ನೆಹರೂ, ರಾಜೀವ್ ನಂತರ ಮೋದಿ ದಿವ್ಯಪ್ರಭೆಯುಳ್ಳ ನಾಯಕ : ರಜನಿ
ಚೆನ್ನೈ, ಮೇ 28: ಲೋಕಸಭೆ ಚುನಾವಣೆ 2019ರ ಫಲಿತಾಂಶ ಕಂಡು ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಂತಸಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಹಾರೈಸಿ ಟ್ವೀಟ್ ಮಾಡಿದ್ದರು. ಈಗ ಮತ್ತೊಮ್ಮೆ ನರೇಂದ್ರ ಮೋದಿ ನಾಯಕತ್ವವನ್ನು ಹಾಡಿ ಹೊಗಳಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಯಾವ ಪಕ್ಷದ ಪರ ನಿಲ್ಲಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಆದರೆ, ಯಾರ ಪರವೂ ನಿಲ್ಲದೆ, ತಟಸ್ಥವಾಗಿರುವ ರಜನಿ ಅವರು ರಾಜಕೀಯ ಸಂಘಟನೆ ಬಗ್ಗೆ ಘೋಷಿಸಿದರೂ ಸಕ್ರಿಯವಾಗಿರಲಿಲ್ಲ.
ಏಪ್ರಿಲ್ 11 ರಿಂದ ಮೇ 19ರ ತನಕ ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಯಿತು. ಮೇ 23ರಂದು ಮತದಾರರು ನೀಡಿರುವ ತೀರ್ಪಿನ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ ಮತ್ತೊಮ್ಮೆ ಅಧಿಕಾರ ಸ್ಥಾಪಿಸಲು ಮುಂದಾಗಿದೆ.
2014ರಲ್ಲಿ ಬಿಜೆಪಿ 282 ಹಾಗೂ ಎನ್ಡಿಎ 336 ಸ್ಥಾನಗಳನ್ನು ಗೆದ್ದು ಅಧಿಕಾರ ಸ್ಥಾಪಿಸಿತ್ತು. ಕಾಂಗ್ರೆಸ್ 44 ಹಾಗೂ ಯುಪಿಎ 60 ಸೀಟುಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. 2019ರಲ್ಲಿ 353 ಸ್ಥಾನ ಗೆದ್ದ ಮೋದಿ ನಾಯಕತ್ವಕ್ಕೆ ರಜನಿ ಜೈಕಾರ ಹಾಕಿ, ನಿಮಗೆ ದೇವರು ಒಳ್ಳೆಯದನ್ನು ಮಾಡಲಿ, ಶುಭ ಹಾರೈಕೆ ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದರು.

ಬಿಜೆಪಿ ಪ್ರಣಾಳಿಕೆ ಮೆಚ್ಚಿರುವ ರಜನಿ
'ನಾನು ಯಾವುದೇ ಪಕ್ಷವನ್ನು ಬೆಂಬಲಿಸುತ್ತಿಲ್ಲ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನದಿ ಜೋಡಣೆ ಬಗ್ಗೆ ಪ್ರಸ್ತಾಪಿಸಿದೆ. ಇದು ಅಗತ್ಯವಾಗಿದ್ದು, ಅಸಾಧ್ಯವಾದುದೇನು ಅಲ್ಲ, ಇದರಿಂದ ಅಂತಾರಾಜ್ಯ ನದಿ ನೀರು ಹಂಚಿಕೆ ಸಮಸ್ಯೆಗೂ ಪರಿಹಾರ ಸಿಗಲಿದೆ' ಎಂದು ರಜನಿಕಾಂತ್ ಹೇಳಿದ್ದರು.

ವಾಜಪೇಯಿ ಅವರ 'ಭಗೀರಥ ಯೋಜನೆ'
2017ರಲ್ಲಿ ರಜನಿಕಾಂತ್ ಅವರು ರೈತ ಸಮೂಹವನ್ನು ಭೇಟಿ ಮಾಡಿ, ನದಿ ಜೋಡಣೆ ಬಗ್ಗೆ ಚರ್ಚಿಸಿದ್ದರು. ವಾಜಪೇಯಿ ಅವರ 'ಭಗೀರಥ ಯೋಜನೆ' ಇದಕ್ಕೆ ಪರಿಹಾರ ಎಂದು ನಿರ್ಧರಿಸಲಾಗಿತ್ತು. ಇದಕ್ಕಾಗಿ 1 ಕೋಟಿ ರು ದೇಣಿಗೆ ನೀಡಲು ಮುಂದಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
|
ರಾಹುಲ್ ಗಾಂಧಿ ರಾಜೀನಾಮೆ ನೀಡಬಾರದು
ರಾಹುಲ್ ಗಾಂಧಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಾರದು, ಪ್ರಜಾಪ್ರಭುತ್ವದಲ್ಲಿ ಸಮರ್ಥವಾದ ವಿರೋಧ ಪಕ್ಷ ಇರಬೇಕು ಎಂದು ರಜನಿಕಾಂತ್ ಹೇಳಿದ್ದಾರೆ.
|
ನೆಹರೂ, ರಾಜೀವ್ ವರ್ಚಸ್ಸು ಪಿಆರ್ ಸಂಸ್ಥೆಗಳಿಂದ
ನೆಹರೂ, ರಾಜೀವ್ ವರ್ಚಸ್ಸು ಪಿಆರ್ ಸಂಸ್ಥೆಗಳಿಂದ ವೃದ್ಧಿಯಾಗಿದ್ದು, ಮೋದಿ ಅವರ ವರ್ಚಸ್ಸು ಜನರ ಪ್ರೀತಿಯಿಂದ ಬೆಳೆದಿದ್ದು ಎಂದು ಪ್ರತಿಕ್ರಿಯೆಗಳು ಬಂದಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications