ಚೆನ್ನೈನಲ್ಲಿ ಅಮ್ಮನ ಅಭಿಮಾನಿಯ ಹುಚ್ಚು ಸಾಹಸ ನೋಡಿ!
ಚೆನ್ನೈ, ಫೆ. 23 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕು, ಅವರ ವಿರುದ್ಧದ ದೂರುಗಳನ್ನು ಕೈಬಿಡಬೇಕು ಎಂದು ಅಮ್ಮ ಅಭಿಮಾನಿಯೊಬ್ಬ ಶಿಲುಬೆಗೇರಿದ್ದಾನೆ. ಇತನ ಹುಚ್ಚು ಸಾಹಸಕ್ಕೆ ಹಲವಾರು ಎಐಎಡಿಎಂಕೆ ಕಾರ್ಯಕರ್ತರು ಸಾಕ್ಷಿಯಾಗಿದ್ದರು.
ಸೋಮವಾರ ಚೆನ್ನೈನಲ್ಲಿ ತನ್ನನ್ನು ತಾನು ಕರಾಟೆ ಪಟು ಎಂದು ಹೇಳಿಕೊಳ್ಳುವ ಶಿಹಾನ್ ಹುಸೇನಿ ಎಂಬಾತ ಶಿಲುಬೆಗೇರಿ ಅಮ್ಮನ ಮೇಲಿನ ಅಭಿಮಾನವನ್ನು ಪ್ರದರ್ಶಿಸಿದ್ದಾನೆ. ಎಐಎಡಿಎಂಕೆ ಕಾರ್ಯಕರ್ತರ ಸಮ್ಮುಖದಲ್ಲಿಯೇ ಈತ ಮರದಿಂದ ತಯಾರಿಸಿದ ಶಿಲೆಬೆಗೆ ಏರಿದ್ದಾನೆ.[ಶಿಹಾನ್ ಹುಸೇನಿ ಶಿಲುಬೆಗೇರಿದ ಚಿತ್ರಗಳು]
ಜಯಲಲಿತಾ ಅವರು ಪುನಃ ತಮಿಳುನಾಡು ಮುಖ್ಯಮಂತ್ರಿಯಾಗಬೇಕು ಅವರ ವಿರುದ್ಧದ ದೂರುಗಳನ್ನು ಕೈಬಿಡಬೇಕು ಎಂದು ಬೇಡಿಕೆ ಇಟ್ಟಿರುವ ಹುಸೇನಿ, ಶಿಲುಬೆಗೇರಿ ತನ್ನ ಕೈ- ಕಾಲುಗಳಿಗೆ 6 ಇಂಚು ಉದ್ದದ ಮೊಳೆಗಳನ್ನು ಹೊಡೆದುಕೊಂಡು ಅಭಿಮಾನ ಪ್ರದರ್ಶಿಸಿದ್ದಾನೆ. [ಜಯಲಲಿತಾಗೆ 10 ವರ್ಷ ಚುನಾವಣೆ ನಿಷೇಧ]
ಶಿಲುಬೆಯಲ್ಲಿ ಕೈ ಮತ್ತು ಕಾಲುಗಳಿಗೆ ಮೊಳೆ ಹೊಡೆದುಕೊಂಡು ಸುಮಾರು ಆರು ನಿಮಿಷಗಳ ಕಾಲ ನಿಂತಿದ್ದ ಹುಸೇನಿಯನ್ನು ನಂತರ ಕೆಳಗಿಳಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಐಎಡಿಎಂಕೆ ಕಾರ್ಯಕರ್ತರು ಹುಸೇನಿ ಅಭಿಮಾನವನ್ನು ಕಣ್ತುಂಬಿಕೊಂಡರು.
ಅಕ್ರಮ ಆಸ್ತಿಗಳಿಕೆ ಪ್ರಕರಣ ಸಾಬೀತಾಗಿ, ಜಯಲಲಿತಾ ಅವರು ಕಳೆದ ವರ್ಷ ಜೈಲು ಸೇರಿದ ಬಳಿಕ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ನಂತರ ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು
















Click it and Unblock the Notifications