ಸಾವಿಗೂ ಮುನ್ನ ಅಮ್ಮನಿಗೆ ಸಂತಾಪ ಸೂಚಿಸಿದ ಎಐಎಡಿಎಂಕೆ!
ಜಯಲಲಿತಾ ನಿಧನರಾದರು ಎಂಬ ಗಾಳಿ ಸುದ್ದಿ ಹಬ್ಬುತ್ತಿದ್ದಂತೆ ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಕಂಗಾಲಾಗಿ ಬಿಟ್ಟರು. ಸತ್ಯಾಸತ್ಯತೆ ಪರೀಕ್ಷಿಸದೆ ಪಕ್ಷದ ಕಚೇರಿಯಲ್ಲಿ ಚರಮಗೀತೆ ಹಾಡಿ, ಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸಂತಾಪ ಸೂಚಿಸಲಾಯಿತು.
ಚೆನ್ನೈ, ಡಿಸೆಂಬರ್ 05: ತಮಿಳುನಾಡಿನ ಮುಖ್ಯಮಂತ್ರಿ, ಪುರಚ್ಚಿ ತಲೈವಿ ಜೆ ಜಯಲಲಿತಾ ಅವರು ಸೋಮವಾರ ಸಂಜೆ ನಿಧನರಾದರು ಎಂಬ ಗಾಳಿ ಸುದ್ದಿ ಹಬ್ಬುತ್ತಿದ್ದಂತೆ ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಕಂಗಾಲಾಗಿ ಬಿಟ್ಟರು. ಸತ್ಯಾಸತ್ಯತೆ ಪರೀಕ್ಷಿಸದೆ ಪಕ್ಷದ ಕಚೇರಿಯಲ್ಲಿ ಚರಮಗೀತೆ ಹಾಡಿ, ಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸಂತಾಪ ಸೂಚಿಸಲಾಯಿತು. ಅಪೋಲೋ ಆಸ್ಪತ್ರೆಯಿಂದ ಮತ್ತೊಮ್ಮೆ ಸ್ಪಷ್ಟನೆ ಸಿಗುವ ತನಕ ಗೊಂದಲ ಹೀಗೆ ಮುಂದುವರೆದಿತ್ತು.
ಜಯಾ ಅವರ ಪಕ್ಷದ ಅಧಿಕೃತ ವಾಹಿನಿ ಜಯಾ ಟಿವಿಯಲ್ಲೂ ಸಾವಿನ ಸುದ್ದಿ ಪ್ರಕಟಗೊಂಡಿದ್ದು, ಸಾವಿನ ಸುದ್ದಿಯ ಬಗ್ಗೆ ಆಸ್ಪತ್ರೆ ಮೂಲಗಳಿಂದಲೇ ಸುದ್ದಿ ಸೋರಿಕೆಯಾಗಿದ್ದು ಎಲ್ಲವೂ ಗೊಂದಲ ಮೂಡಿಸಿ ಕಾರ್ಯಕರ್ತರು ಸ್ಥಿಮಿತ ಕಳೆದುಕೊಳ್ಳುವಂತೆ ಮಾಡಿತು.[ಜಯಲಲಿತಾ ಸಾವಿನ ಸುದ್ದಿ ಅಲ್ಲಗೆಳೆದ ಅಪೋಲೋ ಆಸ್ಪತ್ರೆ]

ಅಪೋಲೋ ಆಸ್ಪತ್ರೆ ಎದುರು ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಕೂಡಾ ಉಂಟಾಗಿತ್ತು. ಆದರೆ, 5.49ರ ಸುಮಾರಿಗೆ ಅಪೋಲೋ ಆಸ್ಪತ್ರೆ ಸಿಇಒ ಸಂಗೀತಾ ರೆಡ್ಡಿ ಅವರು ಟ್ವೀಟ್, ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿ, ಜಯಲಲಿತಾ ಅವರ ಸಾವಿನ ಸುದ್ದಿಯನ್ನು ಅಲ್ಲಗೆಳೆದ ಮೇಲೆ ಕಾರ್ಯಕರ್ತರಿಗೆ ಸಮಾಧಾನವಾಯಿತು. ತಕ್ಷಣವೆ ಕಚೇರಿಯಲ್ಲಿ ಅರ್ಧಕ್ಕೆ ಇಳಿಸಿದ್ದ ಧ್ವಜವನ್ನು ಮೇಲಕ್ಕೇರಿಸಲಾಯಿತು.[ಅಮ್ಮ ಸ್ಥಿತಿ ಗಂಭೀರ, ಅಪೋಲೋದಿಂದ ರೋಗಿಗಳ ಸ್ಥಳಾಂತರ]
#WATCH: Party flag hoisted again at AIADMK HQs in Chennai #jayalalithaa pic.twitter.com/8dAqqTwjSc
— ANI (@ANI_news) December 5, 2016
ಅಮ್ಮನಿಗೆ ಮರುಹುಟ್ಟು ಸಿಕ್ಕ ಸಂಭ್ರಮದಲ್ಲಿ ಕಾರ್ಯಕರ್ತರು ಹುಚ್ಚೆದ್ದು ಕುಣಿದಾಡಿದರು. ಆದರೆ, ಆತಂಕದ ಪರಿಸ್ಥಿತಿ ಮುಂದುವರೆದಿದ್ದು, ಎಐಎಡಿಎಂಕೆ ಶಾಸಕರು, ಸಚಿವರು ಹಾಗೂ ಸಂಸದರ ನಡುವೆ ಉನ್ನತ ಮಟ್ಟದ ಸಭೆ ನಿಗದಿಯಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications