Breaking: ಎಐಎಡಿಎಂಕೆ ನಾಯಕತ್ವ; ಪನ್ನೀರ್ ಸೆಲ್ವಂ ಪರ ಹೈಕೋರ್ಟ್ ತೀರ್ಪು
ಚೆನ್ನೈ, ಆಗಸ್ಟ್ 17: ''ಎಐಎಡಿಎಂಕೆ ನಾಯಕತ್ವದ ಕಿತ್ತಾಟದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಇ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವುದು ಸಿಂಧುವಾಗಿಲ್ಲ'' ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.
ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಎಐಎಡಿಎಂಕೆ ಜುಲೈ 11 ರಂದು ಆಯ್ಕೆ ಮಾಡಿತ್ತು. ಎಐಎಡಿಎಂಕೆ ನಡೆಸಿದ ಸಾಮಾನ್ಯ ಮಂಡಳಿ ಸಭೆಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಎಐಡಿಎಎಂಕೆ ಪಕ್ಷದ ಮೇಲೆ ಪಳನಿಸ್ವಾಮಿ ಹಿಡಿತ: ಪನ್ನೀರ್ ಸೆಲ್ವಂ ಉಚ್ಛಾಟನೆ
ಇ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದನ್ನು, ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಯನ್ನು ಕರೆಯುವಲ್ಲಿ ಕಾನೂನುಬದ್ಧತೆ ಮತ್ತು ಬೈಲಾಗಳ ಉಲ್ಲಂಘನೆಯನ್ನು ಓ ಪನ್ನೀರ್ ಸೆಲ್ವಂ ಪ್ರಶ್ನಿಸಿದ್ದರು.
ಈಗ ಓ ಪನ್ನೀರಸೆಲ್ವಂ ಪರವಾಗಿ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ್ದು, ಜೂನ್ 23 ರ ಹಿಂದಿನ ಯಥಾಸ್ಥಿತಿಯನ್ನು ಕಾಪಾಡುವಂತೆ ತಿಳಿಸಿದೆ. ಜೊತೆಗೆ ಎಐಎಡಿಎಂಕೆಯ ಹೊಸ ಜನರಲ್ ಕೌನ್ಸಿಲ್ ಸಭೆಯನ್ನು ನಡೆಸಲು ಸಹ ಆದೇಶಿಸಿದೆ.
ಮದ್ರಾಸ್ ಹೈಕೋರ್ಟ್ ಆದೇಶದ ಬೆನ್ನಲ್ಲೇ ಚೆನ್ನೈನಲ್ಲಿರುವ ಓ ಪನ್ನೀರಸೆಲ್ವಂ ಅವರ ನಿವಾಸದ ಹೊರಗೆ ಅಭಿಮಾನಿಗಳು ಮತ್ತು ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.
#WATCH | Tamil Nadu | Celebrations erupt outside the residence of O Panneerselvam in Chennai
— ANI (@ANI) August 17, 2022
Madras HC passed an order in his favour on his plea questioning legality of convening AIADMK Gen Council meeting. HC ordered status quo ante June 23 & ordered a fresh gen council meeting pic.twitter.com/BpI3YcoX1q
ಎಐಡಿಎಂಕೆ ಪಕ್ಷದ ಎಲ್ಲಾ ಹುದ್ದೆಗಳಿಂದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರನ್ನು ಜುಲೈ 11 ಉಚ್ಛಾಟನೆ ಮಾಡಲಾಗಿತ್ತು. ಎಡಪ್ಪಾಡಿ ಪಳನಿಸ್ವಾಮಿ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಮೇಲೆ ಹಿಡಿತ ಸಾಧಿಸಿದ ನಂತರ ಈ ನಿರ್ಣಯ ಕೈಗೊಳ್ಳಲಾಗಿತ್ತು.
2017ರಲ್ಲಿ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ನಿಧನದ ನಂತರ ಪಕ್ಷದ ಮೇಲೆ ಹಿಡಿತ ಸಾಧಿಸಲು, ಅವರ ಉತ್ತರಾಧಿಕಾರಿ ಎಂದು ಬಿಂಬಿಸಿಕೊಳ್ಳಲು ಇ ಪಳನಿಸ್ವಾಮಿ ಮತ್ತು ಒ ಪನ್ನೀರ್ ಸೆಲ್ವಂ ನಡುವೆ ತಿಕ್ಕಾಟ ಆರಂಭವಾಗಿತ್ತು. ಜಯಲಲಿತಾ ಮರಣದ ನಂತರ ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿದ್ದರು, ನಂತರ ಪಳನಿಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಮೇ 2021ರಲ್ಲಿ ನಡೆದ ಚುನಾವಣೆಯಲ್ಲಿ ಎಐಡಿಎಂಕೆ ಅಧಿಕಾರ ಕಳೆದುಕೊಂಡಿದೆ.
Recommended Video