ಕಾರ್ತಿ, ಚಿದಂಬರಂ ವಿರುದ್ಧ ಇರೋ ಆರೋಪಗಳೇನು?
ಕಾರ್ತಿ ಚಿದಂಬರಂಗೆ ಸೇರಿದ ಐಎನ್ಎಕ್ಸ್ ಮೀಡಿಯಾ ವಿರುದ್ಧ ಈಗಾಗಲೇ ಅವ್ಯವಹಾರದ ಆರೋಪಗಳು ಕೇಳಿಬಂದಿದ್ದವು. ವಿದೇಶಿ ಬಂಡವಾಳ ನಿಯಮಗಳಿಗೆ ವಿರುದ್ಧವಾಗಿ ಐಎನ್ಎಕ್ಸ್ ನಲ್ಲಿ ಹೂಡಿಕೆಗಳಾಗಿವೆ ಎಂಬುದೇ ಪ್ರಮುಖ ಆರೋಪ.
ನವದೆಹಲಿ, ಮೇ 16: ಮಂಗಳವಾರ ಬೆಳಗ್ಗೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸಂಬಂಧಪಟ್ಟ ನಿವಾಸ ಹಾಗೂ ಕಚೇರಿಗಳು ಸೇರಿದಂತೆ ಸುಮಾರು 16 ಕಡೆ ಸಿಬಿಐ ರೈಡ್ ಆಗಿದೆ.
ಕಾರ್ತಿ ಚಿದಂಬರಂಗೆ ಸೇರಿದ ಐಎನ್ಎಕ್ಸ್ ಮೀಡಿಯಾ ವಿರುದ್ಧ ಈಗಾಗಲೇ ಅವ್ಯವಹಾರದ ಆರೋಪಗಳು ಕೇಳಿಬಂದಿದ್ದವು. ವಿದೇಶಿ ಬಂಡವಾಳ ನಿಯಮಗಳಿಗೆ ವಿರುದ್ಧವಾಗಿ ಐಎನ್ಎಕ್ಸ್ ನಲ್ಲಿ ಹೂಡಿಕೆಗಳಾಗಿವೆ ಎಂಬುದು ಆ ಆರೋಪದ ಮುಖ್ಯ ತಿರುಳು.[ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪುತ್ರನ ನಿವಾಸಗಳ ಮೇಲೆ ಸಿಬಿಐ ದಾಳಿ]

ಇದಲ್ಲದೆ, ಹಲವಾರು ಲೋಪಗಳ ಮಧ್ಯೆಯೂ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯ ನಿರಾಕ್ಷೇಪಣಾ ಪತ್ರವು ಐಎನ್ಎಕ್ಸ್ ಗೆ ಸಿಕ್ಕಿದ್ದು ಪ್ರಶ್ನಾರ್ಹವಾಗಿತ್ತು. ಹಾಗಾಗಿ, ಈ ಪ್ರಕರಣ ಸಿಬಿಐ ಮೆಟ್ಟಿಲೇರಿ, ಸಿಬಿಐ ಆ ಬಗ್ಗೆ ಎಫ್ ಐಆರ್ ಅನ್ನೂ ದಾಖಲಿಸಿತ್ತು.
ಅಲ್ಲದೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯ (ಇಡಿ) ಕೂಡ ಐಎನ್ಎಕ್ಸ್ ವಿರುದ್ಧ ತನಿಖೆ ಕೈಗೆತ್ತಿಕೊಂಡಿದೆ.
ಇದೊಂದೇ ಅಲ್ಲ, ಕಾರ್ತಿ ಚಿದಂಬರಂ ಅವರಿಗೆ ಸಂಬಂಧಪಟ್ಟ ಕೆಲ ಕಂಪನಿಗಳಲ್ಲಿ ಇಂಥ ಅವ್ಯವಹಾರಗಳು ಆಗಿರುವುದು ಸರ್ವೇ ಸಾಮಾನ್ಯವಾಗಿರುವುದನ್ನು ಸಿಬಿಐ ತನ್ನ ತನಿಖೆಯ ವೇಳೆ ಗಮನಿಸಿದೆ.
ಇದರ ಜಾಡು ಹಿಡಿದು ಹೋಗಿದ್ದ ಸಿಬಿಐಗೆ ಕಾರ್ತಿಗೆ ಸೇರಿದ್ದ ಕಂಪನಿಯೊಂದರಲ್ಲಿ ಸುಮಾರು 45 ಕೋಟಿ ರು. ಅವ್ಯವಹಾರವಾಗಿರುವುದು ತಿಳಿದುಬಂದಿತ್ತು. ಹಾಗಾಗಿ, ಆ ಕಂಪನಿಯ ನಿರ್ದೇಶಕರುಗಳ ಮಂಡಳಿಗೆ ಹಾಗೂ ಕಾರ್ತಿ ಚಿದಂಬರಂ ಅವರಿಗೆ ಸಿಬಿಐ ಕಳೆದ ತಿಂಗಳು ನೋಟಿಸ್ ಜಾರಿಗೊಳಿಸಿತ್ತು.
ಈ ಎಲ್ಲಾ ಕಂಪನಿಗಳ ಅವ್ಯವಹಾರಗಳ ನೇರ ಲಾಭ ಕಾರ್ತಿ ಚಿದಂಬರಂ ಅವರಿಗೆ ಆಗಿದೆ ಎಂದು ಸಿಬಿಐ ಹೇಳುತ್ತಿದೆ. ಹೀಗಾಗಿ, ಕಾರ್ತಿ ಬೆನ್ನು ಬಿದ್ದಿರುವ ಸಿಬಿಐ, ಅವರಿಗೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳ ಬಗ್ಗೆ ತನಿಖೆ ಆರಂಭಿಸಿತ್ತು. ಅದರಲ್ಲೊಂದು ಏರ್ ಸೆಲ್ - ಮ್ಯಾಕ್ಸಿಕ್ ಅವ್ಯವಹಾರವೂ ಒಂದು.
ಕಳೆದ ವರ್ಷ ಆಗಸ್ಟ್ ನಲ್ಲೂ ಕಾರ್ತಿಗೆ ಸಂಬಂಧಪಟ್ಟ ಕಂಪನಿಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಆಗ, ಅಡ್ವಾಂಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಂಟ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಇತರ ಕಂಪನಿಗಳ ಮೇಲೂ ದಾಳಿ ನಡೆದಿತ್ತು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications