ ರಕ್ಷಣೆ ಕೋರಿದ ರಜನಿಕಾಂತ್
ಚೆನ್ನೈ, ಜೂನ್ 5: 'ಕಾಲಾ' ಸಿನಿಮಾ ಬಿಡುಗಡೆಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂದು ನಟ ರಜನಿಕಾಂತ್ ಕೋರಿದ್ದಾರೆ.
ಕರ್ನಾಟಕದಲ್ಲಿ ಕಾಲಾ ಸಿನಿಮಾಕ್ಕೆ ಯಾವುದಾದರೂ ಸಮಸ್ಯೆ ಎದುರಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ಕರ್ನಾಟಕದಲ್ಲಿರುವ ತಮಿಳು ಜನರು ಮಾತ್ರವಲ್ಲ, ಆದರೆ ಬೇರೆ ಭಾಷೆ ಮಾತನಾಡುವ ಜನರೂ ಸಿನಿಮಾ ನೋಡಲು ಬಯಸಿದ್ದಾರೆ. ಅವರಿಗೆ ವಂಚನೆಯಾಗಬಾರದು ಎಂದು ರಜನಿಕಾಂತ್ ಹೇಳಿದ್ದಾರೆ.
ಕರ್ನಾಟಕ ಸರ್ಕಾರವು ಚಿತ್ರಮಂದಿರ ಮತ್ತು ಪ್ರೇಕ್ಷಕರಿಗೆ ಸೂಕ್ತ ಭದ್ರತೆಯನ್ನು ನೀಡಲಿದೆ ಎಂಬುದಾಗಿ ನಾನು ನಂಬಿದ್ದೇನೆ. ಎಲ್ಲಕ್ಕಿಂತ ಮುಖ್ಯವಾಗಿ ಹಿರಿಯರಾದ ದೇವೇಗೌಡ ಅವರು ಅಲ್ಲಿದ್ದಾರೆ. ಸಿನಿಮಾದ ನಿಷೇಧಕ್ಕೆ ಅವರು ಖಂಡಿತಾ ಅವಕಾಶ ನೀಡುವುದಿಲ್ಲ ಎಂದು ರಜನಿಕಾಂತ್ ಹೇಳಿಕೆ ನೀಡಿದ್ದಾರೆ.

'ಇನ್ನೂ ವಿರೋಧ ನಿರೀಕ್ಷಿಸಿದ್ದೆ'
ಅತ್ತ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವಂತೆ ಕೋರುವ ಜತೆಗೆ, ಕಾನೂನು ಹೋರಾಟಕ್ಕೂ ಮುಂದಾಗಿರುವ ರಜನಿಕಾಂತ್, ತಮ್ಮ ಸಿನಿಮಾ ಬಿಡುಗಡೆಗೆ ಇನ್ನೂ ತೀವ್ರ ವಿರೋಧ ವ್ಯಕ್ತವಾಗಬಹುದು ಎಂಬ ನಿರೀಕ್ಷೆ ಹೊಂದಿದ್ದಾಗಿ ಹೇಳಿದ್ದಾರೆ.
'ನಾನು ಬಹಳ ವಿರೋಧವನ್ನು ನಿರೀಕ್ಷೆ ಮಾಡಿದ್ದೆ. ಆದರೆ, ಅದರ ಪ್ರಮಾಣ ತೀರಾ ಕಡಿಮೆ ಇದೆ. ಸಿನಿಮಾದಲ್ಲಿ ನಿಜಕ್ಕೂ ಒಳ್ಳೆಯ ಕಥೆಯಿದೆ. ಅದು ಚೆನ್ನಾಗಿ ಓಡಲಿದೆ. ಒಳ್ಳೆಯದನ್ನು ಪ್ರೇಕ್ಷಕರು ಖಂಡಿತಾ ಇಷ್ಟಪಡುತ್ತಾರೆ. ಚೆನ್ನಾಗಿಲ್ಲದಿದ್ದರೆ ಅವರು ಅದನ್ನು ಕೈಬಿಡುತ್ತಾರೆ' ಎಂದು ರಜನಿ ಹೇಳಿದ್ದಾರೆ.
ತೂತುಕುಡಿಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ರಜನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೆಲವು ಸಮಾಜ ವಿರೋಧಿ ಶಕ್ತಿಗಳು ಹಿಂಸಾಚಾರ ನಡೆಸುತ್ತಿವೆ ಎಂದು ರಜನಿ ಹೇಳಿದ್ದರು.
ಅಲ್ಲದೆ ಪ್ರತಿಭಟನೆ ಆರಂಭವಾಗಿ 100 ದಿನ ಕಳೆದರೂ ಬೆಂಬಲಕ್ಕೆ ಬಾರದ ರಜನಿ, ಗೋಲಿಬಾರ್ನಲ್ಲಿ ಗಾಯಗೊಂಡ ಸಂತ್ರಸ್ತರನ್ನು ಮಾತನಾಡಿಸಲು ಕೆಲವು ದಿನಗಳ ನಂತರ ಆಸ್ಪತ್ರೆ ಭೇಟಿ ನೀಡಿದ್ದು, ಸ್ಥಳೀಯರನ್ನು ಕೆರಳಿಸಿತ್ತು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications