ಮೋದಿ ಸರ್ಕಾರದ 'ಹಿಂದಿ ಹೇರಿಕೆ'ವಿರುದ್ಧ ಕೂಗು
ಚೆನ್ನೈ, ಅ.28: ಸಾಮಾಜಿಕ ಜಾಲ ತಾಣಗಳಲ್ಲಿ ಹಿಂದಿ ಭಾಷೆ ಹೇರಿಕೆಗೆ ಮುಂದಾಗಿದ್ದ ಕೇಂದ್ರ ಸರ್ಕಾರಕ್ಕೆ ಅಂದಿನ ಮುಖ್ಯಮಂತ್ರಿ ಜಯಲಲಿತಾ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದರು. ಅದರೆ, ಪಾಠ ಕಲಿಯದ ಮೋದಿ ಸರ್ಕಾರ ವಿರುದ್ದ ಈಗ ತಮಿಳುನಾಡಿನ ಬಿಜೆಪಿ ತಿರುಗಿ ನಿಂತಿದೆ.
ಪ್ರಸಾರ ಭಾರತಿ ಅಡಿಯಲ್ಲಿ ಬರುವ ಆಲ್ ಇಂಡಿಯಾ ರೇಡಿಯೋ(AIR)ದ ತಮಿಳುನಾಡಿನ ಕೇಂದ್ರದಿಂದ ಬಿತ್ತರಗೊಳ್ಳುವ ಕಾರ್ಯಕ್ರಮದಲ್ಲಿ ಅನಗತ್ಯವಾಗಿ ಹಿಂದಿ ಭಾಷೆ ಹೇರಿಕೆಯಾಗುತ್ತಿದೆ ಎಂದು ತಮಿಳುನಾಡಿನ ಬಿಜೆಪಿ ಘಟಕ ಕೇಂದ್ರ ಸರ್ಕಾರಕ್ಕೆ ದೂರು ನೀಡಿದೆ. [ಟಿವಿಗಿಂತ ಆಕಾಶವಾಣಿಯೇ ಜನಪ್ರಿಯ]
ಬಿಜೆಪಿ ಘಟಕದ ಅಧ್ಯಕ್ಷ ತಮಿಳಿಸೈ ಸೌಂದರ್ಯರಾಜನ್ ಅವರು ದೆಹಲಿಯಲ್ಲಿ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಗಮನ ಹರಿಸುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.
AIR ನಿಂದ ಪ್ರಸಾರವಾಗುತ್ತಿರುವ ನಾಲ್ಕು ವಾಣಿಜ್ಯೋದ್ದೇಶಿತ ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸುವಂತೆ ಕೋರಲಾಯಿತು ತಕ್ಷಣವೇ ಅಧಿಕಾರಿಗಳಿಗೆ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸಚಿವ ಪ್ರಕಾಶ್ ಅವರು ಸೂಚಿಸಿದ್ದಾರೆ ಎಂದು ಸೌಂದರ್ಯರಾಜನ್ ಹೇಳಿದ್ದಾರೆ.[ನೆನಪಿನ ತರಂಗಾಂತರಗಳು!]

ಕಳೆದ ವಾರ ಆಕಾಶವಾಣಿಯಲ್ಲಿ 'ಹಿಂದಿ ಹೇರಿಕೆ'ಯಾಗುತ್ತಿದೆ ಎಂದು ಪಿಎಂಕೆ ಪಕ್ಷ ಟೀಕಿಸಿತ್ತು. ಪ್ರಾದೇಶಿಕ ಪ್ರಸಾರ ಕೇಂದ್ರಗಳಲ್ಲಿ ಹಿಂದಿ ಹೇರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವಾಣಿಜ್ಯ ಕಾರ್ಯಕ್ರಮದ ಹೆಸರಿನಲ್ಲಿ ಹಿಂದಿ ಹೇರಿಕೆಯಾಗುವುದನ್ನು ಖಂಡಿಸುತ್ತೇವೆ. ವಾರದಲ್ಲಿ ನಾಲ್ಕು ಗಂಟೆಯಾದರೆ ಓಕೆ, ಅದರೆ, ದಿನದಲ್ಲಿ ನಾಲ್ಕು ಗಂಟೆಗಳ ಕಾಲ ಹಿಂದಿ ಕಾರ್ಯಕ್ರಮ ಅ.26ರಿಂದ ಆರಂಭಗೊಂಡಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಪಕ್ಷದ ಸ್ಥಾಪಕ ಎಸ್ ರಾಮದಾಸ್ ಕಿಡಿಕಾರಿದ್ದರು. [ಹಿಂದಿ ವಿರುದ್ಧ ಎಂಕೆ ಯುದ್ಧ, ಸಿದ್ದು ಏಕೆ ನಿಶ್ಶಬ್ದ?]
ಪಿಎಂಕೆ, ಬಿಜೆಪಿ ಅಲ್ಲದೆ ಸ್ಥಳೀಯ ಸಂಘಟನೆ ಪೆರಿಯಾರ್ ದ್ರಾವಿಡರ್ ಕಳಗಂ ಕೂಡಾ ಹಿಂದಿ ಹೇರಿಕೆ ವಿರುದ್ಧ ಸೊಲ್ಲೆತ್ತಿದೆ. ತಮಿಳು ಭಾಷೆ ಶ್ರೀಮಂತವಾಗಿದ್ದು, ಆಕಾಶವಾಣಿ ಮೂಲಕ ಸ್ಥಳೀಯ ಭಾಷೆ, ಸಂಸ್ಕೃತಿಯ ಬೆಳವಣಿಗೆಗೆ ಅನುಗುಣವಾದ ಕಾರ್ಯಕ್ರಮಗಳನ್ನು ಬಿತ್ತರಿಸುವುದು ಉತ್ತಮ ಕ್ರಮ ಎಂದಿದ್ದಾರೆ. [ಹಿಂದಿ ಹೇರಿಕೆ. ಕರವೇ ನಾರಾಯಣ ಗೌಡ್ರ ಲೇಖನ]
ಮೋದಿ ಸರ್ಕಾರಕ್ಕೆ ಹಿನ್ನಡೆ : ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ಭಾಷೆ ಹೇರುವ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ...ತಮಿಳುನಾಡಿನ ವಿಚಾರದಲ್ಲಿ ಹಿಂದಿಗೆ ಪ್ರಾಮುಖ್ಯತೆ ನೀಡುವುದು ಅತೀ ಸೂಕ್ಷ್ಮ ವಿಚಾರ. ತಮಿಳಿಗರಿಗೆ ತಮ್ಮ ಭಾಷೆಯ ಬಗ್ಗೆ ತುಂಬಾ ಗೌರವ ಮತ್ತು ಭಾವನಾತ್ಮಕ ಸಂಬಂಧ ಇದೆ ಎಂದು ಅಂದಿನ ಸಿಎಂ ಜಯಲಲಿತಾ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಭಾಷೆ ವಿಷಯದಲ್ಲಿ ಪ್ರತಿಪಕ್ಷ ಡಿಎಂಕೆ ಕೂಡಾ ಕೈಜೋಡಿಸಿ ಮೋದಿ ಸರ್ಕಾರದ ಕ್ರಮವನ್ನು ಖಂಡಿಸಿತ್ತು. ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುತ್ತೋಲೆಯನ್ನು ಸರ್ಕಾರ ಹಿಂಪಡೆದಿತ್ತು.[ವಿವರ ಇಲ್ಲಿ ಓದಿ]
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications