ಅಮ್ಮ ರಿಟರ್ನ್ಸ್, ತಮಿಳುನಾಡಿನಲ್ಲಿ ಎಐಎಡಿಎಂಕೆ ದಾಖಲೆ
ಚೆನ್ನೈ, ಮೇ19 : ತಮಿಳುನಾಡಿನಲ್ಲಿ ಮತ್ತೊಮ್ಮೆ ಎಐಎಡಿಎಂಕೆ ಅಧಿಕಾರ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. 'ಅಮ್ಮ' ಜಯಲಲಿತಾ ಅಧಿಕಾರಕ್ಕೆ ಮತ್ತೆ ಮರಳಿದ್ದಾರೆ. ಈ ಮೂಲಕ ಎಲ್ಲಾ ಸಮೀಕ್ಷೆಗಳ ಫಲಿತಾಂಶವನ್ನು ಧೂಳಿಪಟ ಮಾಡಿ, ದಾಖಲೆಯ ಜಯ ದಾಖಲಿಸಿದ್ದಾರೆ.[ವಿಜಯೋತ್ಸಾಹದ ಚಿತ್ರಗಳು]
234 ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರ ಬಿಟ್ಟು ಮಿಕ್ಕ ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರ ಬಂದಿದ್ದು, ಎಡಿಎಂಕೆ 151ಕ್ಕೂ ಅಧಿಕ ಸ್ಥಾನದಲ್ಲಿ ಜಯಭೇರಿ ಬಾರಿಸಲು ಸಜ್ಜಾಗಿದೆ. ಡಿಎಂಕೆ ಪ್ಲಸ್ 76ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದು, ಜಯಾ ಮುಂದೆ ಕರುಣಾನಿಧಿ ತಲೆಬಾಗಿಸುವಂತಾಗಿದೆ. [ಜಯಮ್ಮನ 1 ರು. ಇಡ್ಲಿ ಸಾಂಬಾರಿಗೆ ಮರುಳಾದ ಮತದಾರರು]

ಐತಿಹಾಸಿಕ ಜಯ: 1984ರ ನಂತರ ಇದೇ ಮೊದಲ ಬಾರಿಗೆ ಎರಡನೇ ಅವಧಿಗೆ ಎಐಎಡಿಎಂಕೆ ಅಧಿಕಾರ ಹಿಡಿಯುವ ಮೂಲಕ ದಾಖಲೆ ಬರೆದಿದೆ. ಡಿಎಂಕೆ ಪರ ಬಂದಿದ್ದ ಎಲ್ಲಾ ಸಮೀಕ್ಷೆ ವರದಿಗಳನ್ನು ಅಮ್ಮ ಹವಾ ಸುನಾಮಿಯಂತೆ ಕೊಚ್ಚಿ ಹೊರಕ್ಕೆ ಹಾಕಿವೆ.[ಹಗರಣಗಳ ನಡುವೆಯೂ ಗಹಗಹಿಸಿದ ಮಮತಾ ಬ್ಯಾನರ್ಜಿ]
ಅಮ್ಮ ಗೆಲುವಿಗೆ ಏನು ಕಾರಣ?: ಮಹಿಳಾ ಮತದಾರರು ಜಯಲಲಿತಾ ಅವರ ಕೈಹಿಡಿದಿದ್ದೇ ಪಕ್ಷದ ಗೆಲುವಿಗೆ ಕಾರಣವಾಗಿದೆ. ಎಐಎಡಿಎಂಕೆ ನಿರೀಕ್ಷೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಮತ ಹಾಕಿದ್ದಾರೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಸಿಕ್ಕಿದೆ. ತನ್ನ ವೋಟ್ ಬ್ಯಾಂಕ್ ಉಳಿಸಿಕೊಳ್ಳುವ ಜಯಾ ಅವರ ತಂತ್ರ ಫಲಿಸಿದೆ.
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ, ಕೋರ್ಟ್ ಕಚೇರಿ ಎಂದು ಜಯಲಲಿತಾ ಅವರು ಹೆಚ್ಚಾಗಿ ಸಾರ್ವಜನಿಕ ಸಭೆಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಜಯಾ ಕರುಣಿಸಿದ ಜನಪ್ರಿಯ ಯೋಜನೆಗಳು ಕೂಡಾ ಗೇಲಿಗೆ ಒಳಗಾಗಿತ್ತು.
ಚೆನ್ನೈ ಪ್ರವಾಹ ಸಂದರ್ಭದಲ್ಲಿ ಅಗತ್ಯ ನೆರವು ನೀಡಿಲ್ಲ ಎಂಬ ದೂರು ಕೇಳಿ ಬಂದಿತ್ತು. ಆದರೆ, ಜಯಾರನ್ನು ಮತ್ತೆ ಅಧಿಕಾರಕ್ಕೆ ಕರೆ ತಂದಿದ್ದು ಇದೇ ಪ್ರವಾಹ ಎಂದರೆ ತಪ್ಪಾಗಲಾರದು. ಕಾದು ನೋಡುವ ತಂತ್ರದ ಮೂಲಕ ಜಯಾ ಅವರ ತಾಳ್ಮೆ ಫಲ ನೀಡಿದೆ.
ಜಯಲಲಿತಾ ಅವರ ಹಗರಣ, ಕೇಸ್ ಗಳ ಬಗ್ಗೆ ಕರ್ನಾಟಕ ಬಿಟ್ಟರೆ ಯಾರೂ ತಲೆಕೆಡಿಸಿಕೊಂಡಂತೆ ಕಾಣಲಿಲ್ಲ. ಜನರಿಗೆ ಡಿಎಂಕೆ ಮೇಲೆ ಯಾವ ರೀತಿಯ ನಂಬಿಕೆಯೂ ಹುಟ್ಟಲಿಲ್ಲ. ಸಿಎಂ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೂ ಆ ಪಕ್ಷದಲ್ಲಿ ಸರಿಯಾದ ಉತ್ತರವಿಲ್ಲ. ಹೀಗಾಗಿ ಜಯಾ ಮತ್ತೆ ಜಯಭೇರಿ ಬಾರಿಸಿದ್ದಾರೆ. (ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications