1 ರು ಇಡ್ಲಿ 'ಅಜ್ಜಿ' ಬಾಳಲ್ಲಿ ಬೆಳಕು ಮೂಡಿಸಿದ ಆನಂದ್ ಮಹೀಂದ್ರಾ ಟ್ವೀಟ್
ಚೆನ್ನೈ, ಸೆ. 12: ತಮಿಳುನಾಡಿನ 80 ವರ್ಷ ವಯಸ್ಸಿನ ಅಜ್ಜಿಯೊಬ್ಬರ ಬಾಳಲ್ಲಿ ಉದ್ಯಮಿ ಆನಂದ್ ಮಹೀಂದ್ರಾ ಮಾಡಿದ ಟ್ವೀಟ್ ಇಂದು ಬೆಳಕು ಮೂಡಿಸಿದೆ. ಕಳೆದ 30 ವರ್ಷಗಳಿಂದ 1 ರು ಗಳಿಗೆ 1 ಇಡ್ಲಿಯಂತೆ ಮಾರಾಟ ಮಾಡುತ್ತಾ ಬಡವರ, ದುರ್ಬಲರ ಪಾಲಿಗೆ 'ಆನ್ನಪೂರ್ಣೆ' ಯಾಗಿದ್ದ ಅಜ್ಜಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅಗತ್ಯವಿದೆ ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.
ಕಟ್ಟಿಗೆ ಬಳಸಿ ಅಡುಗೆ ಮಾಡುವ ಅಜ್ಜಿ ಕಮಲಾತಾಳ್ ಅವರ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಬಂದಿದ್ದ ಪರಿಚಯಾತ್ಮಕ ವಿಡಿಯೋವೊಂದನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದರು.
ಜೊತೆಗೆ ಆಕೆ ಬಳಸುವ ಕಟ್ಟಿಗೆ ಅಡುಗೆ ವಿಧಾನ ಬದಲಾಯಿಸಬೇಕಿದೆ. ಯಾರಾದರೂ ಆಕೆಯ ಬಗ್ಗೆ ತಿಳಿದಿದ್ದಾರೆ ನನಗೆ ತಿಳಿಸಿ, ನಾನು ಆಕೆಯ ಉದ್ಯಮದಲ್ಲಿ ಹೂಡಿಕೆ ಮಾಡಲು ಉತ್ಸುಕನಾಗಿದ್ದೇನೆ. ಆಕೆಗೆ ಎಲ್ ಪಿಜಿ ಸ್ಟವ್ ನೀಡಬೇಕಿದೆ ಎಂದು ಸೆಪ್ಟೆಂಬರ್ 10ರಂದು ಟ್ವೀಟ್ ಮಾಡಿದ್ದರು.
ಕಮಲಾಪಾಟಿ(ಕಮಲಾ ಅಜ್ಜಿ) ಎಂದೇ ಕೊಯಮತ್ತೂರಿನ ವಡಿವೇಲಂ ಪಾಲಯಂ ಗ್ರಾಮಸ್ಥರಿಗೆ ಚಿರಪರಿಚಿತರಾಗಿದ್ದಾರೆ. ಎಲ್ ಪಿಜಿ ಸ್ಟವ್ ಸಿಕ್ಕ ಬಳಿಕ ಅಜ್ಜಿ ಮೊಗದಲ್ಲೂ ಸಂತಸ ಕಂಡು ಬಂದಿದೆ.
|
ಕಟ್ಟಿಗೆ ಬಳಸಿ ಅಡುಗೆ ಮಾಡುತ್ತಿದ್ದ ಅಜ್ಜಿ
ಕಟ್ಟಿಗೆ ಬಳಸಿ ಅಡುಗೆ ಮಾಡುವ ಅಜ್ಜಿ ಕಮಲಾತಾಳ್ ಅವರ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಬಂದಿದ್ದ ಪರಿಚಯಾತ್ಮಕ ವಿಡಿಯೋವೊಂದನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದರು. ಜೊತೆಗೆ ಆಕೆ ಬಳಸುವ ಕಟ್ಟಿಗೆ ಅಡುಗೆ ವಿಧಾನ ಬದಲಾಯಿಸಬೇಕಿದೆ. ಯಾರಾದರೂ ಆಕೆಯ ಬಗ್ಗೆ ತಿಳಿದಿದ್ದಾರೆ ನನಗೆ ತಿಳಿಸಿ, ನಾನು ಆಕೆಯ ಉದ್ಯಮದಲ್ಲಿ ಹೂಡಿಕೆ ಮಾಡಲು ಉತ್ಸುಕನಾಗಿದ್ದೇನೆ. ಆಕೆಗೆ ಎಲ್ ಪಿಜಿ ಸ್ಟವ್ ನೀಡಬೇಕಿದೆ ಎಂದು ಸೆಪ್ಟೆಂಬರ್ 10ರಂದು ಟ್ವೀಟ್ ಮಾಡಿದ್ದರು.
|
ಸ್ಟವ್ ಕೊಟ್ಟ ಬಿಪಿಸಿಎಲ್
ಆನಂದ್ ಮಹೀಂದ್ರಾ ಟ್ವೀಟ್ ಗೆ ಪ್ರತಿಕ್ರಿಯಿಸಿದ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್, ಅಜ್ಜಿಯನ್ನು ಭೇಟಿ ಮಾಡಿ ಎಲ್ ಪಿ ಜಿ ಸಿಲಿಂಡರ್ ಸ್ಟವ್ ನೀಡಿರುವುದಾಗಿ ಪ್ರತಿಕ್ರಿಯಿಸಿದೆ.
ಎಲ್ ಪಿಜಿ ಕನೆಕ್ಷನ್ ಇರುವ ಸ್ಟವ್ |
ಎಲ್ ಪಿಜಿ ಕನೆಕ್ಷನ್ ಇರುವ ಸ್ಟವ್
ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ಅಧಿಕಾರಿಗಳು ಅಜ್ಜಿಯನ್ನು ಹುಡುಕಿಕೊಂಡು ಬಂದಿದ್ದಾರೆ. ಎಲ್ ಪಿಜಿ ಕನೆಕ್ಷನ್ ಇರುವ ಸ್ಟವ್ ನೀಡಿದ್ದಾರೆ.
|
ಕಮಲಾಪಾಟಿಗೆ ಸಂತಸ
ಕಮಲಾಪಾಟಿ(ಕಮಲಾ ಅಜ್ಜಿ) ಎಂದೇ ಕೊಯಮತ್ತೂರಿನ ವಡಿವೇಲಂ ಪಾಲಯಂ ಗ್ರಾಮಸ್ಥರಿಗೆ ಚಿರಪರಿಚಿತರಾಗಿದ್ದಾರೆ. ಎಲ್ ಪಿಜಿ ಸ್ಟವ್ ಸಿಕ್ಕ ಬಳಿಕ ಅಜ್ಜಿ ಮೊಗದಲ್ಲೂ ಸಂತಸ ಕಂಡು ಬಂದಿದೆ.
ಸ್ಥಳೀಯರ ಪ್ರಕಾರ, ಸುತ್ತಮುತ್ತಲ ಗ್ರಾಮಸ್ಥರು ಊಟದ ಸಮಯಕ್ಕೆ ಸರಿಯಾಗಿ ಅಜ್ಜಿ ಅಂಗಡಿ ಬಳಿಗೆ ಬರುತ್ತಾರೆ. 10 ಇಡ್ಲಿ ತಿಂದು 5 ರು ಕೊಟ್ಟು ಹೋಗುವವರು ಇದ್ದಾರೆ. ದಿನಕ್ಕೆ 1000 ಇಡ್ಲಿ ಮಾಡುವ ಅಜ್ಜಿ ಈ ಮುಂಚೆ 50 ಪೈಸೆ ಒಂದು ಇಡ್ಲಿಯಂತೆ ಮಾರುತ್ತಿದ್ದರು. ಈಗ 1 ರು ನಂತೆ ನೀಡುತ್ತಿದ್ದಾರೆ. ಇಡ್ಲಿ, ವಡೆ, ಬೊಂಡಾ, ಸಾಂಬಾರು, ಚಟ್ನಿ ಮಾರುತ್ತಿದ್ದಾರೆ.

ಬಿಪಿಸಿಎಲ್ ನಿಂದ ಸ್ಟವ್ ಸಿಕ್ಕರೆ
ಬಿಪಿಸಿಎಲ್ ನಿಂದ ಸ್ಟವ್ ಸಿಕ್ಕರೆ, ಎಚ್ ಪಿ ಸಿಎಲ್ ನಿಂದ ತವಾ, ವೆಟ್ ಗ್ರೈಂಡರ್ ನೀಡಲಾಗಿದೆ. ಈ ಬಗ್ಗೆ ಇಂಧನ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಟ್ವೀಟ್ ಮಾಡಿ, ಕಮಲಾತಾಳ್ ರಂಥ ಪರಿಶ್ರಮ ಜೀವಿಗಳಿಗೆ ಒಎಂಸಿ ನೆರವಾಗಿದ್ದಕ್ಕೆ ಸಂತಸವಾಗುತ್ತಿದೆ. ಸಮಾಜ ಇಂಥ ಪರಿಶ್ರಮಿಗಳ ಸಬಲೀಕರಣಕ್ಕೆ ಕೈ ಜೋಡಿಸಬೇಕು ಎಂದಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications