ಚೆನ್ನೈ ಮೃಗಾಲಯದಲ್ಲಿ ಮತ್ತೊಂದು ಸಿಂಹ ಕೋವಿಡ್ಗೆ ಬಲಿ
ಚೆನ್ನೈ, ಜೂ.16: ಚೆನ್ನೈನ ಹೊರವಲಯದಲ್ಲಿರುವ ವಂದಲೂರು ಮೃಗಾಲಯದಲ್ಲಿ ಒಂದು ಗಂಡು ಸಿಂಹವು ಕೋವಿಡ್ -19 ನಿಂದ ಬುಧವಾರ ಬೆಳಿಗ್ಗೆ ಮೃತಪಟ್ಟಿದೆ ಎಂದು ವರದಿಯಾಗಿದೆ. 12 ವರ್ಷದ ಪಥಬನಾಥನ್ ಎಂಬ ಸಿಂಹಕ್ಕೆ ಜೂನ್ 3 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು.
ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ವಂದಲೂರಿನ ಅರಿಗ್ನಾರ್ ಅನ್ನಾ ಝೂಲಾಜಿಕಲ್ ಪಾರ್ಕ್, ''ಜೂನ್ 3 ರಂದು ಕೊರೊನಾ ಸೋಂಕು ದೃಢಪಟ್ಟಿದ್ದ ಸಿಂಹ ಪಥಬನಾಥನ್ ಜೂನ್ 16 ರಂದು ಬೆಳಿಗ್ಗೆ 10: 15 ರ ಸುಮಾರಿಗೆ ಮೃತಪಟ್ಟಿದೆ,'' ಎಂದು ತಿಳಿಸಿದೆ.
ಭೋಪಾಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ (ಎನ್ಐಹೆಚ್ಎಸ್ಎಡಿ) ನ ವರದಿಯ ಪ್ರಕಾರ, ''ಈ ಸಿಂಹದ ಮಾದರಿಯನ್ನು ಪರೀಕ್ಷಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದ್ದು ಆ ಬಳಿಕ ಚಿಕಿತ್ಸೆ ನೀಡಲಾಗಿದೆ. ಆದರೆ ಸಿಂಹ ಸಾವನ್ನಪ್ಪಿದೆ,'' ಎಂದು ಹೇಳಿದೆ.

ಪಥಬನಾಥನ್ ಈ ವೈರಸ್ಗೆ ಬಲಿಯಾದ ಎರಡನೇ ಏಷ್ಯಾಟಿಕ್ ಸಿಂಹ. ಒಂಬತ್ತು ವರ್ಷದ ಹೆಣ್ಣು ಸಿಂಹ ಜೂನ್ 3 ರಂದು ಮೃಗಾಲಯದಲ್ಲಿ ಸಾವನ್ನಪ್ಪಿದೆ. ಹೈದರಾಬಾದ್ನಲ್ಲಿನ ನೆಹರೂ ಮೃಗಾಲಯದಲ್ಲಿನ ಎಂಟು ಸಿಂಹಗಳಿಗೆ ಕೊರೊನಾ ಸೋಂಕು ತಗುಲಿತ್ತು. ಭಾರತದಲ್ಲಿ ಮೊದಲ ಬಾರಿಗೆ ಪ್ರಾಣಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು.
ಮೇ 26 ರಂದು ವಂದಲೂರಿನ ಮೃಗಾಲಯವು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಮೃಗಾಲಯದ ಸಫಾರಿ ಪಾರ್ಕ್ ಪ್ರದೇಶದಲ್ಲಿ ಐದು ಸಿಂಹಗಳನ್ನು ಇರಿಸಲಾಗಿದ್ದು, ಆ ಸಿಂಹಗಳಿಗೆ ಹಸಿವು ಕಡಿಮೆ, ಆಗಾಗೇ ಕೆಮ್ಮು ಕಂಡುಬಂದಿದೆ. ತಕ್ಷಣ ಮೃಗಾಲಯಕ್ಕೆ ಪಶುವೈದ್ಯಕೀಯ ತಂಡವು ಬಂದು 11 ಸಿಂಹಗಳ ರಕ್ತದ ಮಾದರಿಗಳು, ಮೂಗಿನ ಸ್ವ್ಯಾಬ್, ಗುದನಾಳದ ಸ್ವ್ಯಾಬ್ ಮತ್ತು ಮಲ ಮಾದರಿಗಳನ್ನು ಸಂಗ್ರಹಿಸಿ ಮಧ್ಯಪ್ರದೇಶದ ಭೋಪಾಲ್ನ ರಾಷ್ಟ್ರೀಯ ಭದ್ರತಾ ರೋಗಗಳ ಸಂಸ್ಥೆಗೆ (ಎನ್ಐಎಚ್ಎಸ್ಎಡಿ) ಕಳುಹಿಸಿತ್ತು. ಈ 11 ಮಾದರಿಗಳಲ್ಲಿ ಒಂಬತ್ತು ಮಾದರಿಗಳು ಪಾಸಿಟಿವ್ ಆಗಿದ್ದವು.
ಸಿಂಹಗಳಿಗೆ ಕೊರೊನಾ ದೃಢಪಟ್ಟಿದೆ ಎಂಬ ವರದಿಗಳ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಬುಧವಾರ ವಂದಲೂರಿನ ಅರಿಗ್ನಾರ್ ಅನ್ನಾ ಝೂಲಾಜಿಕಲ್ ಪಾರ್ಕ್ಗೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಸೋಂಕಿತ ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ರೋಗ ನಿರೋಧಕ ಔಷಧಿಗಳನ್ನು ನೀಡಲಾಗುತ್ತಿದೆ.
ಸೋಂಕಿತ ಸಿಂಹಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಪರಿಸರ ಮತ್ತು ಅರಣ್ಯ ಇಲಾಖೆ ಮತ್ತು ಮೃಗಾಲಯದ ಅಧಿಕಾರಿಗಳಿಗೆ ತಮಿಳುನಾಡಿನ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಂ.ಕೆ.ಸ್ಟಾಲಿನ್ ನಿರ್ದೇಶನ ನೀಡಿದರು.
(ಒನ್ಇಂಡಿಯಾ ಸುದ್ದಿ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications