ಜಯಲಲಿತಾ ಅನಾರೋಗ್ಯ: ಹೈಕೋರ್ಟ್ ಗೆ ಹಾಕಿದ್ದ ಪಿಐಎಲ್ ವಜಾ
ಚೆನ್ನೈ, ಅಕ್ಟೋಬರ್ 6: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ಸ್ಥಿತಿ ಬಗ್ಗೆ ದಿನಕ್ಕೊಂದು ಮಾಹಿತಿ, ವದಂತಿ ಹರಿದಾಡುತ್ತಿದೆ.
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಬೇಕು ಎಂದು ಕೋರಿ ಮದ್ರಾಸ್ ಹೈಕೋರ್ಟ್ ಗೆ 'ಟ್ರಾಫಿಕ್' ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾ ಮಾಡಲಾಗಿದೆ. ಇದು ಪ್ರಚಾರದ ಗಿಮಿಕ್ ಎಂದಿರುವ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ.

ಇನ್ನು ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS), ದೆಹಲಿಯಿಂದ ತಜ್ಞ ವೈದ್ಯರ ತಂಡವೊಂದು ಬುಧವಾರ ಚೆನ್ನೈಗೆ ಬಂದಿದೆ. ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಜಯಲಲಿತಾ ಚಿಕಿತ್ಸೆಗಾಗಿಯೇ ಈ ತಂಡವನ್ನು ಕರೆಸಿಕೊಳ್ಳಲಾಗಿದೆ.
ಈ ತಂಡದಲ್ಲಿ ಜಿ.ಸಿ.ಖಿಲ್ನಾನಿ, ಅಂಜನ್ ತ್ರಿಖಾ, ನಿತೀಶ್ ನಾಯ್ಕ್ ಇದ್ದು, ಮುಂದಿನ ಕೆಲವು ದಿನಗಳು ಜಯಲಲಿತಾ ಅವರಿಗೆ ಚಿಕಿತ್ಸೆ ನೀಡಲಿದೆ ಎಂಬ ಮಾಹಿತಿಯನ್ನು ದೆಹಲಿ ಮೂಲಗಳು ತಿಳಿಸಿವೆ. ಸದ್ಯಕ್ಕೆ ನಡೆಯುತ್ತಿರುವ ಚಿಕಿತ್ಸೆ ಸರಿಯಿದೆಯೆ ಅಥವಾ ಬದಲಾವಣೆ ಅಗತ್ಯವಿದೆಯೆ ಎಂಬುದನ್ನು ಈ ತಂಡವು ನಿರ್ಧರಿಸಲಿದೆ.['ಅಮ್ಮ' ಹೆಸರಿನಲ್ಲಿ ರಾಜ್ಯಭಾರ ಮಾಡುತ್ತಿರುವವರು ಯಾರು?]
ಕಳೆದ ವಾರವಷ್ಟೆ ಲಂಡನ್ ಮೂಲದ ವೈದ್ಯ ರಿಚರ್ಡ್ ಬೇಲೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆಗೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದ್ದರು. ಅವರು ಮತ್ತೊಮ್ಮೆ ಭೇಟಿ ನೀಡಿ, ಜಯಲಲಿತಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.['ಅಮ್ಮ'ನಿಗೆ ಶನಿ ಭುಕ್ತಿ ಸಮಸ್ಯೆ: ಅ.10ರ ನಂತರ ಓಕೆ ಅಂತಾರೆ ಜ್ಯೋತಿಷಿಗಳು!]
ಅಪೋಲೋ ಆಸ್ಪತ್ರೆಯ ವೈದ್ಯರಿಂದ ಬುಧವಾರ ಜಯಲಲಿತಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಅತಿಸಾರ ಹಾಗೂ ಜ್ವರದ ಕಾರಣಕ್ಕೆ ಸೆಪ್ಟೆಂಬರ್ 22ರಂದು ಜಯಲಲಿತಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸರಕಾರ ಜನರಿಗೆ ಮಾಹಿತಿ ನೀಡಬೇಕು ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಆಗ್ರಹಿಸಿದ್ದರು.[ಜಯಲಲಿತಾ ಆರೋಗ್ಯ ಮಾಹಿತಿಗಾಗಿ ಹೈಕೋರ್ಟ್ ಗೆ ಪಿಐಎಲ್]
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications