ತಮಿಳುನಾಡು ಸಿಎಂ ವಿರುದ್ಧ ದನಿಯೆತ್ತಿದ್ದ ನಟ ಬಂಧನ
ಚೆನ್ನೈ, ಸೆಪ್ಟೆಂಬರ್ 23: ತಮಿಳುನಾಡಿನ ಮುಖ್ಯಮಂತ್ರಿ ಓ ಪಳನಿಸ್ವಾಮಿ ಅವರ ವಿರುದ್ಧ ಅವಾಚ್ಯ ಶಬ್ದ ಬಳಸಿ, ನಿಂದಿಸಿದ ನಟ ಕಮ್ ರಾಜಕಾರಣಿ ಕರುಣಾಸ್ ಅವರನ್ನು ಚೆನ್ನೈ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಹಾಸ್ಯ ನಟನೆ ಮೂಲಕ ಮನೆಮಾತಾಗಿದ್ದ ಕರುಣಾಸ್ ಅವರು ನಂತರ ಎಐಎಡಿಎಂಕೆ ಪಕ್ಷ ಸೇರಿಕೊಂಡು ಶಾಸಕರಾದರು. ಸಾರ್ವಜನಿಕ ಸಭೆಯಲ್ಲಿ ತಮ್ಮ ಪಕ್ಷದ ನಾಯಕ, ಸಿಎಂ ಪಳನಿಸ್ವಾಮಿ ಅವರ ಜತೆಗೆ ನಿಲ್ಲಲು ಪೊಲೀಸರು ಅನುಮತಿ ನೀಡಲಿಲ್ಲ ಎಂದು ಇತ್ತೀಚೆಗೆ ಗರಂ ಆಗಿದ್ದರು.
ನಂತರ ನಡೆದ ಸಾರ್ವಜನಿಕ ಸಭೆಗಳಲ್ಲಿ ಪ್ರಚೋದನಾಕಾರಿ ಹಾಗೂ ಅವಹೇಳನಕಾರಿ ಭಾಷಣ ಮಾಡಿದ್ದಲ್ಲದೆ, ಜಾತಿ ಆಧಾರಿತ ಟೀಕೆ ಮಾಡಿದ್ದ ಆರೋಪ ಹೊಂದಿದ್ದಾರೆ. 47 ನಿಮಿಷಗಳ ದ್ವೇಷ ಭಾಷಣದ ವಿಡಿಯೋದಲ್ಲಿ ಸಿಎಂ, ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದಾರೆ.

2017ರ ಕೂವತ್ತೂರು ರೆಸಾರ್ಟಿನಲ್ಲಿ ಎಐಎಡಿಎಂಕೆ ಶಾಸಕರನ್ನು ಕೂಡಿಟ್ಟಿದ್ದರ ಬಗ್ಗೆ ಮಾತನಾಡಬಲ್ಲೆ ಆದರೆ, ಸದ್ಯ ಇದು ಸಕಾಲವಲ್ಲ ಎಂದಿದ್ದಾರೆ. ಮುಕ್ಕುಲಥೊರ್ ಪುಲಿ ಪಡೈ ಎಂಬ ಜಾತಿ ಆಧಾರಿತ ಸಂಘಟನೆಯ ಮುಖ್ಯಸ್ಥರೂ ಆಗಿದ್ದಾರೆ.
2016ರ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಬೆಂಬಲದೊಂದಿಗೆ ಅವರು ರಾಮನಾಥಪುರಂ ಜಿಲ್ಲೆಯ ತಿರುವಡನೈ ವಿಧಾಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಆದರೆ, ಎಐಎಡಿಎಂಕೆಯ ರೆಬಲ್ ನಾಯಕ, ಆರ್ ಕೆ ನಗರ ಕ್ಷೇತ್ರದ ಶಾಸಕ ದಿನಕರ್ ಜತೆ ಹೆಚ್ಚಿನ ಸಂಪರ್ಕ ಹೊಂದಿರುವ ಕರುಣಾಸ್ ಅವರು ಪಳನಿಸ್ವಾಮಿ ಬಣದ ವಿರುದ್ಧ ಬಂಡಾಯ ಎದ್ದಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications