ಆರ್ ಕೆ ನಗರ್ ಉಪ ಚುನಾವಣೆ: ವಿಶಾಲ್, ದೀಪಾ ನಾಮಪತ್ರ ತಿರಸ್ಕೃತ
ಚೆನ್ನೈ, ಡಿಸೆಂಬರ್ 5: ಜಯಲಲಿತಾ ಅವರ ನಿಧನದಿಂದ ತೆರವಾದ ಆರ್.ಕೆ.ನಗರ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಯೇ ಮಂಗಳವಾರ ಇಡೀ ಪ್ರಹಸನದಂತೆ ಆಯಿತು. ನಟ ವಿಶಾಲ್ ಹಾಗೂ ಜಯಲಲಿತಾ ಅವರ ಸೋದರ ಸಂಬಂಧಿ ದೀಪಾ ನಾಮಪತ್ರ ತಿರಸ್ಕೃತವಾಯಿತು.
ಇದರಿಂದ ಆಕ್ರೋಶಗೊಂಡ ನಟ ವಿಶಾಲ್ ತಮ್ಮ ಬೆಂಬಲಿಗರ ಜತೆಗೂಡಿ ಧರಣಿ ಕೂಡ ಮಾಡಿದರು. ಆ ನಂತರ ಮರು ಪರಿಶೀಲನೆ ಮಾಡುವಂತೆ ಮನವಿ ಕೂಡ ಮಾಡಿದರು. ಆಗ ವಿಶಾಲ್ ಅವರ ನಾಮಪತ್ರ ಅಂಗೀಕೃತವಾಗಿದೆಯಂತೆ ಎಂಬ ಸುದ್ದಿ ಹರಿದಾಡಿತು. ತಮ ನಾಮಪತ್ರ ಅಂಗೀಕೃತವಾಗಿದೆ. ಇದು ಸತ್ಯಕ್ಕೆ ಸಂದ ಜಯ ಎಂದು ಟ್ವಿಟ್ಟರ್ ಖಾತೆಯಲ್ಲಿ ಕೂಡ ವಿಶಾಲ್ ಹಾಕಿಕೊಂಡರು.

ಆದರೆ, ಅಂತಿಮವಾಗಿ ವಿಶಾಲ್ ನಾಮಪತ್ರ ತಿರಸ್ಕೃತವಾಗಿರುವುದಾಗಿ ತಿಳಿದುಬಂದಿದೆ. ಇನ್ನು ತಾಂತ್ರಿಕ ಕಾರಣಗಳಿಂದಾಗಿ ದೀಪಾ ಜಯಕುಮಾರನ್ ಅವರ ನಾಮಪತ್ರ ಕೂಡ ತಿರಸ್ಕೃತವಾಗಿದೆ. "ಇದು ರಾಜಕೀಯದ ಕುತಂತ್ರ" ಎಂದು ಪ್ರತಿಕ್ರಿಯಿಸಿರುವ ದೀಪಾ, ಈ ಕುರಿತು ನ್ಯಾಯಾಲಯದ ಮೊರೆ ಹೋಗುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಉಪ ಚುನಾವಣೆಗೆ ನೂರಾ ನಲವತ್ತಕ್ಕೂ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications