ಶಶಿಕಲಾ ಪುಷ್ಪರ ಗಂಡ, ವಕೀಲನಿಗೆ ಎಐಎಡಿಎಂಕೆ ಕಾರ್ಯಕರ್ತರ ಗೂಸಾ
ಚೆನ್ನೈ, ಡಿಸೆಂಬರ್ 28 : ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಾನೂ ಸಿದ್ದನಿದ್ದೇನೆ ಎಂದು ನಾಮಪತ್ರ ಹಿಡಿದುಬಂದ ಉಚ್ಚಾಟಿತ ಶಶಿಕಲಾ ಪುಷ್ಪಾ ಅವರ ಗಂಡ ಮತ್ತು ವಕೀಲನ ಬಾಯಿ ಮೂಗನಿಲ್ಲಿ ರಕ್ತ ಬರುವಂತೆ ಎಐಎಡಿಎಂಕೆ ಕಾರ್ಯಕರ್ತರು ಬಾರಿಸಿದ್ದಾರೆ.
ಪಕ್ಷವಿರೋಧಿ ಚಟುವಟಿಕೆಗಾಗಿ ಪಕ್ಷದಿಂದ ಹೊರಹಾಕಿಸಿಕೊಂಡಿದ್ದ ಶಶಿಕಲಾ ಪುಷ್ಪಾ ಅವರು ಗಂಡ ಮತ್ತು ವಕೀಲನೊಂದಿಗೆ ಎಐಎಡಿಎಂಕೆ ಪಕ್ಷದ ಕಚೇರಿಗೆ ಬಂದಿದ್ದಾಗ ಬುಧವಾರ ಈ ಘಟನೆ ನಡೆದಿದೆ. ಈ ಘರ್ಷಣೆಯಲ್ಲಿ ಶಶಿಕಲಾ ಅವರ ಗಂಡ ಲಿಂಗೇಶ್ವರನ್ ತಿಳಗಾರ್ ಮತ್ತು ವಕೀಲನನ್ನು ಥಳಿಸಲಾಗಿದೆ.

ಸಂಸದೆ ಶಶಿಕಲಾ ಪುಷ್ಪ ಅವರು ಸದ್ಯಕ್ಕೆ ಪಕ್ಷದ ಚುಕ್ಕಾಣಿಯನ್ನು ಹಿಡಿದಿರುವ ಪ್ರಭಾವಿ ಮಹಿಳೆ ಶಶಿಕಲಾ ನಟರಾಜನ್ ಅವರ ವಿರುದ್ಧ ಸೆಣಸಾಡಲು ನಿರ್ಧರಿಸಿದ್ದರು. ಶಶಿಕಲಾ ನಟರಾಜನ್ ಅವರೇ ಪ್ರಧಾನ ಕಾರ್ಯದರ್ಶಿಯಾಗಬೇಕು ಎಂದು ಒಕ್ಕೊರಲಿನಿಂದ ಪಕ್ಷದ ಕಾರ್ಯಕರ್ತರು ನಿರ್ಧರಿಸಿರುವ ಹೊತ್ತಿನಲ್ಲಿ ಶಶಿಕಲಾ ಪುಷ್ಪ ಅವರು ವಿರೋಧದ ಬಾವುಟ ಹಾರಿಸಿದ್ದು ಈ ಘರ್ಷಣೆಗೆ ಕಾರಣವಾಗಿದೆ.
ನಾಮಪತ್ರ ಹಿಡಿದುಕೊಂಡು ಬಂದ ಶಶಿಕಲಾ ಪುಷ್ಪ ಅವರೊಂದಿಗಿದ್ದ ಗಂಡ ಲಿಂಗೇಶ್ವರನ್ ತಿಳಗಾರ್ ಮತ್ತು ವಕೀಲನ ವಿರುದ್ಧ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ. ಗುರುವಾರ ಪಕ್ಷದ ಮಹತ್ವದ ಸಭೆ ನಡೆಯಲಿದ್ದು, ಶಶಿಕಲಾ ನಟರಾಜನ್ ಅವರು ಆಯ್ಕೆ ಮಾಡಲು ಯೋಜನೆ ಹೂಡಲಾಗಿತ್ತು.
ಶಶಿಕಲಾ ನಟರಾಜನ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಲ್ಲಿಸಿರುವ ನಾಮಪತ್ರವನ್ನು ವಿರೋಧಿಸಿ ಶಶಿಕಲಾ ಪುಷ್ಪ ಅವರು ಈಗಾಗಲೆ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 5ರಂದು ಜಯಲಲಿತಾ ಅವರು ಅಸುನೀಗಿದ್ದರಿಂದ ಹುದ್ದೆ ಖಾಲಿಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications