ಎರಡೂ ಬಣಗಳ ವಿಲೀನದ ಬಳಿಕ ಎನ್.ಡಿ.ಎ ತೆಕ್ಕೆಗೆ ಎಐಎಡಿಎಂಕೆ?
ಚೆನ್ನೈ, ಆಗಸ್ಟ್ 22: ಕೊನೆಗೂ ಹಲವು ಸುತ್ತಿನ ಹಗ್ಗ ಜಗ್ಗಾಟಗಳ ನಂತರ ಎಐಎಡಿಎಂಕೆಯ ಪನ್ನೀರ್ ಸೆಲ್ವಂ ಮತ್ತು ಪಳನಿಸ್ವಾಮಿ ಬಣಗಳು ಸೋಮವಾರ ಒಂದಾಗಿವೆ. ಇದೀಗ ಎಐಎಡಿಎಂಕೆ ಎನ್.ಡಿ.ಎ ಮೈತ್ರಿಕೂಟ ಸೇರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.
ಸದ್ಯಕ್ಕೆ ನಮಗೆ ತಮಿಳುನಾಡಿನಲ್ಲಿ ಚುನಾವಣೆ ಬೇಕಾಗಿಲ್ಲ ಎಂದು ಬಿಜೆಪಿ ಉನ್ನತ ನಾಯಕರೊಬ್ಬರು ಒನ್ಇಂಡಿಯಾಕ್ಕೆ ತಿಳಿಸಿದ್ದಾರೆ. ಜತೆಗೆ ಎಐಎಡಿಎಂಕೆ ಪಕ್ಷಗಳು ಒಂದಾಗುವಲ್ಲಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಾತ್ರವೂ ದೊಡ್ಡದಿದ್ದು, ಮುಂದಿನ ದಿನಗಳಲ್ಲಿ ಎಐಎಡಿಎಂಕೆ ಎನ್.ಡಿ.ಎ ಬಣ ಸೇರುವ ಎಲ್ಲಾ ಸಾಧ್ಯತೆಗಳಿವೆ.

ಈ ಮೂಲಕ ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಎನ್.ಡಿ.ಎಗೆ ತಂತ್ರ ರೂಪಿಸಿದೆ.
ಎಐಎಡಿಎಂಕೆ ಲೋಕಸಭೆಯಲ್ಲಿ 37 ಹಾಗೂ ರಾಜ್ಯಸಭೆಯಲ್ಲಿ 13 ಸದಸ್ಯರನ್ನು ಹೊಂದಿದೆ. ಸದ್ಯಕ್ಕೆ ಜೆಡಿಯು ಎನ್.ಡಿ.ಎ ಸೇರಿದೆ. ಜತೆಗೆ ಬಿಜೆಡಿ, ಟಿ.ಆರ್.ಎಸ್ ಮತ್ತು ವೈಎಸ್ಆರ್ ಕಾಂಗ್ರೆಸ್ ಕೂಡ ಎನ್.ಡಿ.ಎ ಒಳಸೇರುವ ಸಾಧ್ಯತೆಗಳಿವೆ. ಇದಕ್ಕೆ ಎಐಎಡಿಎಂಕೆಯೂ ಸಾಥ್ ನೀಡಿದರೆ ಮೇಲ್ಮನೆಯಲ್ಲಿ ಎನ್.ಡಿ.ಎ ಬಲ 121ಕ್ಕೆ ಏರಿಕೆಯಾಗಲಿದೆ. 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಹುಮತಕ್ಕೆ 123 ಸ್ಥಾನಗಳು ಬೇಕಾಗಿವೆ.
ಪ್ರಮುಖ ಕಾಯ್ದೆಗಳನ್ನು ಜಾರಿಗೆ ತರಲು ಎರಡೂ ಮನೆಗಳಲ್ಲಿ ಬಹುಮತ ಅಗತ್ಯವಾಗಿರುವುದರಿಂದ ಅಗತ್ಯ ಸಂಖ್ಯಾಬಲ ಹೊಂದಿಸುವಲ್ಲಿ ಬಿಜೆಪಿ ನಿರತವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications