ಶಶಿಕಲಾಗೆ ಸ್ವಾಗತ ಕೋರಿ ಬ್ಯಾನರ್; ಸದಸ್ಯನ ಉಚ್ಚಾಟನೆ ಮಾಡಿದ ಎಐಎಡಿಎಂಕೆ
ಚೆನ್ನೈ, ಜನವರಿ 27: ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಾಲ್ಕು ವರ್ಷಗಳ ಜೈಲುವಾಸ ಅನುಭವಿಸಿ ಬುಧವಾರ ತಮಿಳುನಾಡಿನ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ನಟರಾಜನ್ ಬಿಡುಗಡೆಯಾಗಿದ್ದಾರೆ. ಈ ಸಂದರ್ಭ ಅವರಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದಕ್ಕೆ ಎಐಎಡಿಎಂಕೆ ಸದಸ್ಯರೊಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಶಶಿಕಲಾ ಅವರ ಬ್ಯಾನರ್ ಹಾಕಿದ್ದಕ್ಕೆ ತಿರುನೆಲ್ವೆಲಿಯ ಎಂಜಿಆರ್ ಮಕ್ಕಳ್ ಮಂದ್ರಮ್ ಜಿಲ್ಲಾ ಉಪ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ರಾಜಾ ಅವರನ್ನು ಉಚ್ಚಾಟನೆ ಮಾಡಲಾಗಿದೆ.
ನಾಲ್ಕು ವರ್ಷದಿಂದ ಜೈಲುವಾಸ ಅನುಭವಿಸಿರುವ ಶಶಿಕಲಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದು, ಇಂದು ಚೆನ್ನೈಗೆ ಮರಳಲಿದ್ದರು. ಅವರಿಗೆ ಸ್ವಾಗತ ಕೋರಿ ಸುಬ್ರಹ್ಮಣ್ಯ ಬ್ಯಾನರ್ ಹಾಕಿದ್ದರು. ಆ ಬ್ಯಾನರ್ ನಲ್ಲಿ ಶಶಿಕಲಾ ಅವರ ಚಿತ್ರದೊಂದಿಗೆ ಮಾಜಿ ಸಿಎಂ ಜಯಲಲಿತಾ, ಎಂಜಿಆರ್, ಸಿಎನ್ ಅಣ್ಣಾದೊರೈ, ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರ ಚಿತ್ರವನ್ನು ಹಾಕಲಾಗಿತ್ತು. ತಮ್ಮ ಚಿತ್ರವನ್ನೂ ಸುಬ್ರಹ್ಮಣ್ಯ ರಾಜಾ ಹಾಕಿಕೊಂಡಿದ್ದರು.

"ಮುಂದೆ ಎಐಡಿಎಂಕೆ ನೇತೃತ್ವ ವಹಿಸಲಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೆ ಸ್ವಾಗತ" ಎಂದು ಬ್ಯಾನರ್ ನಲ್ಲಿ ಬರೆಯಲಾಗಿತ್ತು.
ಈ ಸಂಗತಿಯಿಂದ ಆಕ್ರೋಶಗೊಂಡಿರುವ ಪಕ್ಷದ ಹೈಕಮಾಂಡ್ ಸುಬ್ರಹ್ಮಣ್ಯ ಅವರಿಗೆ ನೋಟೀಸ್ ನೀಡಿದೆ. ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದು, ಪಕ್ಷದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದೀರಿ. ಈ ಕಾರಣ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ನೋಟೀಸ್ ನಲ್ಲಿ ತಿಳಿಸಿದೆ.
2017ರಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ನಟರಾಜನ್ ಹಾಗೂ ಅವರ ಆಪ್ತೆ ಇಳವರಸಿ ಸೇರಿ ನಾಲ್ವರಿಗೆ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. 2017ರಲ್ಲೇ ಎಐಎಡಿಎಂಕೆ ಶಶಿಕಲಾ ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications